AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ತಂಡದ ಪರ ಕಣಕ್ಕಿಳಿಯಲಿದ್ದಾರೆ ಸ್ಯಾಮ್ಸನ್ ಬ್ರದರ್ಸ್

KCL 2025: ಕೇರಳ ಕ್ರಿಕೆಟ್ ಲೀಗ್ ಟಿ20 ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ ಕೊಚ್ಚಿ ಬ್ಲೂ ಟೈಗರ್ಸ್, ತಿರುವನಂತಪುರಂ ರಾಯಲ್ಸ್, ಅಲೆಪ್ಪಿ ರಿಪ್ಪಲ್ಸ್, ತ್ರಿಶ್ಶೂರ್ ಟೈಟಾನ್ಸ್, ಅರೀಸ್ ಕೊಲ್ಲಂ ಸೈಲರ್ಸ್ ಮತ್ತು ಕ್ಯಾಲಿಕಪ್ ಗ್ಲೋಬ್​ಸ್ಟಾರ್ಸ್. ಈ ತಂಡಗಳ ನಡುವೆ ಆಗಸ್ಟ್ 22 ರಿಂದ ಟಿ20 ಕ್ರಿಕೆಟ್ ಕದನ ನಡೆಯಲಿದೆ.

ಝಾಹಿರ್ ಯೂಸುಫ್
|

Updated on:Jul 09, 2025 | 7:24 AM

Share
ಕೇರಳ ಕ್ರಿಕೆಟ್ ಲೀಗ್ (KCL 2025) ಸೀಸನ್-2 ರ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇತ್ತೀಚೆಗೆ ಹರಾಜು ಪ್ರಕ್ರಿಯೆಯನ್ನು ನಡೆಸಲಾಗಿದೆ. ಈ ವೇಳೆ ದಾಖಲೆಯ ಮೊತ್ತಕ್ಕೆ ಬಿಕರಿಯಾಗುವ ಮೂಲಕ ಸಂಜು ಸ್ಯಾಮ್ಸನ್ ಇತಿಹಾಸ ನಿರ್ಮಿಸಿದ್ದಾರೆ. ವಿಶೇಷ ಎಂದರೆ ಸಂಜು ಜೊತೆ ಅವರ ಅಣ್ಣ ಸ್ಯಾಲಿ ಸ್ಯಾಮ್ಸನ್ ಕೂಡ ಕೆಸಿಎಲ್​ಗೆ ಆಯ್ಕೆಯಾಗಿದ್ದಾರೆ.

ಕೇರಳ ಕ್ರಿಕೆಟ್ ಲೀಗ್ (KCL 2025) ಸೀಸನ್-2 ರ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇತ್ತೀಚೆಗೆ ಹರಾಜು ಪ್ರಕ್ರಿಯೆಯನ್ನು ನಡೆಸಲಾಗಿದೆ. ಈ ವೇಳೆ ದಾಖಲೆಯ ಮೊತ್ತಕ್ಕೆ ಬಿಕರಿಯಾಗುವ ಮೂಲಕ ಸಂಜು ಸ್ಯಾಮ್ಸನ್ ಇತಿಹಾಸ ನಿರ್ಮಿಸಿದ್ದಾರೆ. ವಿಶೇಷ ಎಂದರೆ ಸಂಜು ಜೊತೆ ಅವರ ಅಣ್ಣ ಸ್ಯಾಲಿ ಸ್ಯಾಮ್ಸನ್ ಕೂಡ ಕೆಸಿಎಲ್​ಗೆ ಆಯ್ಕೆಯಾಗಿದ್ದಾರೆ.

1 / 5
ಕೊಚ್ಚಿ ಬ್ಲೂ ಟೈಗರ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಹಾಗೂ ಸ್ಯಾಲಿ ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. 75 ಸಾವಿರ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಯಾಲಿ ಸ್ಯಾಮ್ಸನ್ ಅವರನ್ನು ಬೇಸ್​ ಪ್ರೈಸ್​ಗೆ ಬ್ಲೂ ಟೈಗರ್ಸ್ ಫ್ರಾಂಚೈಸಿ ಖರೀದಿಸಿದ್ದು, ಈ ಮೂಲಕ ಅಣ್ಣ-ತಮ್ಮಂದಿರನ್ನು ಒಂದೇ ತಂಡದಲ್ಲಿರಿಸಲು ಯಶಸ್ವಿಯಾಗಿದ್ದಾರೆ.

ಕೊಚ್ಚಿ ಬ್ಲೂ ಟೈಗರ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಹಾಗೂ ಸ್ಯಾಲಿ ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. 75 ಸಾವಿರ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಯಾಲಿ ಸ್ಯಾಮ್ಸನ್ ಅವರನ್ನು ಬೇಸ್​ ಪ್ರೈಸ್​ಗೆ ಬ್ಲೂ ಟೈಗರ್ಸ್ ಫ್ರಾಂಚೈಸಿ ಖರೀದಿಸಿದ್ದು, ಈ ಮೂಲಕ ಅಣ್ಣ-ತಮ್ಮಂದಿರನ್ನು ಒಂದೇ ತಂಡದಲ್ಲಿರಿಸಲು ಯಶಸ್ವಿಯಾಗಿದ್ದಾರೆ.

2 / 5
ಇದಕ್ಕೂ ಮುನ್ನ 3 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಎಲ್ಲಾ ಫ್ರಾಂಚೈಸಿಗಳ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು. ಪರಿಣಾಮ ನಿಮಿಷಗಳಲ್ಲಿ ಸ್ಯಾಮ್ಸನ್ ಅವರ ಮೊತ್ತವು 20 ಲಕ್ಷ ರೂ. ದಾಟಿದೆ. ಅಂತಿಮವಾಗಿ ಕೊಚ್ಚಿ ಬ್ಲೂ ಟೈಗರ್ಸ್ ಫ್ರಾಂಚೈಸಿಯು ಬರೋಬ್ಬರಿ 26.8 ಲಕ್ಷ ರೂ. ನೀಡಿ ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ 3 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಲು ಎಲ್ಲಾ ಫ್ರಾಂಚೈಸಿಗಳ ನಡುವೆ ಭರ್ಜರಿ ಪೈಪೋಟಿ ಕಂಡು ಬಂತು. ಪರಿಣಾಮ ನಿಮಿಷಗಳಲ್ಲಿ ಸ್ಯಾಮ್ಸನ್ ಅವರ ಮೊತ್ತವು 20 ಲಕ್ಷ ರೂ. ದಾಟಿದೆ. ಅಂತಿಮವಾಗಿ ಕೊಚ್ಚಿ ಬ್ಲೂ ಟೈಗರ್ಸ್ ಫ್ರಾಂಚೈಸಿಯು ಬರೋಬ್ಬರಿ 26.8 ಲಕ್ಷ ರೂ. ನೀಡಿ ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
ಇದರೊಂದಿಗೆ ಕೇರಳ ಕ್ರಿಕೆಟ್ ಲೀಗ್​ ಹರಾಜಿನಲ್ಲಿ ದಾಖಲೆಯ ಮೊತ್ತಕ್ಕೆ ಬಿಕರಿಯಾದ ಆಟಗಾರ ಎಂಬ ದಾಖಲೆ ಸಂಜು ಸ್ಯಾಮ್ಸನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಎಂಎಸ್ ಅಖಿಲ್ ಹೆಸರಿನಲ್ಲಿತ್ತು. 2024ರ ಹರಾಜಿನಲ್ಲಿ ತಿರುವನಂತಪುರಂ ರಾಯಲ್ಸ್ ಫ್ರಾಂಚೈಸಿಯು ಅಖಿಲ್ ಅವರನ್ನು 7.4 ಲಕ್ಷ ರೂ. ನೀಡಿ ಖರೀದಿಸಿತ್ತು. ಇದೀಗ ಬರೋಬ್ಬರಿ 26.8 ಲಕ್ಷಕ್ಕೆ ಮಾರಾಟವಾಗುವ ಮೂಲಕ ಸ್ಯಾಮ್ಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದರೊಂದಿಗೆ ಕೇರಳ ಕ್ರಿಕೆಟ್ ಲೀಗ್​ ಹರಾಜಿನಲ್ಲಿ ದಾಖಲೆಯ ಮೊತ್ತಕ್ಕೆ ಬಿಕರಿಯಾದ ಆಟಗಾರ ಎಂಬ ದಾಖಲೆ ಸಂಜು ಸ್ಯಾಮ್ಸನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಎಂಎಸ್ ಅಖಿಲ್ ಹೆಸರಿನಲ್ಲಿತ್ತು. 2024ರ ಹರಾಜಿನಲ್ಲಿ ತಿರುವನಂತಪುರಂ ರಾಯಲ್ಸ್ ಫ್ರಾಂಚೈಸಿಯು ಅಖಿಲ್ ಅವರನ್ನು 7.4 ಲಕ್ಷ ರೂ. ನೀಡಿ ಖರೀದಿಸಿತ್ತು. ಇದೀಗ ಬರೋಬ್ಬರಿ 26.8 ಲಕ್ಷಕ್ಕೆ ಮಾರಾಟವಾಗುವ ಮೂಲಕ ಸ್ಯಾಮ್ಸನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ಇನ್ನು ಕೇರಳ ಕ್ರಿಕೆಟ್ ಲೀಗ್​ನ ಎರಡನೇ ಆವೃತ್ತಿಯು ಆಗಸ್ಟ್ 22 ರಿಂದ ಶುರುವಾಗಲಿದೆ.  6 ತಂಡಗಳ ನಡುವಣ ಈ ಕದನದ ಫೈನಲ್ ಪಂದ್ಯವು ಸೆಪ್ಟೆಂಬರ್ 7 ರಂದು ನಡೆಯಲಿದೆ. ಇನ್ನು ಈ ಟೂರ್ನಿಯ ಎಲ್ಲಾ ಪಂದ್ಯಗಳು ತಿರುವನಂತಪುರಂದ ಗ್ರೀನ್​ಫೀಲ್ಡ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ಜರುಗಲಿದೆ. 

ಇನ್ನು ಕೇರಳ ಕ್ರಿಕೆಟ್ ಲೀಗ್​ನ ಎರಡನೇ ಆವೃತ್ತಿಯು ಆಗಸ್ಟ್ 22 ರಿಂದ ಶುರುವಾಗಲಿದೆ.  6 ತಂಡಗಳ ನಡುವಣ ಈ ಕದನದ ಫೈನಲ್ ಪಂದ್ಯವು ಸೆಪ್ಟೆಂಬರ್ 7 ರಂದು ನಡೆಯಲಿದೆ. ಇನ್ನು ಈ ಟೂರ್ನಿಯ ಎಲ್ಲಾ ಪಂದ್ಯಗಳು ತಿರುವನಂತಪುರಂದ ಗ್ರೀನ್​ಫೀಲ್ಡ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ಜರುಗಲಿದೆ. 

5 / 5

Published On - 10:53 am, Tue, 8 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ