AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಪರ ಇಬ್ಬರು ಯುವ ದಾಂಡಿಗರು ಕಣಕ್ಕಿಳಿಯುವುದು ಬಹುತೇಕ ಖಚಿತ

India vs England 3rd Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಗುರುವಾರದಿಂದ ಶುರುವಾಗಲಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಇಬ್ಬರು ಆಟಗಾರರು ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ.

TV9 Web
| Edited By: |

Updated on: Feb 13, 2024 | 7:35 AM

Share
ರಾಜ್​ಕೋಟ್​ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಇಬ್ಬರು ಯುವ ಆಟಗಾರರು ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಸೌರಾಷ್ಟ್ರ ಕ್ರಿಕೆಟ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಕೆಎಲ್ ರಾಹುಲ್ ಅಲಭ್ಯರಾಗಿದ್ದಾರೆ. ಮತ್ತೊಂದೆಡೆ ಈ ಸರಣಿಯಿಂದ ಶ್ರೇಯಸ್ ಅಯ್ಯರ್ ಹೊರಬಿದ್ದಿದ್ದಾರೆ.

ರಾಜ್​ಕೋಟ್​ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಇಬ್ಬರು ಯುವ ಆಟಗಾರರು ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಸೌರಾಷ್ಟ್ರ ಕ್ರಿಕೆಟ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಕೆಎಲ್ ರಾಹುಲ್ ಅಲಭ್ಯರಾಗಿದ್ದಾರೆ. ಮತ್ತೊಂದೆಡೆ ಈ ಸರಣಿಯಿಂದ ಶ್ರೇಯಸ್ ಅಯ್ಯರ್ ಹೊರಬಿದ್ದಿದ್ದಾರೆ.

1 / 7
ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಅದರಂತೆ ಇಲ್ಲಿ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ಸರ್ಫರಾಝ್ ಖಾನ್​ ಭಾರತ ತಂಡದ ಪಾದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಅದರಂತೆ ಇಲ್ಲಿ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ಸರ್ಫರಾಝ್ ಖಾನ್​ ಭಾರತ ತಂಡದ ಪಾದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

2 / 7
ಮತ್ತೊಂದೆಡೆ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ವಿಫಲರಾಗಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕೆಎಸ್ ಭರತ್ ಬದಲಿಗೆ ಧ್ರುವ್ ಜುರೇಲ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗಲಿದೆ ತಿಳಿದು ಬಂದಿದೆ. ಇನ್ನು 2ನೇ ಟೆಸ್ಟ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ರಜತ್ ಪಾಟಿದಾರ್ ಮೂರನೇ ಪಂದ್ಯದಲ್ಲೂ ಮುಂದುವರೆಯಲಿದ್ದಾರೆ.

ಮತ್ತೊಂದೆಡೆ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ವಿಫಲರಾಗಿದ್ದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕೆಎಸ್ ಭರತ್ ಬದಲಿಗೆ ಧ್ರುವ್ ಜುರೇಲ್​ಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಗಲಿದೆ ತಿಳಿದು ಬಂದಿದೆ. ಇನ್ನು 2ನೇ ಟೆಸ್ಟ್ ಪಂದ್ಯದ ಮೂಲಕ ಪಾದಾರ್ಪಣೆ ಮಾಡಿದ್ದ ರಜತ್ ಪಾಟಿದಾರ್ ಮೂರನೇ ಪಂದ್ಯದಲ್ಲೂ ಮುಂದುವರೆಯಲಿದ್ದಾರೆ.

3 / 7
ಇತ್ತ ಸರ್ಫರಾಝ್ ಖಾನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕರೆ 4ನೇ ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಏಕೆಂದರೆ ಈ ಹಿಂದೆ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದರೆ, ಶ್ರೇಯಸ್ ಅಯ್ಯರ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಹೀಗಾಗಿ ಈ ಕ್ರಮಾಂಕಗಳಲ್ಲೇ ಸರ್ಫರಾಝ್​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

ಇತ್ತ ಸರ್ಫರಾಝ್ ಖಾನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕರೆ 4ನೇ ಅಥವಾ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಏಕೆಂದರೆ ಈ ಹಿಂದೆ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಆಡಿದ್ದರೆ, ಶ್ರೇಯಸ್ ಅಯ್ಯರ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಹೀಗಾಗಿ ಈ ಕ್ರಮಾಂಕಗಳಲ್ಲೇ ಸರ್ಫರಾಝ್​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

4 / 7
ಇನ್ನು ವಿಕೆಟ್ ಕೀಪರ್ ಬ್ಯಾಟರ್​ ಆಗಿ ಧ್ರುವ್ ಜುರೇಲ್ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೆಎಸ್ ಭರತ್ ಇದೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಅದೇ ಕ್ರಮಾಂಕದಲ್ಲಿ ಧ್ರುವ್ ಜುರೇಲ್ ಚೊಚ್ಚಲ ಪಂದ್ಯವನ್ನಾಡಬಹುದು.

ಇನ್ನು ವಿಕೆಟ್ ಕೀಪರ್ ಬ್ಯಾಟರ್​ ಆಗಿ ಧ್ರುವ್ ಜುರೇಲ್ 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಕೆಎಸ್ ಭರತ್ ಇದೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಅದೇ ಕ್ರಮಾಂಕದಲ್ಲಿ ಧ್ರುವ್ ಜುರೇಲ್ ಚೊಚ್ಚಲ ಪಂದ್ಯವನ್ನಾಡಬಹುದು.

5 / 7
ಅದರಂತೆ ಫೆಬ್ರವರಿ 15 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ಯುವ ದಾಂಡಿಗರಾದ ಸರ್ಫರಾಝ್ ಹಾಗೂ ಧ್ರುವ್ ಜುರೇಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಹೀಗೆ ಸಿಗುವ ಅವಕಾಶದಲ್ಲಿ ಯಾರು ಮಿಂಚಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಅದರಂತೆ ಫೆಬ್ರವರಿ 15 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ಯುವ ದಾಂಡಿಗರಾದ ಸರ್ಫರಾಝ್ ಹಾಗೂ ಧ್ರುವ್ ಜುರೇಲ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡುವುದು ಬಹುತೇಕ ಖಚಿತವಾಗಿದೆ. ಹೀಗೆ ಸಿಗುವ ಅವಕಾಶದಲ್ಲಿ ಯಾರು ಮಿಂಚಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

6 / 7
ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ*, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

7 / 7
Web contact
Web contact

TV9 Kannada

Read More
Follow Us
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ