AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಮತ್ತೆ ಅವಕಾಶ ವಂಚಿತರಾದ  ಸಂಜು ಸ್ಯಾಮ್ಸನ್..!

Sanju Samson: ಸೌತ್ ಆಫ್ರಿಕಾ ಹಾಗೂ ಬಾಂಗ್ಲಾದೇಶ್ ವಿರುದ್ಧದ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಮಿಂಚಿದ್ದ ಸಂಜು ಸ್ಯಾಮ್ಸನ್ ಇದೀಗ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ. ಆರಂಭಿಕನಾಗಿ ಭರ್ಜರಿ ಫಾರ್ಮ್​ನಲ್ಲಿದ್ದ ಸ್ಯಾಮ್ಸನ್ ಅವರನ್ನು ಶುಭ್​​ಮನ್ ಗಿಲ್​ಗೆ ಅವಕಾಶ ಕಲ್ಪಿಸಲು ಮಧ್ಯಮ ಕ್ರಮಾಂಕದಲ್ಲಿ ಆಡಿಸಲಾಗಿತ್ತು. ಇದರೊಂದಿಗೆ ಫಾರ್ಮ್​ ಕಳೆದುಕೊಂಡ ಸಂಜು ಸ್ಯಾಮ್ಸನ್ ಇದೀಗ ಆಡುವ ಬಳಗದಿಂದಲೇ ಹೊರಬಿದ್ದಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 02, 2025 | 1:49 PM

Share
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಿಂದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿದೆ. ಮೆಲ್ಬೋರ್ನ್​ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸ್ಯಾಮ್ಸನ್ ಕೇವಲ 2 ರನ್​ಗಳಿಸಿ ಔಟಾಗಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಿಂದ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿದೆ. ಮೆಲ್ಬೋರ್ನ್​ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸ್ಯಾಮ್ಸನ್ ಕೇವಲ 2 ರನ್​ಗಳಿಸಿ ಔಟಾಗಿದ್ದರು.

1 / 6
ಹೀಗಾಗಿ ಮೂರನೇ ಟಿ20 ಪಂದ್ಯದಿಂದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿದೆ. ವಿಶೇಷ ಎಂದರೆ ಕೆಲ ತಿಂಗಳುಗಳ ಹಿಂದೆಯಷ್ಟೇ ಸ್ಯಾಮ್ಸನ್ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಸೌತ್ ಆಫ್ರಿಕಾ ಹಾಗೂ ಬಾಂಗ್ಲಾದೇಶ್ ವಿರುದ್ಧದ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದರು.

ಹೀಗಾಗಿ ಮೂರನೇ ಟಿ20 ಪಂದ್ಯದಿಂದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಡಲಾಗಿದೆ. ವಿಶೇಷ ಎಂದರೆ ಕೆಲ ತಿಂಗಳುಗಳ ಹಿಂದೆಯಷ್ಟೇ ಸ್ಯಾಮ್ಸನ್ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಸೌತ್ ಆಫ್ರಿಕಾ ಹಾಗೂ ಬಾಂಗ್ಲಾದೇಶ್ ವಿರುದ್ಧದ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದರು.

2 / 6
ಆದರೆ ಶುಭ್​ಮನ್ ಗಿಲ್ ಎಂಟ್ರಿಯೊಂದಿಗೆ ಸ್ಯಾಮ್ಸನ್ ತನ್ನ ಆರಂಭಿಕ ಸ್ಥಾನವನ್ನು ಕಳೆದುಕೊಳ್ಳಬೇಕಾಯಿತು. ಇತ್ತ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಫಾರ್ಮ್​ ಕಳೆದುಕೊಂಡ ಸ್ಯಾಮ್ಸನ್ ಇದೀಗ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಿಂದಲೇ ಹೊರಬಿದ್ದಿದ್ದಾರೆ.

ಆದರೆ ಶುಭ್​ಮನ್ ಗಿಲ್ ಎಂಟ್ರಿಯೊಂದಿಗೆ ಸ್ಯಾಮ್ಸನ್ ತನ್ನ ಆರಂಭಿಕ ಸ್ಥಾನವನ್ನು ಕಳೆದುಕೊಳ್ಳಬೇಕಾಯಿತು. ಇತ್ತ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಫಾರ್ಮ್​ ಕಳೆದುಕೊಂಡ ಸ್ಯಾಮ್ಸನ್ ಇದೀಗ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಿಂದಲೇ ಹೊರಬಿದ್ದಿದ್ದಾರೆ.

3 / 6
ಸಂಜು ಸ್ಯಾಮ್ಸನ್ ಬದಲಿಗೆ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಜಿತೇಶ್ ಶರ್ಮಾ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಣಕ್ಕಿಳಿದಿದ್ದಾರೆ. ಆರ್​ಸಿಬಿ ಪರ ಭರ್ಜರಿ ಪ್ರದರ್ಶನ ನೀಡಿದ್ದ ಜಿತೇಶ್ ಶರ್ಮಾಗೆ ಇದು ಚೊಚ್ಚಲ ಆಸ್ಟ್ರೇಲಿಯಾ ಸರಣಿ. ಇದೀಗ ಚೊಚ್ಚಲ ಸರಣಿಯಲ್ಲೇ ಆಡುವ ಬಳಗದಲ್ಲಿ ಅವಕಾಶ ಪಡೆಯುವಲ್ಲಿ ಯುವ ವಿಕೆಟ್ ಕೀಪರ್ ಯಶಸ್ವಿಯಾಗಿದ್ದಾರೆ.

ಸಂಜು ಸ್ಯಾಮ್ಸನ್ ಬದಲಿಗೆ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಜಿತೇಶ್ ಶರ್ಮಾ ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಣಕ್ಕಿಳಿದಿದ್ದಾರೆ. ಆರ್​ಸಿಬಿ ಪರ ಭರ್ಜರಿ ಪ್ರದರ್ಶನ ನೀಡಿದ್ದ ಜಿತೇಶ್ ಶರ್ಮಾಗೆ ಇದು ಚೊಚ್ಚಲ ಆಸ್ಟ್ರೇಲಿಯಾ ಸರಣಿ. ಇದೀಗ ಚೊಚ್ಚಲ ಸರಣಿಯಲ್ಲೇ ಆಡುವ ಬಳಗದಲ್ಲಿ ಅವಕಾಶ ಪಡೆಯುವಲ್ಲಿ ಯುವ ವಿಕೆಟ್ ಕೀಪರ್ ಯಶಸ್ವಿಯಾಗಿದ್ದಾರೆ.

4 / 6
ಇನ್ನು ಮೂರನೇ ಟಿ20 ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಅದರಂತೆ ಕುಲ್ದೀಪ್ ಯಾದವ್ ಬದಲಿಗೆ ವಾಷಿಂಗ್ಟನ್ ಸುಂದರ್ ಕಣಕ್ಕಿಳಿದಿದ್ದಾರೆ. ಇನ್ನು ಹರ್ಷಿತ್ ರಾಣಾ ಸ್ಥಾನದಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಸಂಜು ಸ್ಯಾಮ್ಸನ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಜಿತೇಶ್ ಶರ್ಮಾ ಕಣಕ್ಕಿಳಿದಿದ್ದಾರೆ. 

ಇನ್ನು ಮೂರನೇ ಟಿ20 ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಅದರಂತೆ ಕುಲ್ದೀಪ್ ಯಾದವ್ ಬದಲಿಗೆ ವಾಷಿಂಗ್ಟನ್ ಸುಂದರ್ ಕಣಕ್ಕಿಳಿದಿದ್ದಾರೆ. ಇನ್ನು ಹರ್ಷಿತ್ ರಾಣಾ ಸ್ಥಾನದಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಸಂಜು ಸ್ಯಾಮ್ಸನ್ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್ ಆಗಿ ಜಿತೇಶ್ ಶರ್ಮಾ ಕಣಕ್ಕಿಳಿದಿದ್ದಾರೆ. 

5 / 6
ಭಾರತ ಪ್ಲೇಯಿಂಗ್ 11: ಶುಭ್​​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್.   (ಸಂಜು ಸ್ಯಾಮ್ಸನ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ಹೊರಕ್ಕೆ).

ಭಾರತ ಪ್ಲೇಯಿಂಗ್ 11: ಶುಭ್​​ಮನ್ ಗಿಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್) ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್.   (ಸಂಜು ಸ್ಯಾಮ್ಸನ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ ಹೊರಕ್ಕೆ).

6 / 6
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಹೋಯ್ತು ವ್ಯಕ್ತಿಯ ಪ್ರಾಣ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಹೋಯ್ತು ವ್ಯಕ್ತಿಯ ಪ್ರಾಣ
36 ವರ್ಷಗಳ ಬಳಿಕ ರೋಚಕ ಜಯ ಸಾಧಿಸಿದ ಪಾಕಿಸ್ತಾನ್
36 ವರ್ಷಗಳ ಬಳಿಕ ರೋಚಕ ಜಯ ಸಾಧಿಸಿದ ಪಾಕಿಸ್ತಾನ್
Video: ದೆಹಲಿ ಸ್ಫೋಟಕ್ಕೂ ಮುನ್ನ ಉಗ್ರರು ಎಲ್ಲೆಲ್ಲಿ ಓಡಾಡಿದ್ರು ಗೊತ್ತೇ?
Video: ದೆಹಲಿ ಸ್ಫೋಟಕ್ಕೂ ಮುನ್ನ ಉಗ್ರರು ಎಲ್ಲೆಲ್ಲಿ ಓಡಾಡಿದ್ರು ಗೊತ್ತೇ?
ದೆಹಲಿ ನಿಗೂಢ ಸ್ಫೋಟ: ಉಗ್ರ ಮಸೂದ್​ ಅಜರ್ ತಂಗಿ ಜತೆಗೆ ಶಾಹೀನ್​ಗೆ ನಂಟು
ದೆಹಲಿ ನಿಗೂಢ ಸ್ಫೋಟ: ಉಗ್ರ ಮಸೂದ್​ ಅಜರ್ ತಂಗಿ ಜತೆಗೆ ಶಾಹೀನ್​ಗೆ ನಂಟು
ನಾಮಿನೇಷನ್​ನಿಂದ ಬಚಾವ್ ಆಗಲು ರಕ್ಷಿತಾ ಜೊತೆ ಜಗಳಕ್ಕೆ ಇಳಿದ ರಾಶಿಕಾ
ನಾಮಿನೇಷನ್​ನಿಂದ ಬಚಾವ್ ಆಗಲು ರಕ್ಷಿತಾ ಜೊತೆ ಜಗಳಕ್ಕೆ ಇಳಿದ ರಾಶಿಕಾ
ಆರ್​ಜೆಡಿಗೆ ಮತ ಹಾಕಿಲ್ವಾ ಎಂದು ಪತ್ನಿಯನ್ನು ಥಳಿಸಿದ ಗಂಡ
ಆರ್​ಜೆಡಿಗೆ ಮತ ಹಾಕಿಲ್ವಾ ಎಂದು ಪತ್ನಿಯನ್ನು ಥಳಿಸಿದ ಗಂಡ
ಬ್ರೆಜಿಲ್​ನಲ್ಲಿ ಸಂಭವಿಸಿದ ಕಾರು ಅಪಘಾತದ ಭಯಾನಕ ವಿಡಿಯೋ
ಬ್ರೆಜಿಲ್​ನಲ್ಲಿ ಸಂಭವಿಸಿದ ಕಾರು ಅಪಘಾತದ ಭಯಾನಕ ವಿಡಿಯೋ
Daily Devotional: ತುಳಸಿ ಕುಂಡದಲ್ಲಿರೋ ಮಣ್ಣಿನಿಂದ ಆಗುವ ಪ್ರಯೋಜನಗಳು
Daily Devotional: ತುಳಸಿ ಕುಂಡದಲ್ಲಿರೋ ಮಣ್ಣಿನಿಂದ ಆಗುವ ಪ್ರಯೋಜನಗಳು
ಈ ರಾಶಿಯವರಿಗೆ ಅನುಕಂಪವೇ ಅಧಿಕವಾಗಿ ಕೆಲಸ ಮಾಡಲಿದ್ದು, ದುರುಪಯೋಗ ಸಾಧ್ಯತೆ
ಈ ರಾಶಿಯವರಿಗೆ ಅನುಕಂಪವೇ ಅಧಿಕವಾಗಿ ಕೆಲಸ ಮಾಡಲಿದ್ದು, ದುರುಪಯೋಗ ಸಾಧ್ಯತೆ
ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾದ ಸಚಿವ ಜಾರಕಿಹೊಳಿ
ನವೆಂಬರ್​ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾದ ಸಚಿವ ಜಾರಕಿಹೊಳಿ