AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟಿಗ ಶಮಿ ಜೊತೆ ಟೆನಿಸ್ ಸ್ಟಾರ್ ಸಾನಿಯಾ ಮದುವೆ? ಮೌನ ಮುರಿದ ಮುಗುತಿ ಸುಂದರಿಯ ತಂದೆ

Sania Mirza-Mohammed Shami marriage: ಕೆಲವು ದಿನಗಳ ಹಿಂದೆ ಸಾನಿಯಾ ಮಿರ್ಜಾ ಮತ್ತು ಮೊಹಮ್ಮದ್ ಶಮಿ ಮದುವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಇದಾದ ನಂತರ, ಸಾಮಾಜಿಕ ಮಾಧ್ಯಮದಲ್ಲಿ, ಅಭಿಮಾನಿಗಳು ಇಬ್ಬರೂ ಒಬ್ಬರಿಗೊಬ್ಬರು ಪರ್ಫೆಕ್ಟ್ ಮ್ಯಾಚ್ ಎಂದು ಕರೆಯಲು ಪ್ರಾರಂಭಿಸಿದರು. ಇಲ್ಲಿಂದ ಇಂತಹ ಸುದ್ದಿ ವೈರಲ್ ಆಗಲು ಪ್ರಾರಂಭಿಸಿತ್ತು.

ಪೃಥ್ವಿಶಂಕರ
|

Updated on: Jun 21, 2024 | 9:00 PM

Share
ಟೆನಿಸ್ ಸೆನ್ಸೇಶನ್ ಸಾನಿಯಾ ಮಿರ್ಜಾ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ವಿವಾಹವಾಗಲಿದ್ದಾರೆಯೇ?. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಖತ್ ವೈರಲ್ ಆಗುತ್ತಿದೆ. ಇದರಿಂದಾಗಿ ಇವರಿಬ್ಬರು ಮದುವೆಯಾಗಲಿದ್ದಾರೆಯೇ ಎಂಬ ಗೊಂದಲ ಅಭಿಮಾನಿಗಳಲ್ಲಿ ಮೂಡಿದೆ.

ಟೆನಿಸ್ ಸೆನ್ಸೇಶನ್ ಸಾನಿಯಾ ಮಿರ್ಜಾ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ವಿವಾಹವಾಗಲಿದ್ದಾರೆಯೇ?. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಖತ್ ವೈರಲ್ ಆಗುತ್ತಿದೆ. ಇದರಿಂದಾಗಿ ಇವರಿಬ್ಬರು ಮದುವೆಯಾಗಲಿದ್ದಾರೆಯೇ ಎಂಬ ಗೊಂದಲ ಅಭಿಮಾನಿಗಳಲ್ಲಿ ಮೂಡಿದೆ.

1 / 6
ಆದರೆ ಇದೀಗ ಈ ವದಂತಿಗಳಿಗೆ ಸಾನಿಯಾ ಮಿರ್ಜಾ ತಂದೆ ಇಮ್ರಾನ್ ಮಿರ್ಜಾ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ಅಸಂಬದ್ಧ. ಈ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಈ ಇಬ್ಬರ ಬಗ್ಗೆ ಎದ್ದಿದ್ದ ವದಂತಿಗೆ ತೆರೆ ಎಳೆದಿದ್ದಾರೆ.

ಆದರೆ ಇದೀಗ ಈ ವದಂತಿಗಳಿಗೆ ಸಾನಿಯಾ ಮಿರ್ಜಾ ತಂದೆ ಇಮ್ರಾನ್ ಮಿರ್ಜಾ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ಅಸಂಬದ್ಧ. ಈ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಈ ಇಬ್ಬರ ಬಗ್ಗೆ ಎದ್ದಿದ್ದ ವದಂತಿಗೆ ತೆರೆ ಎಳೆದಿದ್ದಾರೆ.

2 / 6
ಇತ್ತೀಚೆಗೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಪರಸ್ಪರ ಬೇರ್ಪಟ್ಟಿದ್ದಾರೆ. ಮತ್ತೊಂದೆಡೆ, ಮೊಹಮ್ಮದ್ ಶಮಿ ಕೂಡ ತಮ್ಮ ಪತ್ನಿ ಹಸೀನ್ ಜಹಾನ್‌ನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಹೀಗಾಗಿ ಈ ಇಬ್ಬರ ಬಗ್ಗೆ ಮದುವೆ ವದಂತಿ ಹರಿದಾಡಿತ್ತು.

ಇತ್ತೀಚೆಗೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಪರಸ್ಪರ ಬೇರ್ಪಟ್ಟಿದ್ದಾರೆ. ಮತ್ತೊಂದೆಡೆ, ಮೊಹಮ್ಮದ್ ಶಮಿ ಕೂಡ ತಮ್ಮ ಪತ್ನಿ ಹಸೀನ್ ಜಹಾನ್‌ನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಹೀಗಾಗಿ ಈ ಇಬ್ಬರ ಬಗ್ಗೆ ಮದುವೆ ವದಂತಿ ಹರಿದಾಡಿತ್ತು.

3 / 6
ವಾಸ್ತವವಾಗಿ, ಕೆಲವು ದಿನಗಳ ಹಿಂದೆ ಸಾನಿಯಾ ಮಿರ್ಜಾ ಮತ್ತು ಮೊಹಮ್ಮದ್ ಶಮಿ ಮದುವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಇದಾದ ನಂತರ, ಸಾಮಾಜಿಕ ಮಾಧ್ಯಮದಲ್ಲಿ, ಅಭಿಮಾನಿಗಳು ಇಬ್ಬರೂ ಒಬ್ಬರಿಗೊಬ್ಬರು ಪರ್ಫೆಕ್ಟ್ ಮ್ಯಾಚ್ ಎಂದು ಕರೆಯಲು ಪ್ರಾರಂಭಿಸಿದರು. ಇಲ್ಲಿಂದ ಇಂತಹ ಸುದ್ದಿ ವೈರಲ್ ಆಗಲು ಪ್ರಾರಂಭಿಸಿತ್ತು.

ವಾಸ್ತವವಾಗಿ, ಕೆಲವು ದಿನಗಳ ಹಿಂದೆ ಸಾನಿಯಾ ಮಿರ್ಜಾ ಮತ್ತು ಮೊಹಮ್ಮದ್ ಶಮಿ ಮದುವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಇದಾದ ನಂತರ, ಸಾಮಾಜಿಕ ಮಾಧ್ಯಮದಲ್ಲಿ, ಅಭಿಮಾನಿಗಳು ಇಬ್ಬರೂ ಒಬ್ಬರಿಗೊಬ್ಬರು ಪರ್ಫೆಕ್ಟ್ ಮ್ಯಾಚ್ ಎಂದು ಕರೆಯಲು ಪ್ರಾರಂಭಿಸಿದರು. ಇಲ್ಲಿಂದ ಇಂತಹ ಸುದ್ದಿ ವೈರಲ್ ಆಗಲು ಪ್ರಾರಂಭಿಸಿತ್ತು.

4 / 6
ಪ್ರಸ್ತುತ ಸಾನಿಯಾ ಮಿರ್ಜಾ ಹಜ್ ಯಾತ್ರೆಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಸಾನಿಯಾ ಮಾಹಿತಿ ನೀಡಿದ್ದು, ಸುದೀರ್ಘ ಕಾಯುವಿಕೆಯ ನಂತರ ಈ ಪವಿತ್ರ ಪ್ರಯಾಣಕ್ಕೆ ಹೋಗುವ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಸಾನಿಯಾ ಮಿರ್ಜಾ ಹಜ್ ಯಾತ್ರೆಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಸಾನಿಯಾ ಮಾಹಿತಿ ನೀಡಿದ್ದು, ಸುದೀರ್ಘ ಕಾಯುವಿಕೆಯ ನಂತರ ಈ ಪವಿತ್ರ ಪ್ರಯಾಣಕ್ಕೆ ಹೋಗುವ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.

5 / 6
2023ರ ವಿಶ್ವಕಪ್ ಬಳಿಕ ಮೊಹಮ್ಮದ್ ಶಮಿ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಇಂಜುರಿಗೊಳಗಾಗಿದ್ದ ಶಮಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಈಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಶಮಿ ಪುನರ್ವಸತಿ ನಡೆಸುತ್ತಿದ್ದು, ಪುನರಾಗಮನಕ್ಕೆ ತಯಾರಿ ನಡೆಸುತ್ತಿದ್ದಾರೆ.

2023ರ ವಿಶ್ವಕಪ್ ಬಳಿಕ ಮೊಹಮ್ಮದ್ ಶಮಿ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಇಂಜುರಿಗೊಳಗಾಗಿದ್ದ ಶಮಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಈಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಶಮಿ ಪುನರ್ವಸತಿ ನಡೆಸುತ್ತಿದ್ದು, ಪುನರಾಗಮನಕ್ಕೆ ತಯಾರಿ ನಡೆಸುತ್ತಿದ್ದಾರೆ.

6 / 6
Follow Us
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ