AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ನಲ್ಲಿ ಬುಮ್ರಾ ವಿರುದ್ಧ ಅಬ್ಬರಿಸಿದ್ದು ಮೂವರು ಮಾತ್ರ, ಅವರೆಂದರೆ…

Jasprit Bumrah: ಭಾರತ ಕ್ರಿಕೆಟ್ ತಂಡದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ವಿಶ್ವ ಕ್ರಿಕೆಟ್‌ನಲ್ಲಿ ನಿರ್ವಿವಾದವಾಗಿ ಪ್ರಾಬಲ್ಯ ಹೊಂದಿದ್ದಾರೆ. ಈ ಅಪಾಯಕಾರಿ ಬೌಲರ್‌ನನ್ನು ಎದುರಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಮೂರು ಸ್ವರೂಪಗಳಲ್ಲೂ ಕರಾರುವಾಕ್ ದಾಳಿ ಸಂಘಟಿಸುತ್ತಾ ಬಂದಿರುವ ಬುಮ್ರಾ ವಿರುದ್ಧ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಅಬ್ಬರಿಸಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Dec 26, 2024 | 2:09 PM

Share
ಜಸ್​ಪ್ರೀತ್ ಬುಮ್ರಾ... ಪ್ರಸ್ತುತ ಟೆಸ್ಟ್ ಕ್ರಿಕೆಟ್​ನ ನಂಬರ್ 1 ಬೌಲರ್​. ಈ ನಂಬರ್​ ಒನ್ ಪಟ್ಟದ ಹೊರತಾಗಿಯೂ ಆಸ್ಟ್ರೇಲಿಯಾದ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಬುಮ್ರಾ ಓವರ್​​ಗಳಲ್ಲಿ ಅಬ್ಬರಿಸಿದ್ದಾರೆ. ಈ ಸಿಡಿಲಬ್ಬರದೊಂದಿಗೆ ಬುಮ್ರಾ ಅವರ ಟೆಸ್ಟ್ ಸ್ಪೆಲ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಜಸ್​ಪ್ರೀತ್ ಬುಮ್ರಾ... ಪ್ರಸ್ತುತ ಟೆಸ್ಟ್ ಕ್ರಿಕೆಟ್​ನ ನಂಬರ್ 1 ಬೌಲರ್​. ಈ ನಂಬರ್​ ಒನ್ ಪಟ್ಟದ ಹೊರತಾಗಿಯೂ ಆಸ್ಟ್ರೇಲಿಯಾದ ಯುವ ದಾಂಡಿಗ ಸ್ಯಾಮ್ ಕೊನ್​ಸ್ಟಾಸ್ ಬುಮ್ರಾ ಓವರ್​​ಗಳಲ್ಲಿ ಅಬ್ಬರಿಸಿದ್ದಾರೆ. ಈ ಸಿಡಿಲಬ್ಬರದೊಂದಿಗೆ ಬುಮ್ರಾ ಅವರ ಟೆಸ್ಟ್ ಸ್ಪೆಲ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 5
ಜಸ್​ಪ್ರೀತ್ ಬುಮ್ರಾ ಅವರ ಎಸೆತಗಳನ್ನು ಗುರುತಿಸಿಕೊಳ್ಳುವುದು  ಯಾವುದೇ ಬ್ಯಾಟ್ಸ್‌ಮನ್‌ಗೆ ಸುಲಭವಲ್ಲ. ಆದಾಗ್ಯೂ, ಈ ಬೌಲರ್ ವಿರುದ್ಧ ಕೆಲ ಬ್ಯಾಟರ್​ಗಳು ಮಾತ್ರ ಮಿಂಚಿದ್ದಾರೆ. ಹೀಗೆ ಬುಮ್ರಾ ಅವರನ್ನು ಲೀಲಾಜಾಲವಾಗಿ ಎದುರಿಸಿದ ವಿಶ್ವದ ಮೂವರು ಬ್ಯಾಟರ್​​ಗಳನ್ನು ನೋಡುವುದಾದರೆ...

ಜಸ್​ಪ್ರೀತ್ ಬುಮ್ರಾ ಅವರ ಎಸೆತಗಳನ್ನು ಗುರುತಿಸಿಕೊಳ್ಳುವುದು ಯಾವುದೇ ಬ್ಯಾಟ್ಸ್‌ಮನ್‌ಗೆ ಸುಲಭವಲ್ಲ. ಆದಾಗ್ಯೂ, ಈ ಬೌಲರ್ ವಿರುದ್ಧ ಕೆಲ ಬ್ಯಾಟರ್​ಗಳು ಮಾತ್ರ ಮಿಂಚಿದ್ದಾರೆ. ಹೀಗೆ ಬುಮ್ರಾ ಅವರನ್ನು ಲೀಲಾಜಾಲವಾಗಿ ಎದುರಿಸಿದ ವಿಶ್ವದ ಮೂವರು ಬ್ಯಾಟರ್​​ಗಳನ್ನು ನೋಡುವುದಾದರೆ...

2 / 5
ಸ್ಯಾಮ್ ಕೊನ್​ಸ್ಟಾಸ್ (2024): ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿರುವ ಸ್ಯಾಮ್ ಕೊನ್​ಸ್ಟಾಸ್ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ವಿರುದ್ಧ ಅಕ್ಷರಶಃ ಅಬ್ಬರಿಸಿದ್ದರು. ಈ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಬುಮ್ರಾ ಎಸೆದ ಮೊದಲ ಸ್ಪೆಲ್​ನಲ್ಲಿ 34 ಎಸೆತಗಳನ್ನು ಎದುರಿಸಿದ ಸ್ಯಾಮ್ ಬರೋಬ್ಬರಿ 33 ರನ್​ ಚಚ್ಚಿದರು. ಅದರಲ್ಲೂ ಒಂದು ಓವರ್​ನಲ್ಲಿ 14 ರನ್ ಬಾರಿಸಿದ್ದ ಸ್ಯಾಮ್ ಮತ್ತೊಂದು ಓವರ್​ನಲ್ಲಿ 18 ರನ್ ಸಿಡಿಸಿದ್ದು ವಿಶೇಷ.

ಸ್ಯಾಮ್ ಕೊನ್​ಸ್ಟಾಸ್ (2024): ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿರುವ ಸ್ಯಾಮ್ ಕೊನ್​ಸ್ಟಾಸ್ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ವಿರುದ್ಧ ಅಕ್ಷರಶಃ ಅಬ್ಬರಿಸಿದ್ದರು. ಈ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಬುಮ್ರಾ ಎಸೆದ ಮೊದಲ ಸ್ಪೆಲ್​ನಲ್ಲಿ 34 ಎಸೆತಗಳನ್ನು ಎದುರಿಸಿದ ಸ್ಯಾಮ್ ಬರೋಬ್ಬರಿ 33 ರನ್​ ಚಚ್ಚಿದರು. ಅದರಲ್ಲೂ ಒಂದು ಓವರ್​ನಲ್ಲಿ 14 ರನ್ ಬಾರಿಸಿದ್ದ ಸ್ಯಾಮ್ ಮತ್ತೊಂದು ಓವರ್​ನಲ್ಲಿ 18 ರನ್ ಸಿಡಿಸಿದ್ದು ವಿಶೇಷ.

3 / 5
ಅಲಸ್ಟೇರ್ ಕುಕ್ (2018): ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲಸ್ಟೇರ್ ಕುಕ್ ಕೂಡ ಬುಮ್ರಾ ಓವರ್​ಗಳಲ್ಲಿ ಅಬ್ಬರಿಸಿದ ಇತಿಹಾಸ ಹೊಂದಿದ್ದಾರೆ. 2018 ರಲ್ಲಿ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಎಸೆದ ಮೊದಲ ಸ್ಪೆಲ್​ನಲ್ಲಿ ಕುಕ್ 40 ಎಸೆತಗಳಲ್ಲಿ 25 ರನ್ ಬಾರಿಸಿದ್ದರು.

ಅಲಸ್ಟೇರ್ ಕುಕ್ (2018): ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲಸ್ಟೇರ್ ಕುಕ್ ಕೂಡ ಬುಮ್ರಾ ಓವರ್​ಗಳಲ್ಲಿ ಅಬ್ಬರಿಸಿದ ಇತಿಹಾಸ ಹೊಂದಿದ್ದಾರೆ. 2018 ರಲ್ಲಿ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಎಸೆದ ಮೊದಲ ಸ್ಪೆಲ್​ನಲ್ಲಿ ಕುಕ್ 40 ಎಸೆತಗಳಲ್ಲಿ 25 ರನ್ ಬಾರಿಸಿದ್ದರು.

4 / 5
ಫಾಫ್ ಡುಪ್ಲೆಸಿಸ್ (2018): ಈ ಪಟ್ಟಿಯಲ್ಲಿ ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಫಾಫ್ ಡುಪ್ಲೆಸಿಸ್ ಮೂರನೇ ಸ್ಥಾನದಲ್ಲಿದ್ದಾರೆ. 2018 ರಲ್ಲಿ ಕೇಪ್ ಟೌನ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಎಸೆದ ಒಂದೇ ಸ್ಪೆಲ್​ನಲ್ಲಿ ಫಾಫ್ 18 ಎಸೆತಗಳಲ್ಲಿ 23 ರನ್ ಬಾರಿಸಿ ಅಬ್ಬರಿಸಿದ್ದರು. ಈ ಮೂವರನ್ನು ಹೊರತುಪಡಿಸಿ ಟೆಸ್ಟ್​ನಲ್ಲಿ ಜಸ್​ಪ್ರೀತ್ ಬುಮ್ರಾ ಅವರ ಒಂದೇ ಸ್ಪೆಲ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲು ಯಾರಿಂದಲೂ ಸಾಧ್ಯವಾಗಿಲ್ಲ ಎಂಬುದು ವಿಶೇಷ.

ಫಾಫ್ ಡುಪ್ಲೆಸಿಸ್ (2018): ಈ ಪಟ್ಟಿಯಲ್ಲಿ ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಫಾಫ್ ಡುಪ್ಲೆಸಿಸ್ ಮೂರನೇ ಸ್ಥಾನದಲ್ಲಿದ್ದಾರೆ. 2018 ರಲ್ಲಿ ಕೇಪ್ ಟೌನ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಎಸೆದ ಒಂದೇ ಸ್ಪೆಲ್​ನಲ್ಲಿ ಫಾಫ್ 18 ಎಸೆತಗಳಲ್ಲಿ 23 ರನ್ ಬಾರಿಸಿ ಅಬ್ಬರಿಸಿದ್ದರು. ಈ ಮೂವರನ್ನು ಹೊರತುಪಡಿಸಿ ಟೆಸ್ಟ್​ನಲ್ಲಿ ಜಸ್​ಪ್ರೀತ್ ಬುಮ್ರಾ ಅವರ ಒಂದೇ ಸ್ಪೆಲ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಲು ಯಾರಿಂದಲೂ ಸಾಧ್ಯವಾಗಿಲ್ಲ ಎಂಬುದು ವಿಶೇಷ.

5 / 5
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ