AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Sudharsan: ಚೊಚ್ಚಲ ಪಂದ್ಯದಲ್ಲೇ ದಾಖಲೆ ಪಟ್ಟಿ ಸೇರಿದ ಸಾಯಿ ಸುದರ್ಸನ್

Sai Sudharsan Record: ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿರುವುದು ಕೇವಲ ಮೂವರು ಆರಂಭಿಕರು ಮಾತ್ರ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ರಾಬಿನ್ ಉತ್ತಪ್ಪ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್|

Updated on:Dec 18, 2023 | 8:03 AM

Share
ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ಟೀಮ್ ಇಂಡಿಯಾ ಎಡಗೈ ದಾಂಡಿಗ ಸಾಯಿ ಸುದರ್ಸನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ.

ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ್ದ ಟೀಮ್ ಇಂಡಿಯಾ ಎಡಗೈ ದಾಂಡಿಗ ಸಾಯಿ ಸುದರ್ಸನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಚೊಚ್ಚಲ ಪಂದ್ಯದಲ್ಲೇ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಸನ್ 43 ಎಸೆತಗಳಲ್ಲಿ 9 ಫೋರ್​ಗಳೊಂದಿಗೆ 55 ರನ್ ಬಾರಿಸಿದ್ದರು. ಇದರೊಂದಿಗೆ ಪಾದಾರ್ಪಣೆ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ ಟೀಮ್ ಇಂಡಿಯಾ ಆರಂಭಿಕರ ಪಟ್ಟಿಗೆ ಸಾಯಿ ಹೆಸರು ಸೇರ್ಪಡೆಯಾಯಿತು.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಸನ್ 43 ಎಸೆತಗಳಲ್ಲಿ 9 ಫೋರ್​ಗಳೊಂದಿಗೆ 55 ರನ್ ಬಾರಿಸಿದ್ದರು. ಇದರೊಂದಿಗೆ ಪಾದಾರ್ಪಣೆ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ ಟೀಮ್ ಇಂಡಿಯಾ ಆರಂಭಿಕರ ಪಟ್ಟಿಗೆ ಸಾಯಿ ಹೆಸರು ಸೇರ್ಪಡೆಯಾಯಿತು.

2 / 7
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿರುವುದು ಕೇವಲ ಮೂವರು ಆರಂಭಿಕರು ಮಾತ್ರ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ರಾಬಿನ್ ಉತ್ತಪ್ಪ ಎಂಬುದು ವಿಶೇಷ.

ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿರುವುದು ಕೇವಲ ಮೂವರು ಆರಂಭಿಕರು ಮಾತ್ರ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕನ್ನಡಿಗ ರಾಬಿನ್ ಉತ್ತಪ್ಪ ಎಂಬುದು ವಿಶೇಷ.

3 / 7
2006 ರಲ್ಲಿ ಇಂಗ್ಲೆಂಡ್​ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಕೊಡಗಿನ ಕುವರ ರಾಬಿನ್ ಉತ್ತಪ್ಪ 86 ರನ್ ಬಾರಿಸಿ ಮಿಂಚಿದ್ದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಚೊಚ್ಚಲ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ ಭಾರತದ ಮೊದಲ ಆರಂಭಿಕ ಆಟಗಾರ ಎಂಬ ದಾಖಲೆ ಉತ್ತಪ್ಪ ಪಾಲಾಯಿತು.

2006 ರಲ್ಲಿ ಇಂಗ್ಲೆಂಡ್​ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಕೊಡಗಿನ ಕುವರ ರಾಬಿನ್ ಉತ್ತಪ್ಪ 86 ರನ್ ಬಾರಿಸಿ ಮಿಂಚಿದ್ದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಚೊಚ್ಚಲ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ ಭಾರತದ ಮೊದಲ ಆರಂಭಿಕ ಆಟಗಾರ ಎಂಬ ದಾಖಲೆ ಉತ್ತಪ್ಪ ಪಾಲಾಯಿತು.

4 / 7
ಇದಾದ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಕನ್ನಡಿಗ ಕೆಎಲ್ ರಾಹುಲ್. 2016 ರಲ್ಲಿ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ್ದ ಕೆಎಲ್ ರಾಹುಲ್ ಅಜೇಯ ಶತಕ ಬಾರಿಸಿ ಮಿಂಚಿದ್ದರು. ಈ ಮೂಲಕ ಭಾರತದ ಪರ ಚೊಚ್ಚಲ ಏಕದಿನ ಪಂದ್ಯದಲ್ಲೇ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಕೆಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದರು.

ಇದಾದ ಬಳಿಕ ಈ ಸಾಧನೆ ಮಾಡಿದ 2ನೇ ಬ್ಯಾಟರ್ ಕನ್ನಡಿಗ ಕೆಎಲ್ ರಾಹುಲ್. 2016 ರಲ್ಲಿ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪಾದರ್ಪಣೆ ಮಾಡಿದ್ದ ಕೆಎಲ್ ರಾಹುಲ್ ಅಜೇಯ ಶತಕ ಬಾರಿಸಿ ಮಿಂಚಿದ್ದರು. ಈ ಮೂಲಕ ಭಾರತದ ಪರ ಚೊಚ್ಚಲ ಏಕದಿನ ಪಂದ್ಯದಲ್ಲೇ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಕೆಎಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದರು.

5 / 7
ಇನ್ನು ಈ ಸಾಧನೆ ಮಾಡಿದ ಮೂರನೇ ಬ್ಯಾಟರ್ ಫೈಝ್ ಫಝಲ್. 2016 ರಲ್ಲಿ ಝಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಚೊಚ್ಚಲ ಪಂದ್ಯವಾಡಿದ್ದ ಫಝಲ್ 55 ರನ್​ಗಳ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಮೂಲಕ ಮೊದಲ ಏಕದಿನ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದರು.

ಇನ್ನು ಈ ಸಾಧನೆ ಮಾಡಿದ ಮೂರನೇ ಬ್ಯಾಟರ್ ಫೈಝ್ ಫಝಲ್. 2016 ರಲ್ಲಿ ಝಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಚೊಚ್ಚಲ ಪಂದ್ಯವಾಡಿದ್ದ ಫಝಲ್ 55 ರನ್​ಗಳ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಮೂಲಕ ಮೊದಲ ಏಕದಿನ ಪಂದ್ಯದಲ್ಲೇ 50+ ಸ್ಕೋರ್​ಗಳಿಸಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದರು.

6 / 7
ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಜೇಯ 55 ರನ್ ಬಾರಿಸುವ ಮೂಲಕ ಸಾಯಿ ಸುದರ್ಸನ್ ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಆರಂಭಿಕ ಆಟಗಾರ ಎನಿಸಿಕೊಂಡಿದ್ದಾರೆ.

ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಜೇಯ 55 ರನ್ ಬಾರಿಸುವ ಮೂಲಕ ಸಾಯಿ ಸುದರ್ಸನ್ ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಆರಂಭಿಕ ಆಟಗಾರ ಎನಿಸಿಕೊಂಡಿದ್ದಾರೆ.

7 / 7

Published On - 8:03 am, Mon, 18 December 23

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು