AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanju Samson: ಶತಕಗಳ ವೀರ ಸಂಜು ಸ್ಯಾಮ್ಸನ್​ಗೆ ಒಲಿದ ನಾಯಕತ್ವ ಪಟ್ಟ

Sanju Samson: ಟೀಂ ಇಂಡಿಯಾದಲ್ಲಿ ಸ್ಥಿರ ಸ್ಥಾನ ಪಡೆಯಲು ಹೆಣಗಾಡುತ್ತಿದ್ದ ಸಂಜು ಸ್ಯಾಮ್ಸನ್, ಇತ್ತೀಚಿನ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಐದು ಇನ್ನಿಂಗ್ಸ್‌ಗಳಲ್ಲಿ ಮೂರು ಶತಕಗಳನ್ನು ಬಾರಿಸಿದ ಅವರು ಈಗ ಟೀಂ ಇಂಡಿಯಾದಲ್ಲಿ ಖಾಯಂ ಆರಂಭಿಕ ಆಟಗಾರರಾಗಿದ್ದಾರೆ. ಇದಲ್ಲದೆ, ಅವರು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕೇರಳ ತಂಡಕ್ಕೆ ನಾಯಕತ್ವ ವಹಿಸಲಿದ್ದಾರೆ.

ಪೃಥ್ವಿಶಂಕರ
|

Updated on: Nov 20, 2024 | 3:25 PM

ಹಲವು ವರ್ಷಗಳಿಂದ ಟೀಂ ಇಂಡಿಯಾದಲ್ಲಿ ಆಡುತ್ತಿದ್ದರೂ, ಇದುವರೆಗೂ ಖಾಯಂ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌, ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದ ಟಿ20 ತಂಡದಲ್ಲಿ ಖಾಯಂ ಆರಂಭಿಕನಾಗಿ ಸ್ಥಾನ ಪಡೆಯುವುತ್ತ ಹೆಜ್ಜೆ ಇಟ್ಟಿದ್ದಾರೆ. ಆಡಿರುವ ಐದು ಇನ್ನಿಂಗ್ಸ್​ಗಳಲ್ಲಿ 3 ಶತಕ ಸಿಡಿಸಿರುವ ಸಂಜುಗೆ ಭಾರತ ತಂಡದಲ್ಲಿ ಸದ್ಯಕ್ಕೆ ಸ್ಥಾನ ಖಾಯಂ ಆಗಿದೆ.

ಹಲವು ವರ್ಷಗಳಿಂದ ಟೀಂ ಇಂಡಿಯಾದಲ್ಲಿ ಆಡುತ್ತಿದ್ದರೂ, ಇದುವರೆಗೂ ಖಾಯಂ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌, ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದ ಟಿ20 ತಂಡದಲ್ಲಿ ಖಾಯಂ ಆರಂಭಿಕನಾಗಿ ಸ್ಥಾನ ಪಡೆಯುವುತ್ತ ಹೆಜ್ಜೆ ಇಟ್ಟಿದ್ದಾರೆ. ಆಡಿರುವ ಐದು ಇನ್ನಿಂಗ್ಸ್​ಗಳಲ್ಲಿ 3 ಶತಕ ಸಿಡಿಸಿರುವ ಸಂಜುಗೆ ಭಾರತ ತಂಡದಲ್ಲಿ ಸದ್ಯಕ್ಕೆ ಸ್ಥಾನ ಖಾಯಂ ಆಗಿದೆ.

1 / 5
ಕೆಲವು ದಿನಗಳ ಹಿಂದೆ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 3-1 ಅಂತರದಿಂದ ಗೆದ್ದುಕೊಂಡಿತ್ತು. ಭಾರತ ತಂಡದ ಈ ಗೆಲುವಿನಲ್ಲಿ ಸಂಜು ಅವರ ಪಾತ್ರ ಅಪಾರವಾಗಿತ್ತು. ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಆಡಿದ 4 ಪಂದ್ಯಗಳಲ್ಲಿ 2 ಭರ್ಜರಿ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದರು.

ಕೆಲವು ದಿನಗಳ ಹಿಂದೆ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 3-1 ಅಂತರದಿಂದ ಗೆದ್ದುಕೊಂಡಿತ್ತು. ಭಾರತ ತಂಡದ ಈ ಗೆಲುವಿನಲ್ಲಿ ಸಂಜು ಅವರ ಪಾತ್ರ ಅಪಾರವಾಗಿತ್ತು. ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಆಡಿದ 4 ಪಂದ್ಯಗಳಲ್ಲಿ 2 ಭರ್ಜರಿ ಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದರು.

2 / 5
ಇದಲ್ಲದೆ ಸಂಜು ಆಡಿರುವ ಕಳೆದ 5 ಇನ್ನಿಂಗ್ಸ್‌ಗಳಲ್ಲಿ 3 ಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ಸಂಜು ಅವರ ಈ ಅದ್ಭುತ ಫಾರ್ಮ್​ ಅನ್ನು ಗಮನಿಸಿರುವ ಕೇರಳ ಕ್ರಿಕೆಟ್ ಸಂಸ್ಥೆ, ಈ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್​ಗೆ ನಾಯಕತ್ವ ಪಟ್ಟ ನೀಡಿದೆ. ವಾಸ್ತವವಾಗಿ ಸಂಜು 23 ರಿಂದ ಆರಂಭವಾಗಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕೇರಳ ತಂಡವನ್ನು ಮುನ್ನಡೆಸಲಿದ್ದಾರೆ.

ಇದಲ್ಲದೆ ಸಂಜು ಆಡಿರುವ ಕಳೆದ 5 ಇನ್ನಿಂಗ್ಸ್‌ಗಳಲ್ಲಿ 3 ಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ಸಂಜು ಅವರ ಈ ಅದ್ಭುತ ಫಾರ್ಮ್​ ಅನ್ನು ಗಮನಿಸಿರುವ ಕೇರಳ ಕ್ರಿಕೆಟ್ ಸಂಸ್ಥೆ, ಈ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್​ಗೆ ನಾಯಕತ್ವ ಪಟ್ಟ ನೀಡಿದೆ. ವಾಸ್ತವವಾಗಿ ಸಂಜು 23 ರಿಂದ ಆರಂಭವಾಗಲಿರುವ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕೇರಳ ತಂಡವನ್ನು ಮುನ್ನಡೆಸಲಿದ್ದಾರೆ.

3 / 5
ಸೈಯದ್ ಮುಷ್ತಾಕ್ ಅಲಿ ಟ್ರೋಫಿಯು ಇದೇ ನವೆಂಬರ್ 23 ರಿಂದ ಆರಂಭವಾಗಲಿದ್ದು, ಡಿಸೆಂಬರ್ 15 ರವರೆಗೆ ನಡೆಯಲಿದೆ. ಈ ಸರಣಿಯಲ್ಲಿ ಸಂಜು ಕೇರಳ ತಂಡವನ್ನು ಮುನ್ನಡೆಸುವುದನ್ನು ಕಾಣಬಹುದಾಗಿದೆ. ಟೀಂ ಇಂಡಿಯಾ ಮುಂದಿನ ಜನವರಿಯವರೆಗೆ ಯಾವುದೇ ವೈಟ್ ಬಾಲ್ ಪಂದ್ಯವನ್ನು ಆಡುವುದಿಲ್ಲ. ಇದರಿಂದಾಗಿ ಇಡೀ ಸೈಯದ್ ಮುಷ್ತಾಕ್ ಅಲಿ ಪಂದ್ಯಾವಳಿಗೆ ಸ್ಯಾಮ್ಸನ್ ಲಭ್ಯರಿರಲಿದ್ದಾರೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯು ಇದೇ ನವೆಂಬರ್ 23 ರಿಂದ ಆರಂಭವಾಗಲಿದ್ದು, ಡಿಸೆಂಬರ್ 15 ರವರೆಗೆ ನಡೆಯಲಿದೆ. ಈ ಸರಣಿಯಲ್ಲಿ ಸಂಜು ಕೇರಳ ತಂಡವನ್ನು ಮುನ್ನಡೆಸುವುದನ್ನು ಕಾಣಬಹುದಾಗಿದೆ. ಟೀಂ ಇಂಡಿಯಾ ಮುಂದಿನ ಜನವರಿಯವರೆಗೆ ಯಾವುದೇ ವೈಟ್ ಬಾಲ್ ಪಂದ್ಯವನ್ನು ಆಡುವುದಿಲ್ಲ. ಇದರಿಂದಾಗಿ ಇಡೀ ಸೈಯದ್ ಮುಷ್ತಾಕ್ ಅಲಿ ಪಂದ್ಯಾವಳಿಗೆ ಸ್ಯಾಮ್ಸನ್ ಲಭ್ಯರಿರಲಿದ್ದಾರೆ.

4 / 5
ಕೇರಳ ತಂಡ: ಸಂಜು ಸ್ಯಾಮ್ಸನ್ (ನಾಯಕ), ಸಚಿನ್ ಬೇಬಿ, ರೋಹನ್ ಕುನ್ನುಮಲ್, ಜಲಜ್ ಸಕ್ಸೇನಾ, ವಿಷ್ಣು ವಿನೋದ್, ಮೊಹಮ್ಮದ್ ಅಜರುದ್ದೀನ್, ಬಾಸಿಲ್ ಥಂಪಿ, ಎಸ್ ನಿಜಾರ್, ಅಬ್ದುಲ್ ಬಸಿತ್, ಎ ಸ್ಕಾರಿಯಾ, ಅಜ್ನಾಸ್ ಇಎಮ್, ಸಿಜೋಮನ್ ಜೋಸೆಫ್, ಮಿಧುನ್ ಎಸ್, ವೈಶಾಖ್ ಚಂದ್ರನ್, ವಿನೋದ್ ಕುಮಾರ್ ಸಿವಿ, ಬಾಸಿಲ್ ಎನ್‌ಪಿ, ಶರಫುದ್ದೀನ್ ಎನ್‌ಎಂ, ನಿಧೀಶ್ ಎಂಡಿ.

ಕೇರಳ ತಂಡ: ಸಂಜು ಸ್ಯಾಮ್ಸನ್ (ನಾಯಕ), ಸಚಿನ್ ಬೇಬಿ, ರೋಹನ್ ಕುನ್ನುಮಲ್, ಜಲಜ್ ಸಕ್ಸೇನಾ, ವಿಷ್ಣು ವಿನೋದ್, ಮೊಹಮ್ಮದ್ ಅಜರುದ್ದೀನ್, ಬಾಸಿಲ್ ಥಂಪಿ, ಎಸ್ ನಿಜಾರ್, ಅಬ್ದುಲ್ ಬಸಿತ್, ಎ ಸ್ಕಾರಿಯಾ, ಅಜ್ನಾಸ್ ಇಎಮ್, ಸಿಜೋಮನ್ ಜೋಸೆಫ್, ಮಿಧುನ್ ಎಸ್, ವೈಶಾಖ್ ಚಂದ್ರನ್, ವಿನೋದ್ ಕುಮಾರ್ ಸಿವಿ, ಬಾಸಿಲ್ ಎನ್‌ಪಿ, ಶರಫುದ್ದೀನ್ ಎನ್‌ಎಂ, ನಿಧೀಶ್ ಎಂಡಿ.

5 / 5
Follow us
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ