AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ತಂಡದಲ್ಲಿಲ್ಲ ಚಾನ್ಸ್​: ಮೈದಾನದ ಸಿಬ್ಬಂದಿಗಳ ನೆರವಿಗೆ ನಿಂತ ಸಂಜು ಸ್ಯಾಮ್ಸನ್

India vs New zealand: ಭಾರತ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಉಮ್ರಾನ್ ಮಲಿಕ್.

TV9 Web
| Edited By: |

Updated on: Nov 27, 2022 | 3:59 PM

Share
ಹ್ಯಾಮಿಲ್ಟನ್​ನಲ್ಲಿ ನಡೆಯಬೇಕಿದ್ದ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಮಳೆಯ ಕಾರಣ ಅರ್ಧದಲ್ಲೇ ರದ್ದಾಗಿದೆ. ತಡವಾಗಿ ಶುರುವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು.

ಹ್ಯಾಮಿಲ್ಟನ್​ನಲ್ಲಿ ನಡೆಯಬೇಕಿದ್ದ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಮಳೆಯ ಕಾರಣ ಅರ್ಧದಲ್ಲೇ ರದ್ದಾಗಿದೆ. ತಡವಾಗಿ ಶುರುವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಆದರೆ ಇತ್ತ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಪ್ಲೇಯಿಂಗ್ ಇಲೆವೆನ್​ ಅನ್ನು ಘೋಷಿಸಿದಾಗ ಅಚ್ಚರಿ ಕಾದಿತ್ತು. ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದರು. ಇದಾಗ್ಯೂ ಸ್ಯಾಮ್ಸನ್​ ಮೈದಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದರು. ಅದು ಕಣಕ್ಕಿಳಿಯುವ ಮೂಲಕವಲ್ಲ. ಬದಲಾಗಿ ನೆರವಿಗೆ ನಿಲ್ಲುವ ಮೂಲಕ ಎಂಬುದು ವಿಶೇಷ.

ಆದರೆ ಇತ್ತ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಪ್ಲೇಯಿಂಗ್ ಇಲೆವೆನ್​ ಅನ್ನು ಘೋಷಿಸಿದಾಗ ಅಚ್ಚರಿ ಕಾದಿತ್ತು. ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದರು. ಇದಾಗ್ಯೂ ಸ್ಯಾಮ್ಸನ್​ ಮೈದಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದರು. ಅದು ಕಣಕ್ಕಿಳಿಯುವ ಮೂಲಕವಲ್ಲ. ಬದಲಾಗಿ ನೆರವಿಗೆ ನಿಲ್ಲುವ ಮೂಲಕ ಎಂಬುದು ವಿಶೇಷ.

2 / 6
ಹೌದು, ಟಾಸ್ ಮುಗಿಯುತ್ತಿದ್ದಂತೆ ಮಳೆಯ ವಾತಾವರಣ ಆವರಿಸಿತು. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ಕವರ್‌ಗಳನ್ನು ಪಿಚ್‌ಗೆ ಕೊಂಡೊಯ್ಯಲು ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟರು. ಆ ವೇಳೆ ಸಿಬ್ಬಂದಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್ ಕವರ್‌ಗಳನ್ನು ಪಿಚ್‌ಗೆ ಎಳೆಯಲು ಸಹಾಯ ಮಾಡಿದರು.

ಹೌದು, ಟಾಸ್ ಮುಗಿಯುತ್ತಿದ್ದಂತೆ ಮಳೆಯ ವಾತಾವರಣ ಆವರಿಸಿತು. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ಕವರ್‌ಗಳನ್ನು ಪಿಚ್‌ಗೆ ಕೊಂಡೊಯ್ಯಲು ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟರು. ಆ ವೇಳೆ ಸಿಬ್ಬಂದಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್ ಕವರ್‌ಗಳನ್ನು ಪಿಚ್‌ಗೆ ಎಳೆಯಲು ಸಹಾಯ ಮಾಡಿದರು.

3 / 6
ಇದೀಗ ಪಿಚ್ ಕವರ್​ ಎಳೆಯುತ್ತಿರುವ ಸಂಜು ಸ್ಯಾಮ್ಸನ್ ಅವರ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ನೆಚ್ಚಿನ ಆಟಗಾರನ ನಡೆಗೆ ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವೇ ಹರಿಸಿದ್ದಾರೆ.

ಇದೀಗ ಪಿಚ್ ಕವರ್​ ಎಳೆಯುತ್ತಿರುವ ಸಂಜು ಸ್ಯಾಮ್ಸನ್ ಅವರ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ನೆಚ್ಚಿನ ಆಟಗಾರನ ನಡೆಗೆ ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವೇ ಹರಿಸಿದ್ದಾರೆ.

4 / 6
ಇನ್ನು ಕಳೆದ ಪಂದ್ಯದಲ್ಲಿ ಕಣಕ್ಕಿಳಿದು 36 ರನ್​ಗಳ ಉಪಯುಕ್ತ ಕಾಣಿಕೆ ನೀಡಿದ್ದ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈ ಬಿಡಲು ಮುಖ್ಯ ಕಾರಣ 6ನೇ ಬೌಲರ್​ನ ಆಯ್ಕೆ ಎಂದಿದ್ದಾರೆ ನಾಯಕ ಶಿಖರ್ ಧವನ್.

ಇನ್ನು ಕಳೆದ ಪಂದ್ಯದಲ್ಲಿ ಕಣಕ್ಕಿಳಿದು 36 ರನ್​ಗಳ ಉಪಯುಕ್ತ ಕಾಣಿಕೆ ನೀಡಿದ್ದ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈ ಬಿಡಲು ಮುಖ್ಯ ಕಾರಣ 6ನೇ ಬೌಲರ್​ನ ಆಯ್ಕೆ ಎಂದಿದ್ದಾರೆ ನಾಯಕ ಶಿಖರ್ ಧವನ್.

5 / 6
ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾದ ಬೌಲರ್​ಗಳು ವಿಫಲರಾಗಿದ್ದರು. ಹೀಗಾಗಿ ಐವರು ಬೌಲರ್​ಗಳ ಬದಲಿಗೆ 2ನೇ ಏಕದಿನ ಪಂದ್ಯದಲ್ಲಿ 6 ಬೌಲರ್​ಗಳನ್ನು ಆಡಿಸಲು ಟೀಮ್ ಮ್ಯಾನೇಜ್ಮೆಂಟ್ ಮುಂದಾಗಿದೆ. ಹೀಗಾಗಿ ಓರ್ವ ಬ್ಯಾಟ್ಸ್​ಮನ್ ಹೊರಗಿಟ್ಟು, ಬೌಲರ್​ರೊಬ್ಬರಿಗೆ ಅವಕಾಶ ನೀಡಿದ್ದೇವೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿರುವ ಸಂಜು ಸ್ಯಾಮ್ಸನ್​ಗೆ ಅವಕಾಶ ಕೈ ತಪ್ಪಿದೆ.

ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾದ ಬೌಲರ್​ಗಳು ವಿಫಲರಾಗಿದ್ದರು. ಹೀಗಾಗಿ ಐವರು ಬೌಲರ್​ಗಳ ಬದಲಿಗೆ 2ನೇ ಏಕದಿನ ಪಂದ್ಯದಲ್ಲಿ 6 ಬೌಲರ್​ಗಳನ್ನು ಆಡಿಸಲು ಟೀಮ್ ಮ್ಯಾನೇಜ್ಮೆಂಟ್ ಮುಂದಾಗಿದೆ. ಹೀಗಾಗಿ ಓರ್ವ ಬ್ಯಾಟ್ಸ್​ಮನ್ ಹೊರಗಿಟ್ಟು, ಬೌಲರ್​ರೊಬ್ಬರಿಗೆ ಅವಕಾಶ ನೀಡಿದ್ದೇವೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿರುವ ಸಂಜು ಸ್ಯಾಮ್ಸನ್​ಗೆ ಅವಕಾಶ ಕೈ ತಪ್ಪಿದೆ.

6 / 6
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ