AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ತಂಡದಲ್ಲಿಲ್ಲ ಚಾನ್ಸ್​: ಮೈದಾನದ ಸಿಬ್ಬಂದಿಗಳ ನೆರವಿಗೆ ನಿಂತ ಸಂಜು ಸ್ಯಾಮ್ಸನ್

India vs New zealand: ಭಾರತ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಉಮ್ರಾನ್ ಮಲಿಕ್.

TV9 Web
| Updated By: ಝಾಹಿರ್ ಯೂಸುಫ್|

Updated on: Nov 27, 2022 | 3:59 PM

Share
ಹ್ಯಾಮಿಲ್ಟನ್​ನಲ್ಲಿ ನಡೆಯಬೇಕಿದ್ದ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಮಳೆಯ ಕಾರಣ ಅರ್ಧದಲ್ಲೇ ರದ್ದಾಗಿದೆ. ತಡವಾಗಿ ಶುರುವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು.

ಹ್ಯಾಮಿಲ್ಟನ್​ನಲ್ಲಿ ನಡೆಯಬೇಕಿದ್ದ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ಮಳೆಯ ಕಾರಣ ಅರ್ಧದಲ್ಲೇ ರದ್ದಾಗಿದೆ. ತಡವಾಗಿ ಶುರುವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಆದರೆ ಇತ್ತ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಪ್ಲೇಯಿಂಗ್ ಇಲೆವೆನ್​ ಅನ್ನು ಘೋಷಿಸಿದಾಗ ಅಚ್ಚರಿ ಕಾದಿತ್ತು. ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದರು. ಇದಾಗ್ಯೂ ಸ್ಯಾಮ್ಸನ್​ ಮೈದಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದರು. ಅದು ಕಣಕ್ಕಿಳಿಯುವ ಮೂಲಕವಲ್ಲ. ಬದಲಾಗಿ ನೆರವಿಗೆ ನಿಲ್ಲುವ ಮೂಲಕ ಎಂಬುದು ವಿಶೇಷ.

ಆದರೆ ಇತ್ತ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಪ್ಲೇಯಿಂಗ್ ಇಲೆವೆನ್​ ಅನ್ನು ಘೋಷಿಸಿದಾಗ ಅಚ್ಚರಿ ಕಾದಿತ್ತು. ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಅವರನ್ನು ಕೈ ಬಿಟ್ಟಿದ್ದರು. ಇದಾಗ್ಯೂ ಸ್ಯಾಮ್ಸನ್​ ಮೈದಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದರು. ಅದು ಕಣಕ್ಕಿಳಿಯುವ ಮೂಲಕವಲ್ಲ. ಬದಲಾಗಿ ನೆರವಿಗೆ ನಿಲ್ಲುವ ಮೂಲಕ ಎಂಬುದು ವಿಶೇಷ.

2 / 6
ಹೌದು, ಟಾಸ್ ಮುಗಿಯುತ್ತಿದ್ದಂತೆ ಮಳೆಯ ವಾತಾವರಣ ಆವರಿಸಿತು. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ಕವರ್‌ಗಳನ್ನು ಪಿಚ್‌ಗೆ ಕೊಂಡೊಯ್ಯಲು ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟರು. ಆ ವೇಳೆ ಸಿಬ್ಬಂದಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್ ಕವರ್‌ಗಳನ್ನು ಪಿಚ್‌ಗೆ ಎಳೆಯಲು ಸಹಾಯ ಮಾಡಿದರು.

ಹೌದು, ಟಾಸ್ ಮುಗಿಯುತ್ತಿದ್ದಂತೆ ಮಳೆಯ ವಾತಾವರಣ ಆವರಿಸಿತು. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ಕವರ್‌ಗಳನ್ನು ಪಿಚ್‌ಗೆ ಕೊಂಡೊಯ್ಯಲು ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟರು. ಆ ವೇಳೆ ಸಿಬ್ಬಂದಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್ ಕವರ್‌ಗಳನ್ನು ಪಿಚ್‌ಗೆ ಎಳೆಯಲು ಸಹಾಯ ಮಾಡಿದರು.

3 / 6
ಇದೀಗ ಪಿಚ್ ಕವರ್​ ಎಳೆಯುತ್ತಿರುವ ಸಂಜು ಸ್ಯಾಮ್ಸನ್ ಅವರ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ನೆಚ್ಚಿನ ಆಟಗಾರನ ನಡೆಗೆ ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವೇ ಹರಿಸಿದ್ದಾರೆ.

ಇದೀಗ ಪಿಚ್ ಕವರ್​ ಎಳೆಯುತ್ತಿರುವ ಸಂಜು ಸ್ಯಾಮ್ಸನ್ ಅವರ ಫೋಟೋ ಮತ್ತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಲ್ಲದೆ ನೆಚ್ಚಿನ ಆಟಗಾರನ ನಡೆಗೆ ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವೇ ಹರಿಸಿದ್ದಾರೆ.

4 / 6
ಇನ್ನು ಕಳೆದ ಪಂದ್ಯದಲ್ಲಿ ಕಣಕ್ಕಿಳಿದು 36 ರನ್​ಗಳ ಉಪಯುಕ್ತ ಕಾಣಿಕೆ ನೀಡಿದ್ದ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈ ಬಿಡಲು ಮುಖ್ಯ ಕಾರಣ 6ನೇ ಬೌಲರ್​ನ ಆಯ್ಕೆ ಎಂದಿದ್ದಾರೆ ನಾಯಕ ಶಿಖರ್ ಧವನ್.

ಇನ್ನು ಕಳೆದ ಪಂದ್ಯದಲ್ಲಿ ಕಣಕ್ಕಿಳಿದು 36 ರನ್​ಗಳ ಉಪಯುಕ್ತ ಕಾಣಿಕೆ ನೀಡಿದ್ದ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈ ಬಿಡಲು ಮುಖ್ಯ ಕಾರಣ 6ನೇ ಬೌಲರ್​ನ ಆಯ್ಕೆ ಎಂದಿದ್ದಾರೆ ನಾಯಕ ಶಿಖರ್ ಧವನ್.

5 / 6
ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾದ ಬೌಲರ್​ಗಳು ವಿಫಲರಾಗಿದ್ದರು. ಹೀಗಾಗಿ ಐವರು ಬೌಲರ್​ಗಳ ಬದಲಿಗೆ 2ನೇ ಏಕದಿನ ಪಂದ್ಯದಲ್ಲಿ 6 ಬೌಲರ್​ಗಳನ್ನು ಆಡಿಸಲು ಟೀಮ್ ಮ್ಯಾನೇಜ್ಮೆಂಟ್ ಮುಂದಾಗಿದೆ. ಹೀಗಾಗಿ ಓರ್ವ ಬ್ಯಾಟ್ಸ್​ಮನ್ ಹೊರಗಿಟ್ಟು, ಬೌಲರ್​ರೊಬ್ಬರಿಗೆ ಅವಕಾಶ ನೀಡಿದ್ದೇವೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿರುವ ಸಂಜು ಸ್ಯಾಮ್ಸನ್​ಗೆ ಅವಕಾಶ ಕೈ ತಪ್ಪಿದೆ.

ಮೊದಲ ಏಕದಿನದಲ್ಲಿ ಟೀಮ್ ಇಂಡಿಯಾದ ಬೌಲರ್​ಗಳು ವಿಫಲರಾಗಿದ್ದರು. ಹೀಗಾಗಿ ಐವರು ಬೌಲರ್​ಗಳ ಬದಲಿಗೆ 2ನೇ ಏಕದಿನ ಪಂದ್ಯದಲ್ಲಿ 6 ಬೌಲರ್​ಗಳನ್ನು ಆಡಿಸಲು ಟೀಮ್ ಮ್ಯಾನೇಜ್ಮೆಂಟ್ ಮುಂದಾಗಿದೆ. ಹೀಗಾಗಿ ಓರ್ವ ಬ್ಯಾಟ್ಸ್​ಮನ್ ಹೊರಗಿಟ್ಟು, ಬೌಲರ್​ರೊಬ್ಬರಿಗೆ ಅವಕಾಶ ನೀಡಿದ್ದೇವೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿರುವ ಸಂಜು ಸ್ಯಾಮ್ಸನ್​ಗೆ ಅವಕಾಶ ಕೈ ತಪ್ಪಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ