AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟಿಗ ಶಮಿ ಜೊತೆ ಟೆನಿಸ್ ಸ್ಟಾರ್ ಸಾನಿಯಾ ಮದುವೆ? ಮೌನ ಮುರಿದ ಮುಗುತಿ ಸುಂದರಿಯ ತಂದೆ

Sania Mirza-Mohammed Shami marriage: ಕೆಲವು ದಿನಗಳ ಹಿಂದೆ ಸಾನಿಯಾ ಮಿರ್ಜಾ ಮತ್ತು ಮೊಹಮ್ಮದ್ ಶಮಿ ಮದುವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಇದಾದ ನಂತರ, ಸಾಮಾಜಿಕ ಮಾಧ್ಯಮದಲ್ಲಿ, ಅಭಿಮಾನಿಗಳು ಇಬ್ಬರೂ ಒಬ್ಬರಿಗೊಬ್ಬರು ಪರ್ಫೆಕ್ಟ್ ಮ್ಯಾಚ್ ಎಂದು ಕರೆಯಲು ಪ್ರಾರಂಭಿಸಿದರು. ಇಲ್ಲಿಂದ ಇಂತಹ ಸುದ್ದಿ ವೈರಲ್ ಆಗಲು ಪ್ರಾರಂಭಿಸಿತ್ತು.

ಪೃಥ್ವಿಶಂಕರ
|

Updated on: Jun 21, 2024 | 9:00 PM

Share
ಟೆನಿಸ್ ಸೆನ್ಸೇಶನ್ ಸಾನಿಯಾ ಮಿರ್ಜಾ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ವಿವಾಹವಾಗಲಿದ್ದಾರೆಯೇ?. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಖತ್ ವೈರಲ್ ಆಗುತ್ತಿದೆ. ಇದರಿಂದಾಗಿ ಇವರಿಬ್ಬರು ಮದುವೆಯಾಗಲಿದ್ದಾರೆಯೇ ಎಂಬ ಗೊಂದಲ ಅಭಿಮಾನಿಗಳಲ್ಲಿ ಮೂಡಿದೆ.

ಟೆನಿಸ್ ಸೆನ್ಸೇಶನ್ ಸಾನಿಯಾ ಮಿರ್ಜಾ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಶಮಿ ವಿವಾಹವಾಗಲಿದ್ದಾರೆಯೇ?. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿ ಸಖತ್ ವೈರಲ್ ಆಗುತ್ತಿದೆ. ಇದರಿಂದಾಗಿ ಇವರಿಬ್ಬರು ಮದುವೆಯಾಗಲಿದ್ದಾರೆಯೇ ಎಂಬ ಗೊಂದಲ ಅಭಿಮಾನಿಗಳಲ್ಲಿ ಮೂಡಿದೆ.

1 / 6
ಆದರೆ ಇದೀಗ ಈ ವದಂತಿಗಳಿಗೆ ಸಾನಿಯಾ ಮಿರ್ಜಾ ತಂದೆ ಇಮ್ರಾನ್ ಮಿರ್ಜಾ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ಅಸಂಬದ್ಧ. ಈ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಈ ಇಬ್ಬರ ಬಗ್ಗೆ ಎದ್ದಿದ್ದ ವದಂತಿಗೆ ತೆರೆ ಎಳೆದಿದ್ದಾರೆ.

ಆದರೆ ಇದೀಗ ಈ ವದಂತಿಗಳಿಗೆ ಸಾನಿಯಾ ಮಿರ್ಜಾ ತಂದೆ ಇಮ್ರಾನ್ ಮಿರ್ಜಾ ಪ್ರತಿಕ್ರಿಯಿಸಿದ್ದು, ಇದು ಸಂಪೂರ್ಣ ಅಸಂಬದ್ಧ. ಈ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಈ ಇಬ್ಬರ ಬಗ್ಗೆ ಎದ್ದಿದ್ದ ವದಂತಿಗೆ ತೆರೆ ಎಳೆದಿದ್ದಾರೆ.

2 / 6
ಇತ್ತೀಚೆಗೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಪರಸ್ಪರ ಬೇರ್ಪಟ್ಟಿದ್ದಾರೆ. ಮತ್ತೊಂದೆಡೆ, ಮೊಹಮ್ಮದ್ ಶಮಿ ಕೂಡ ತಮ್ಮ ಪತ್ನಿ ಹಸೀನ್ ಜಹಾನ್‌ನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಹೀಗಾಗಿ ಈ ಇಬ್ಬರ ಬಗ್ಗೆ ಮದುವೆ ವದಂತಿ ಹರಿದಾಡಿತ್ತು.

ಇತ್ತೀಚೆಗೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಪರಸ್ಪರ ಬೇರ್ಪಟ್ಟಿದ್ದಾರೆ. ಮತ್ತೊಂದೆಡೆ, ಮೊಹಮ್ಮದ್ ಶಮಿ ಕೂಡ ತಮ್ಮ ಪತ್ನಿ ಹಸೀನ್ ಜಹಾನ್‌ನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಹೀಗಾಗಿ ಈ ಇಬ್ಬರ ಬಗ್ಗೆ ಮದುವೆ ವದಂತಿ ಹರಿದಾಡಿತ್ತು.

3 / 6
ವಾಸ್ತವವಾಗಿ, ಕೆಲವು ದಿನಗಳ ಹಿಂದೆ ಸಾನಿಯಾ ಮಿರ್ಜಾ ಮತ್ತು ಮೊಹಮ್ಮದ್ ಶಮಿ ಮದುವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಇದಾದ ನಂತರ, ಸಾಮಾಜಿಕ ಮಾಧ್ಯಮದಲ್ಲಿ, ಅಭಿಮಾನಿಗಳು ಇಬ್ಬರೂ ಒಬ್ಬರಿಗೊಬ್ಬರು ಪರ್ಫೆಕ್ಟ್ ಮ್ಯಾಚ್ ಎಂದು ಕರೆಯಲು ಪ್ರಾರಂಭಿಸಿದರು. ಇಲ್ಲಿಂದ ಇಂತಹ ಸುದ್ದಿ ವೈರಲ್ ಆಗಲು ಪ್ರಾರಂಭಿಸಿತ್ತು.

ವಾಸ್ತವವಾಗಿ, ಕೆಲವು ದಿನಗಳ ಹಿಂದೆ ಸಾನಿಯಾ ಮಿರ್ಜಾ ಮತ್ತು ಮೊಹಮ್ಮದ್ ಶಮಿ ಮದುವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಇದಾದ ನಂತರ, ಸಾಮಾಜಿಕ ಮಾಧ್ಯಮದಲ್ಲಿ, ಅಭಿಮಾನಿಗಳು ಇಬ್ಬರೂ ಒಬ್ಬರಿಗೊಬ್ಬರು ಪರ್ಫೆಕ್ಟ್ ಮ್ಯಾಚ್ ಎಂದು ಕರೆಯಲು ಪ್ರಾರಂಭಿಸಿದರು. ಇಲ್ಲಿಂದ ಇಂತಹ ಸುದ್ದಿ ವೈರಲ್ ಆಗಲು ಪ್ರಾರಂಭಿಸಿತ್ತು.

4 / 6
ಪ್ರಸ್ತುತ ಸಾನಿಯಾ ಮಿರ್ಜಾ ಹಜ್ ಯಾತ್ರೆಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಸಾನಿಯಾ ಮಾಹಿತಿ ನೀಡಿದ್ದು, ಸುದೀರ್ಘ ಕಾಯುವಿಕೆಯ ನಂತರ ಈ ಪವಿತ್ರ ಪ್ರಯಾಣಕ್ಕೆ ಹೋಗುವ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಸಾನಿಯಾ ಮಿರ್ಜಾ ಹಜ್ ಯಾತ್ರೆಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಸಾನಿಯಾ ಮಾಹಿತಿ ನೀಡಿದ್ದು, ಸುದೀರ್ಘ ಕಾಯುವಿಕೆಯ ನಂತರ ಈ ಪವಿತ್ರ ಪ್ರಯಾಣಕ್ಕೆ ಹೋಗುವ ಅವಕಾಶ ಸಿಕ್ಕಿದೆ ಎಂದು ಹೇಳಿದ್ದಾರೆ.

5 / 6
2023ರ ವಿಶ್ವಕಪ್ ಬಳಿಕ ಮೊಹಮ್ಮದ್ ಶಮಿ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಇಂಜುರಿಗೊಳಗಾಗಿದ್ದ ಶಮಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಈಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಶಮಿ ಪುನರ್ವಸತಿ ನಡೆಸುತ್ತಿದ್ದು, ಪುನರಾಗಮನಕ್ಕೆ ತಯಾರಿ ನಡೆಸುತ್ತಿದ್ದಾರೆ.

2023ರ ವಿಶ್ವಕಪ್ ಬಳಿಕ ಮೊಹಮ್ಮದ್ ಶಮಿ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಇಂಜುರಿಗೊಳಗಾಗಿದ್ದ ಶಮಿ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಈಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಶಮಿ ಪುನರ್ವಸತಿ ನಡೆಸುತ್ತಿದ್ದು, ಪುನರಾಗಮನಕ್ಕೆ ತಯಾರಿ ನಡೆಸುತ್ತಿದ್ದಾರೆ.

6 / 6
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​