AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಬೆನ್ನಲ್ಲೇ ರಿಷಭ್​​ ಪಂತ್​​​ಗೆ ಕ್ಲಾಸ್ ತೆಗೆದುಕೊಂಡ ಸಂಜೀವ್ ಗೋಯೆಂಕಾ

Sanjiv Goenka and Rishabh Pant: ಲಕ್ನೋನಲ್ಲಿ ನಡೆದ ಮೊದಲ ಪಂದ್ಯದಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಹೀನಾಯ ಸೋಲಿನ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಸುದ್ದಿಯಾಗಿದ್ದಾರೆ. ಅದು ಸಹ ಎಂದಿನಂತೆ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Apr 02, 2026 | 7:03 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್  ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ನಾಯಕ ರಿಷಭ್ ಪಂತ್ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿದೆ.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್  ತಂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಎಲ್​ಎಸ್​ಜಿ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ನಾಯಕ ರಿಷಭ್ ಪಂತ್ ಅವರೊಂದಿಗೆ ಚರ್ಚಿಸುತ್ತಿರುವುದು ಕಂಡು ಬಂದಿದೆ.

1 / 5
ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್​ಗಳಲ್ಲಿ 141 ರನ್​​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 17.1 ಓವರ್​​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​​ಗಳ ಜಯ ಸಾಧಿಸಿದೆ.

ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್​ಗಳಲ್ಲಿ 141 ರನ್​​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 17.1 ಓವರ್​​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​​ಗಳ ಜಯ ಸಾಧಿಸಿದೆ.

2 / 5
ಇತ್ತ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲೇ ಕಳಪೆ ಪ್ರದರ್ಶನ ನೀಡಿ ಲಕ್ನೋ ಸೂಪರ್ ಜೈಂಟ್ಸ್ ಸೋಲೊಪ್ಪಿಕೊಂಡಿರುವುದಕ್ಕೆ ಎಲ್​ಎಸ್​ಜಿ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

ಇತ್ತ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲೇ ಕಳಪೆ ಪ್ರದರ್ಶನ ನೀಡಿ ಲಕ್ನೋ ಸೂಪರ್ ಜೈಂಟ್ಸ್ ಸೋಲೊಪ್ಪಿಕೊಂಡಿರುವುದಕ್ಕೆ ಎಲ್​ಎಸ್​ಜಿ ಮಾಲೀಕರಾದ ಸಂಜೀವ್ ಗೋಯೆಂಕಾ ಅವರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

3 / 5
ಪಂದ್ಯದ ನಂತರ ಸಂಜೀವ್ ಗೋಯೆಂಕಾ ಅವರು ರಿಷಭ್ ಪಂತ್ ಮತ್ತು ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಅವರೊಂದಿಗೆ ಗಂಭೀರವಾಗಿ ಮಾತನಾಡುತ್ತಿರುವುದು ಕಂಡುಬಂದಿದ್ದು, ಈ ವೇಳೆ ಗೋಯೆಂಕಾ ಅವರು ಕೈಸನ್ನೆ ಮಾಡುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಪಂತ್ ಶಾಂತವಾಗಿ ಅವರಿಗೆ ಉತ್ತರಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪಂದ್ಯದ ನಂತರ ಸಂಜೀವ್ ಗೋಯೆಂಕಾ ಅವರು ರಿಷಭ್ ಪಂತ್ ಮತ್ತು ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಅವರೊಂದಿಗೆ ಗಂಭೀರವಾಗಿ ಮಾತನಾಡುತ್ತಿರುವುದು ಕಂಡುಬಂದಿದ್ದು, ಈ ವೇಳೆ ಗೋಯೆಂಕಾ ಅವರು ಕೈಸನ್ನೆ ಮಾಡುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಪಂತ್ ಶಾಂತವಾಗಿ ಅವರಿಗೆ ಉತ್ತರಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

4 / 5
ಅಂದಹಾಗೆ ಸಂಜೀವ್ ಗೋಯೆಂಕಾ ಹೀಗೆ ತಂಡದ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. 2024ರಲ್ಲಿ ಸನ್​​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಹೀನಾಯವಾಗಿ ಸೋತಾಗ ಮೈದಾನದಲ್ಲೇ ಅಂದಿನ ನಾಯಕ ಕೆಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದು ದೊಡ್ಡ ವಿವಾದವಾಗಿತ್ತು. ಇದೀಗ ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವ ಗೋಯೆಂಕಾ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

ಅಂದಹಾಗೆ ಸಂಜೀವ್ ಗೋಯೆಂಕಾ ಹೀಗೆ ತಂಡದ ನಾಯಕನಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. 2024ರಲ್ಲಿ ಸನ್​​ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಹೀನಾಯವಾಗಿ ಸೋತಾಗ ಮೈದಾನದಲ್ಲೇ ಅಂದಿನ ನಾಯಕ ಕೆಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದು ದೊಡ್ಡ ವಿವಾದವಾಗಿತ್ತು. ಇದೀಗ ಸೋಲಿನ ಬೆನ್ನಲ್ಲೇ ರಿಷಭ್ ಪಂತ್​ಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವ ಗೋಯೆಂಕಾ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?