AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಬಡ ಪ್ರತಿಭೆಗಳಿಗಾಗಿ 2 ಕೋಟಿ ರೂ. ಮೀಸಲಿಟ್ಟ ಸಂಜು ಸ್ಯಾಮ್ಸನ್

Sanju Samson: ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯಿಂದ ಬರೋಬ್ಬರಿ 15 ಕೋಟಿ ರೂ. ಸಂಭಾವನೆ ಪಡೆಯುತ್ತಿರುವ ಸಂಜು ಸ್ಯಾಮ್ಸನ್ 2 ಕೋಟಿ ರೂ. ಅನ್ನು ಬಡ ಪ್ರತಿಭೆಗಳಿಗಾಗಿ ಮೀಸಲಿಟಿದ್ದಾರೆ

TV9 Web
| Edited By: |

Updated on: Jun 22, 2023 | 9:24 PM

Share
ಸಂಜು ಸ್ಯಾಮ್ಸನ್​ ಟೀಮ್ ಇಂಡಿಯಾದಲ್ಲಿ ಅವಕಾಶ ವಂಚಿತರಾಗುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಸ್ಯಾಮ್ಸನ್​ ಸುದ್ದಿಯಾಗಿರುವುದು ಅವರ ಮಾನವೀಯ ಗುಣಗಳಿಂದ ಎಂಬುದು ವಿಶೇಷ.

ಸಂಜು ಸ್ಯಾಮ್ಸನ್​ ಟೀಮ್ ಇಂಡಿಯಾದಲ್ಲಿ ಅವಕಾಶ ವಂಚಿತರಾಗುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಸ್ಯಾಮ್ಸನ್​ ಸುದ್ದಿಯಾಗಿರುವುದು ಅವರ ಮಾನವೀಯ ಗುಣಗಳಿಂದ ಎಂಬುದು ವಿಶೇಷ.

1 / 7
ಹೌದು, ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಸಂಜು ಸ್ಯಾಮ್ಸನ್ ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 15 ಕೋಟಿ ರೂ. ಈ ಹದಿನೈದು ಕೋಟಿಯಲ್ಲಿ 2 ಕೋಟಿ ರೂ. ಅನ್ನು ಬಡ ಪ್ರತಿಭೆಗಳಿಗಾಗಿ ಮೀಸಲಿಟಿದ್ದಾರೆ ಎಂಬ ವಿಚಾರ ಬಹಿರಂಗವಾಗಿದೆ.

ಹೌದು, ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಸಂಜು ಸ್ಯಾಮ್ಸನ್ ಪಡೆಯುತ್ತಿರುವ ಸಂಭಾವನೆ ಬರೋಬ್ಬರಿ 15 ಕೋಟಿ ರೂ. ಈ ಹದಿನೈದು ಕೋಟಿಯಲ್ಲಿ 2 ಕೋಟಿ ರೂ. ಅನ್ನು ಬಡ ಪ್ರತಿಭೆಗಳಿಗಾಗಿ ಮೀಸಲಿಟಿದ್ದಾರೆ ಎಂಬ ವಿಚಾರ ಬಹಿರಂಗವಾಗಿದೆ.

2 / 7
ಈ ವಿಚಾರವನ್ನು ಬಹಿರಂಗಪಡಿಸಿದ್ದು ಮತ್ಯಾರೂ ಅಲ್ಲ, ರಾಜಸ್ಥಾನ್ ರಾಯಲ್ಸ್ ತಂಡದ ಫಿಟ್​ನೆಸ್ ತರಬೇತುದಾರ ರಾಜಮಣಿ ಪ್ರಭು. ಈ ಬಗ್ಗೆ ಮಾತನಾಡಿರುವ ಪ್ರಭು, ಸಂಜು ಸ್ಯಾಮ್ಸನ್​ಗೆ ಹಲವು ಫ್ರಾಂಚೈಸಿಗಳಿಂದ ಆಫರ್ ಬಂದಿತ್ತು. ಇದಾಗ್ಯೂ ಅವರು ರಾಜಸ್ಥಾನ್ ರಾಯಲ್ಸ್ ತಂಡದಲ್ಲೇ ಉಳಿಯಲು ನಿರ್ಧರಿಸಿದ್ದರು.

ಈ ವಿಚಾರವನ್ನು ಬಹಿರಂಗಪಡಿಸಿದ್ದು ಮತ್ಯಾರೂ ಅಲ್ಲ, ರಾಜಸ್ಥಾನ್ ರಾಯಲ್ಸ್ ತಂಡದ ಫಿಟ್​ನೆಸ್ ತರಬೇತುದಾರ ರಾಜಮಣಿ ಪ್ರಭು. ಈ ಬಗ್ಗೆ ಮಾತನಾಡಿರುವ ಪ್ರಭು, ಸಂಜು ಸ್ಯಾಮ್ಸನ್​ಗೆ ಹಲವು ಫ್ರಾಂಚೈಸಿಗಳಿಂದ ಆಫರ್ ಬಂದಿತ್ತು. ಇದಾಗ್ಯೂ ಅವರು ರಾಜಸ್ಥಾನ್ ರಾಯಲ್ಸ್ ತಂಡದಲ್ಲೇ ಉಳಿಯಲು ನಿರ್ಧರಿಸಿದ್ದರು.

3 / 7
ಅವರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮತ್ತೆ ಚಾಂಪಿಯನ್​ ಮಾಡುವ ಕನಸು ಕಟ್ಟಿಕೊಂಡಿದ್ದಾರೆ. ಇದಕ್ಕಾಗಿ ಯಾವುದೇ ರೀತಿಯ ಆಫರ್ ಬಂದರೂ ಅವರು ಸ್ವೀಕರಿಸಿಲ್ಲ. ಇದೀಗ ರಾಜಸ್ಥಾನ್ ರಾಯಲ್ಸ್ ಅವರಿಗೆ 15 ಕೋಟಿ ರೂ. ಪಾವತಿಸುತ್ತಿದೆ.

ಅವರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮತ್ತೆ ಚಾಂಪಿಯನ್​ ಮಾಡುವ ಕನಸು ಕಟ್ಟಿಕೊಂಡಿದ್ದಾರೆ. ಇದಕ್ಕಾಗಿ ಯಾವುದೇ ರೀತಿಯ ಆಫರ್ ಬಂದರೂ ಅವರು ಸ್ವೀಕರಿಸಿಲ್ಲ. ಇದೀಗ ರಾಜಸ್ಥಾನ್ ರಾಯಲ್ಸ್ ಅವರಿಗೆ 15 ಕೋಟಿ ರೂ. ಪಾವತಿಸುತ್ತಿದೆ.

4 / 7
ಆದರೆ ಈ ಹದಿನೈದು ಕೋಟಿ ರೂ. ಮೊತ್ತದಲ್ಲಿ 2 ಕೋಟಿ ರೂ. ಅನ್ನು ಸ್ಯಾಮ್ಸನ್ ಬಡ ಪ್ರತಿಭೆಗಳಿಗಾಗಿ ಮೀಸಲಿಟ್ಟಿದ್ದಾರೆ. ಈ ಮೂಲಕ ಆರ್ಥಿಕವಾಗಿ ಹಿಂದುಳಿದಿರುವ ಯುವ ಪ್ರತಿಭಾವಂತ ಕ್ರಿಕೆಟಿಗರಿಗೆ ಹಣಕಾಸಿನ ನೆರವು ನೀಡುತ್ತಿದ್ದಾರೆ.

ಆದರೆ ಈ ಹದಿನೈದು ಕೋಟಿ ರೂ. ಮೊತ್ತದಲ್ಲಿ 2 ಕೋಟಿ ರೂ. ಅನ್ನು ಸ್ಯಾಮ್ಸನ್ ಬಡ ಪ್ರತಿಭೆಗಳಿಗಾಗಿ ಮೀಸಲಿಟ್ಟಿದ್ದಾರೆ. ಈ ಮೂಲಕ ಆರ್ಥಿಕವಾಗಿ ಹಿಂದುಳಿದಿರುವ ಯುವ ಪ್ರತಿಭಾವಂತ ಕ್ರಿಕೆಟಿಗರಿಗೆ ಹಣಕಾಸಿನ ನೆರವು ನೀಡುತ್ತಿದ್ದಾರೆ.

5 / 7
ಅಲ್ಲದೆ ಪ್ರತಿಭಾವಂತ ಮಕ್ಕಳಿಗೂ ಸಂಜು ಸ್ಯಾಮ್ಸನ್ ನೆರವಿನ ಹಸ್ತ ಚಾಚುತ್ತಿದ್ದಾರೆ. ಇದನ್ನು ಅವರು ಎಲ್ಲೂ ಕೂಡ ಹೇಳಿಕೊಂಡಿಲ್ಲ. ಯಾರಿಗೂ ಗೊತ್ತಾಗದಂತೆ ತಮ್ಮ ವೇತನದಿಂದಲೇ ಹಲವರ ನೆರವಿಗೆ ನಿಂತಿದ್ದಾರೆ ಎಂದು ರಾಜಮಣಿ ಪ್ರಭು ತಿಳಿಸಿದ್ದಾರೆ.

ಅಲ್ಲದೆ ಪ್ರತಿಭಾವಂತ ಮಕ್ಕಳಿಗೂ ಸಂಜು ಸ್ಯಾಮ್ಸನ್ ನೆರವಿನ ಹಸ್ತ ಚಾಚುತ್ತಿದ್ದಾರೆ. ಇದನ್ನು ಅವರು ಎಲ್ಲೂ ಕೂಡ ಹೇಳಿಕೊಂಡಿಲ್ಲ. ಯಾರಿಗೂ ಗೊತ್ತಾಗದಂತೆ ತಮ್ಮ ವೇತನದಿಂದಲೇ ಹಲವರ ನೆರವಿಗೆ ನಿಂತಿದ್ದಾರೆ ಎಂದು ರಾಜಮಣಿ ಪ್ರಭು ತಿಳಿಸಿದ್ದಾರೆ.

6 / 7
ಇದೀಗ ಸಂಜು ಸ್ಯಾಮ್ಸನ್ ಅವರ ಮಾನವೀಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇವೆಲ್ಲದರ ಈ ಬಾರಿಯಾದರೂ ಭಾರತ ತಂಡದಲ್ಲಿ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ ಯುವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್.

ಇದೀಗ ಸಂಜು ಸ್ಯಾಮ್ಸನ್ ಅವರ ಮಾನವೀಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಇವೆಲ್ಲದರ ಈ ಬಾರಿಯಾದರೂ ಭಾರತ ತಂಡದಲ್ಲಿ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ ಯುವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ