AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೋಟಕ ತ್ರಿಶತಕ ಸಿಡಿಸಿ ಅಬ್ಬರಿಸಿದ CSK ತಂಡದ ಯುವ ದಾಂಡಿಗ

Sameer Rizvi: ಉತ್ತರ ಪ್ರದೇಶ ಮೂಲದ ಸಮೀರ್ ರಿಝ್ವಿ ಈ ಬಾರಿಯ ಐಪಿಎಲ್ ಹರಾಜಿನಲ್ಲಿ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದರು. ಯುವ ಆಟಗಾರನ ಖರೀದಿಗೆ ಬಹುತೇಕ ಫ್ರಾಂಚೈಸಿಗಳು ಆಸಕ್ತಿ ತೋರಿಸಿದ್ದವು. ಅಂತಿಮವಾಗಿ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಬರೋಬ್ಬರಿ 8.40 ಕೋಟಿ ರೂ.ಗೆ ನೀಡಿ ಯುವ ಬ್ಯಾಟರ್​ನನ್ನು ತನ್ನದಾಗಿಸಿಕೊಂಡಿದೆ.

TV9 Web
| Edited By: |

Updated on:Feb 26, 2024 | 1:33 PM

Share
ದೇಶೀಯ ಅಂಗಳದಲ್ಲಿ ನಡೆಯುತ್ತಿರುವ 23 ವರ್ಷದೊಳಗಿನವರ ಸಿಕೆ ನಾಯ್ದು ಟ್ರೋಫಿ ಪಂದ್ಯಾವಳಿಯಲ್ಲಿ ಯುವ ಬ್ಯಾಟರ್ ಸಮೀರ್ ರಿಝ್ವಿ ಸ್ಪೋಟಕ ದ್ವಿಶತಕ ಬಾರಿಸಿ ಅಬ್ಬರಿಸಿದ್ದಾರೆ. ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಕ್ವಾರ್ಟರ್ ಫೈನಲ್​ ಪಂದ್ಯದಲ್ಲಿ ಉತ್ತರ ಪ್ರದೇಶ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದೆ.

ದೇಶೀಯ ಅಂಗಳದಲ್ಲಿ ನಡೆಯುತ್ತಿರುವ 23 ವರ್ಷದೊಳಗಿನವರ ಸಿಕೆ ನಾಯ್ದು ಟ್ರೋಫಿ ಪಂದ್ಯಾವಳಿಯಲ್ಲಿ ಯುವ ಬ್ಯಾಟರ್ ಸಮೀರ್ ರಿಝ್ವಿ ಸ್ಪೋಟಕ ದ್ವಿಶತಕ ಬಾರಿಸಿ ಅಬ್ಬರಿಸಿದ್ದಾರೆ. ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಕ್ವಾರ್ಟರ್ ಫೈನಲ್​ ಪಂದ್ಯದಲ್ಲಿ ಉತ್ತರ ಪ್ರದೇಶ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಉತ್ತರ ಪ್ರದೇಶ ತಂಡದ ಪರ ನಾಯಕ ಸಮೀರ್ ರಿಝ್ವಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ರಿಝ್ವಿ ಸೌರಾಷ್ಟ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದರು. ಪರಿಣಾಮ ಮೊದಲ ದಿನದಾಟದಲ್ಲೇ ರಿಝ್ವಿ ಬ್ಯಾಟ್​ನಿಂದ 134 ರನ್ ಮೂಡಿಬಂತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಉತ್ತರ ಪ್ರದೇಶ ತಂಡದ ಪರ ನಾಯಕ ಸಮೀರ್ ರಿಝ್ವಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ರಿಝ್ವಿ ಸೌರಾಷ್ಟ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದರು. ಪರಿಣಾಮ ಮೊದಲ ದಿನದಾಟದಲ್ಲೇ ರಿಝ್ವಿ ಬ್ಯಾಟ್​ನಿಂದ 134 ರನ್ ಮೂಡಿಬಂತು.

2 / 5
ಇನ್ನು 2ನೇ ಸಮೀರ್ ರಿಝ್ವಿ ತಮ್ಮ ಸಿಡಿಲಬ್ಬರವನ್ನು ಮುಂದುವರೆಸಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈಯುವ ಮೂಲಕ ಕೇವಲ 165 ಎಸೆತಗಳಲ್ಲಿ ಭರ್ಜರಿ ದ್ವಿಶತಕ ಪೂರೈಸಿದರು. ಇನ್ನು ದ್ವಿಶತಕ ನಂತರದ ತುಸು ಹೊತ್ತು ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರಿಝ್ವಿ ಮತ್ತೆ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದರು.

ಇನ್ನು 2ನೇ ಸಮೀರ್ ರಿಝ್ವಿ ತಮ್ಮ ಸಿಡಿಲಬ್ಬರವನ್ನು ಮುಂದುವರೆಸಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈಯುವ ಮೂಲಕ ಕೇವಲ 165 ಎಸೆತಗಳಲ್ಲಿ ಭರ್ಜರಿ ದ್ವಿಶತಕ ಪೂರೈಸಿದರು. ಇನ್ನು ದ್ವಿಶತಕ ನಂತರದ ತುಸು ಹೊತ್ತು ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ರಿಝ್ವಿ ಮತ್ತೆ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದರು.

3 / 5
ಅತ್ತ ಡಬಲ್​ ಸೆಂಚುರಿ ಬಳಿಕ ಕೂಡ ರಿಝ್ವಿಯ ಅಬ್ಬರನ್ನು ತಡೆಯಲು ಸೌರಾಷ್ಟ್ರ ಬೌಲರ್​ಗಳಿಗೆ ಸಾಧ್ಯವಾಗಲಿಲ್ಲ. ಪರಿಣಾಮ ಕೇವಲ 260 ಎಸೆತಗಳಲ್ಲಿ 12 ಭರ್ಜರಿ ಸಿಕ್ಸ್ ಹಾಗೂ 33 ಫೋರ್​ಗಳೊಂದಿಗೆ ತ್ರಿಶತಕ ಸಿಡಿಸಿದರು. ಸಮೀರ್ ರಿಝ್ವಿಯ (312) ಈ ಸ್ಪೋಟಕ ತ್ರಿಶತಕದ ನೆರವಿನಿಂದ ಉತ್ತರ ಪ್ರದೇಶ ತಂಡ 6 ವಿಕೆಟ್ ನಷ್ಟಕ್ಕೆ 680* ರನ್​ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ.

ಅತ್ತ ಡಬಲ್​ ಸೆಂಚುರಿ ಬಳಿಕ ಕೂಡ ರಿಝ್ವಿಯ ಅಬ್ಬರನ್ನು ತಡೆಯಲು ಸೌರಾಷ್ಟ್ರ ಬೌಲರ್​ಗಳಿಗೆ ಸಾಧ್ಯವಾಗಲಿಲ್ಲ. ಪರಿಣಾಮ ಕೇವಲ 260 ಎಸೆತಗಳಲ್ಲಿ 12 ಭರ್ಜರಿ ಸಿಕ್ಸ್ ಹಾಗೂ 33 ಫೋರ್​ಗಳೊಂದಿಗೆ ತ್ರಿಶತಕ ಸಿಡಿಸಿದರು. ಸಮೀರ್ ರಿಝ್ವಿಯ (312) ಈ ಸ್ಪೋಟಕ ತ್ರಿಶತಕದ ನೆರವಿನಿಂದ ಉತ್ತರ ಪ್ರದೇಶ ತಂಡ 6 ವಿಕೆಟ್ ನಷ್ಟಕ್ಕೆ 680* ರನ್​ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ.

4 / 5
ಐಪಿಎಲ್ 2024 ರ ಮಿನಿ ಹರಾಜಿನಲ್ಲಿ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸಮೀರ್ ರಿಝ್ವಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಬರೋಬ್ಬರಿ 8.40 ಕೋಟಿ ರೂ. ನೀಡಿ ಖರೀದಿಸಿದೆ. ಸ್ಪೋಟಕ ಇನಿಂಗ್ಸ್​ ಮೂಲಕ ಈಗಾಗಲೇ ಸಂಚಲನ ಸೃಷ್ಟಿಸಿರುವ ರಿಝ್ವಿ ಈ ಬಾರಿಯ ಐಪಿಎಲ್​ ಮೂಲಕ ಸಿಎಸ್​ಕೆ ಪರ ಹೊಸ ಇನಿಂಗ್ಸ್​ ಆರಂಭಿಸಲಿದ್ದಾರೆ.

ಐಪಿಎಲ್ 2024 ರ ಮಿನಿ ಹರಾಜಿನಲ್ಲಿ 20 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸಮೀರ್ ರಿಝ್ವಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಬರೋಬ್ಬರಿ 8.40 ಕೋಟಿ ರೂ. ನೀಡಿ ಖರೀದಿಸಿದೆ. ಸ್ಪೋಟಕ ಇನಿಂಗ್ಸ್​ ಮೂಲಕ ಈಗಾಗಲೇ ಸಂಚಲನ ಸೃಷ್ಟಿಸಿರುವ ರಿಝ್ವಿ ಈ ಬಾರಿಯ ಐಪಿಎಲ್​ ಮೂಲಕ ಸಿಎಸ್​ಕೆ ಪರ ಹೊಸ ಇನಿಂಗ್ಸ್​ ಆರಂಭಿಸಲಿದ್ದಾರೆ.

5 / 5

Published On - 1:30 pm, Mon, 26 February 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ