AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾ ಕ್ರಿಕೆಟಿಗನ ಪುತ್ರ

ಸಂಜಯ್ ಬಂಗಾರ್ ಟೀಮ್ ಇಂಡಿಯಾ ಪರ 12 ಟೆಸ್ಟ್, 15 ಏಕದಿನ ಪಂದ್ಯಗಳನ್ನಾಡಿದ್ದಾರೆ. ಹಾಗೆಯೇ ಭಾರತ ತಂಡದ ಬ್ಯಾಟಿಂಗ್ ಕೋಚ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ಸೇರಿದಂತೆ ಒಂದಷ್ಟು ತಂಡಗಳ ಮುಖ್ಯ ಕೋಚ್ ಹುದ್ದೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 11, 2024 | 9:20 AM

Share
ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಪುತ್ರ/ಪುತ್ರಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಬಹಿರಂಗಪಡಿಸುವಿಕೆಯೊಂದಿಗೆ ಎಂಬುದೇ ವಿಶೇಷ.

ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಪುತ್ರ/ಪುತ್ರಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಬಹಿರಂಗಪಡಿಸುವಿಕೆಯೊಂದಿಗೆ ಎಂಬುದೇ ವಿಶೇಷ.

1 / 5
ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್ ತಾನು ಹಾರ್ಮೋನ್ ಪರಿವರ್ತಿಸಿಕೊಂಡಿದ್ದು, ಇದೀಗ ಹುಡುಗನಿಂದ ಹುಡುಗಿಯಾಗಿ ರೂಪಾಂತರಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಇನ್ಮುಂದೆ ನನ್ನ ಹೆಸರು ಆರ್ಯನ್ ಅಲ್ಲ, ಬದಲಾಗಿ ಅನಯಾ ಎಂದಿದ್ದಾರೆ.

ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್ ತಾನು ಹಾರ್ಮೋನ್ ಪರಿವರ್ತಿಸಿಕೊಂಡಿದ್ದು, ಇದೀಗ ಹುಡುಗನಿಂದ ಹುಡುಗಿಯಾಗಿ ರೂಪಾಂತರಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಇನ್ಮುಂದೆ ನನ್ನ ಹೆಸರು ಆರ್ಯನ್ ಅಲ್ಲ, ಬದಲಾಗಿ ಅನಯಾ ಎಂದಿದ್ದಾರೆ.

2 / 5
ಅಂದಹಾಗೆಯೇ ಅನಯಾ ಕಳೆದ 10 ತಿಂಗಳಿಂದ ಹಾರ್ಮೋನ್ ಬದಲಾವಣೆಗಾಗಿ ಚಿಕಿತ್ಸೆ ಪಡೆದಿದ್ದಾರೆ. ಇದೀಗ 10 ತಿಂಗಳ ಶಸ್ತ್ರಚಿಕಿತ್ಸೆಯ ನಂತರ ಹುಡುಗಿಯಾಗಿ ರೂಪಾಂತರಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಇದಕ್ಕಾಗಿ ನನ್ನ ಕ್ರಿಕೆಟ್ ಕೆರಿಯರ್ ಅನ್ನು ತ್ಯಾಗ ಮಾಡಿರುವುದಾಗಿ ಅನಯಾ ಹೇಳಿದ್ದಾರೆ.

ಅಂದಹಾಗೆಯೇ ಅನಯಾ ಕಳೆದ 10 ತಿಂಗಳಿಂದ ಹಾರ್ಮೋನ್ ಬದಲಾವಣೆಗಾಗಿ ಚಿಕಿತ್ಸೆ ಪಡೆದಿದ್ದಾರೆ. ಇದೀಗ 10 ತಿಂಗಳ ಶಸ್ತ್ರಚಿಕಿತ್ಸೆಯ ನಂತರ ಹುಡುಗಿಯಾಗಿ ರೂಪಾಂತರಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೆ ಇದಕ್ಕಾಗಿ ನನ್ನ ಕ್ರಿಕೆಟ್ ಕೆರಿಯರ್ ಅನ್ನು ತ್ಯಾಗ ಮಾಡಿರುವುದಾಗಿ ಅನಯಾ ಹೇಳಿದ್ದಾರೆ.

3 / 5
ಆರ್ಯನ್ ಬಂಗಾರ್ ಕೂಡ ತಂದೆಯಂತೆ ಕ್ರಿಕೆಟಿಗನಾಗಬೇಕೆಂದು ಕನಸು ಕಂಡಿದ್ದರು. ಅದರಂತೆ ಬಾಲ್ಯದಿಂದಲೇ ಕ್ರಿಕೆಟ್ ಅಭ್ಯಾಸವನ್ನು ಸಹ ಶುರು ಮಾಡಿದ್ದರು. ಎಡಗೈ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದ ಆರ್ಯನ್ ಲೀಸೆಸ್ಟರ್‌ಶೈರ್‌ನ ಹಿಂಕ್ಲೆ ಕ್ರಿಕೆಟ್ ಕ್ಲಬ್‌ ಪರ ಆಡಿದ್ದಾರೆ.

ಆರ್ಯನ್ ಬಂಗಾರ್ ಕೂಡ ತಂದೆಯಂತೆ ಕ್ರಿಕೆಟಿಗನಾಗಬೇಕೆಂದು ಕನಸು ಕಂಡಿದ್ದರು. ಅದರಂತೆ ಬಾಲ್ಯದಿಂದಲೇ ಕ್ರಿಕೆಟ್ ಅಭ್ಯಾಸವನ್ನು ಸಹ ಶುರು ಮಾಡಿದ್ದರು. ಎಡಗೈ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದ ಆರ್ಯನ್ ಲೀಸೆಸ್ಟರ್‌ಶೈರ್‌ನ ಹಿಂಕ್ಲೆ ಕ್ರಿಕೆಟ್ ಕ್ಲಬ್‌ ಪರ ಆಡಿದ್ದಾರೆ.

4 / 5
ಆದರೆ ಆ ಬಳಿಕ ದೇಹದಲ್ಲಾದ ಪರಿವರ್ತನೆಯಿಂದಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಆರ್ಯನ್ ಆಗಿದ್ದ ಬಂಗಾರ್ ಪುತ್ರ ಇದೀಗ ಅನಯಾ ಆಗಿ ಬದಲಾಗಿದ್ದಾರೆ. ಅಲ್ಲದೆ ನನ್ನ ಈ ನಿರ್ಧಾರದ ಬಗ್ಗೆ ತುಂಬಾ ತೃಪ್ತಿಯಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಅನಯಾ ಬಂಗಾರ್ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿದ್ದಾರೆ. ಇದೀಗ ಹುಡುಗಿಯಾಗಿ ರೂಪಾಂತರಗೊಂಡಿರುವ ಅವರು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಕೆರಿಯರ್ ಮುಂದುವರೆಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಆದರೆ ಆ ಬಳಿಕ ದೇಹದಲ್ಲಾದ ಪರಿವರ್ತನೆಯಿಂದಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಆರ್ಯನ್ ಆಗಿದ್ದ ಬಂಗಾರ್ ಪುತ್ರ ಇದೀಗ ಅನಯಾ ಆಗಿ ಬದಲಾಗಿದ್ದಾರೆ. ಅಲ್ಲದೆ ನನ್ನ ಈ ನಿರ್ಧಾರದ ಬಗ್ಗೆ ತುಂಬಾ ತೃಪ್ತಿಯಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಅನಯಾ ಬಂಗಾರ್ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿದ್ದಾರೆ. ಇದೀಗ ಹುಡುಗಿಯಾಗಿ ರೂಪಾಂತರಗೊಂಡಿರುವ ಅವರು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಕೆರಿಯರ್ ಮುಂದುವರೆಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!