AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sarfaraz Khan: 9 ಶತಕ, 5 ಅರ್ಧಶತಕ: ದೇಶೀಯ ಅಂಗಳದಲ್ಲಿ ಸರ್ಫರಾಜ್ ಕಿಂಗ್..!

Sarfaraz Khan: ಯಾವುದೇ ತಂಡದ ನಿರ್ಣಾಯಕ ಪಂದ್ಯದಲ್ಲಿ ಸರ್ಫರಾಜ್ ಖಾನ್ ಮಹತ್ವದ ಪಾತ್ರವಹಿಸುತ್ತಿರುವುದು ಸ್ಪಷ್ಟ. ಹೀಗಾಗಿಯೇ ಭರ್ಜರಿ ಫಾರ್ಮ್​ನಲ್ಲಿರುವ ಯುವ ಬ್ಯಾಟ್ಸ್​ಮನ್​ಗೆ ಭಾರತ ಟೆಸ್ಟ್​ ತಂಡದಲ್ಲಿ ಅವಕಾಶ ನೀಡಬೇಕೆಂಬ ಕೂಗುಗಳು ಕೇಳಿ ಬರುತ್ತಿದೆ.

TV9 Web
| Edited By: |

Updated on: Oct 02, 2022 | 12:05 PM

Share
ಭಾರತದ ಯುವ ಬ್ಯಾಟ್ಸ್​ಮನ್ ಸರ್ಫರಾಜ್ ಖಾನ್ ಸದ್ಯ ದೇಶೀಯ ಅಂಗಳದ ಅತ್ಯಂತ ಯಶಸ್ವಿ ಬ್ಯಾಟ್ಸ್​ಮನ್. ಏಕೆಂದರೆ ಸರ್ಫರಾಜ್ ಬ್ಯಾಟ್​ನಿಂದ ಬ್ಯಾಕ್ ಟು ಬ್ಯಾಕ್ ಶತಕಗಳು ಮೂಡಿಬರುತ್ತಿವೆ. ಶತಕ ಬರದಿದ್ದರೆ ಅರ್ಧಶತಕಗಳು ಸಿಡಿಯುತ್ತಿವೆ.

ಭಾರತದ ಯುವ ಬ್ಯಾಟ್ಸ್​ಮನ್ ಸರ್ಫರಾಜ್ ಖಾನ್ ಸದ್ಯ ದೇಶೀಯ ಅಂಗಳದ ಅತ್ಯಂತ ಯಶಸ್ವಿ ಬ್ಯಾಟ್ಸ್​ಮನ್. ಏಕೆಂದರೆ ಸರ್ಫರಾಜ್ ಬ್ಯಾಟ್​ನಿಂದ ಬ್ಯಾಕ್ ಟು ಬ್ಯಾಕ್ ಶತಕಗಳು ಮೂಡಿಬರುತ್ತಿವೆ. ಶತಕ ಬರದಿದ್ದರೆ ಅರ್ಧಶತಕಗಳು ಸಿಡಿಯುತ್ತಿವೆ.

1 / 5
ಅಂದರೆ ಕಳೆದ 24 ಇನಿಂಗ್ಸ್​ಗಳಲ್ಲಿ ಸರ್ಫರಾಜ್ ಖಾನ್ ಬರೋಬ್ಬರಿ 9 ಶತಕಗಳನ್ನು ಸಿಡಿಸಿದ್ದಾರೆ. ಅಲ್ಲದೆ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಮೂಲಕ ಬರೋಬ್ಬರಿ 2,200 ರನ್​ ಕಲೆಹಾಕಿದ್ದಾರೆ.

ಅಂದರೆ ಕಳೆದ 24 ಇನಿಂಗ್ಸ್​ಗಳಲ್ಲಿ ಸರ್ಫರಾಜ್ ಖಾನ್ ಬರೋಬ್ಬರಿ 9 ಶತಕಗಳನ್ನು ಸಿಡಿಸಿದ್ದಾರೆ. ಅಲ್ಲದೆ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಮೂಲಕ ಬರೋಬ್ಬರಿ 2,200 ರನ್​ ಕಲೆಹಾಕಿದ್ದಾರೆ.

2 / 5
ಅಷ್ಟೇ ಯಾಕೆ, ಕ್ರಿಕೆಟ್ ಪಿತಾಮಹಾ ಎಂದು ಕರೆಯಲ್ಪಡುವ ಡಾನ್ ಬ್ರಾಡ್ಮನ್ ಅವರ ನಂತರದ ಸ್ಥಾನವನ್ನೂ ಕೂಡ ಸರ್ಫರಾಜ್ ಅಲಂಕರಿಸಿದ್ದಾರೆ. ಅಂದರೆ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಕನಿಷ್ಠ 2 ಸಾವಿರ ರನ್ ಬಾರಿಸಿ ಅತ್ಯುತ್ತಮ ಬ್ಯಾಟಿಂಗ್ ಅವರೇಜ್ ಹೊಂದಿರುವ ಆಟಗಾರರಲ್ಲಿ ಆಸ್ಟ್ರೇಲಿಯಾದ ದಂತಕಥೆ ಬ್ರಾಡ್ಮನ್ 95.14 ಸರಾಸರಿಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 81.49* ಸರಾಸರಿಯೊಂದಿಗೆ ಸರ್ಫರಾಜ್ ಖಾನ್ 2ನೇ ಸ್ಥಾನಕ್ಕೇರಿದ್ದಾರೆ.

ಅಷ್ಟೇ ಯಾಕೆ, ಕ್ರಿಕೆಟ್ ಪಿತಾಮಹಾ ಎಂದು ಕರೆಯಲ್ಪಡುವ ಡಾನ್ ಬ್ರಾಡ್ಮನ್ ಅವರ ನಂತರದ ಸ್ಥಾನವನ್ನೂ ಕೂಡ ಸರ್ಫರಾಜ್ ಅಲಂಕರಿಸಿದ್ದಾರೆ. ಅಂದರೆ ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಕನಿಷ್ಠ 2 ಸಾವಿರ ರನ್ ಬಾರಿಸಿ ಅತ್ಯುತ್ತಮ ಬ್ಯಾಟಿಂಗ್ ಅವರೇಜ್ ಹೊಂದಿರುವ ಆಟಗಾರರಲ್ಲಿ ಆಸ್ಟ್ರೇಲಿಯಾದ ದಂತಕಥೆ ಬ್ರಾಡ್ಮನ್ 95.14 ಸರಾಸರಿಯೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 81.49* ಸರಾಸರಿಯೊಂದಿಗೆ ಸರ್ಫರಾಜ್ ಖಾನ್ 2ನೇ ಸ್ಥಾನಕ್ಕೇರಿದ್ದಾರೆ.

3 / 5
ಇಲ್ಲಿ ಮತ್ತೊಂದು ವಿಶೇಷ ಎಂದರೆ ನಿರ್ಣಾಯಕ ಪಂದ್ಯಗಳಲ್ಲಿ ಸರ್ಫರಾಜ್ ಖಾನ್ ಅವರ ಬ್ಯಾಟಿಂಗ್. ಅಂದರೆ ಈ ಬಾರಿಯ ರಣಜಿ ಫೈನಲ್​ ಪಂದ್ಯದಲ್ಲಿ 134 ರನ್ ಬಾರಿಸಿ ತಂಡಕ್ಕೆ ನೆರವಾಗಿದ್ದರು. ಇನ್ನು ದುಲೀಪ್ ಟ್ರೋಫಿ ಫೈನಲ್​ನಲ್ಲೂ 127 ರನ್​ ಬಾರಿಸಿ ವೆಸ್ಟ್ ಝೋನ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇಲ್ಲಿ ಮತ್ತೊಂದು ವಿಶೇಷ ಎಂದರೆ ನಿರ್ಣಾಯಕ ಪಂದ್ಯಗಳಲ್ಲಿ ಸರ್ಫರಾಜ್ ಖಾನ್ ಅವರ ಬ್ಯಾಟಿಂಗ್. ಅಂದರೆ ಈ ಬಾರಿಯ ರಣಜಿ ಫೈನಲ್​ ಪಂದ್ಯದಲ್ಲಿ 134 ರನ್ ಬಾರಿಸಿ ತಂಡಕ್ಕೆ ನೆರವಾಗಿದ್ದರು. ಇನ್ನು ದುಲೀಪ್ ಟ್ರೋಫಿ ಫೈನಲ್​ನಲ್ಲೂ 127 ರನ್​ ಬಾರಿಸಿ ವೆಸ್ಟ್ ಝೋನ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

4 / 5
ಇದೀಗ ಇರಾನಿ ಕಪ್​ನಲ್ಲೂ 138 ರನ್​ ಬಾರಿಸಿ ಅಬ್ಬರಿಸಿದ್ದಾರೆ. ಅಂದರೆ ಯಾವುದೇ ತಂಡದ ನಿರ್ಣಾಯಕ ಪಂದ್ಯದಲ್ಲಿ ಸರ್ಫರಾಜ್ ಖಾನ್ ಮಹತ್ವದ ಪಾತ್ರವಹಿಸುತ್ತಿರುವುದು ಸ್ಪಷ್ಟ. ಹೀಗಾಗಿಯೇ ಭರ್ಜರಿ ಫಾರ್ಮ್​ನಲ್ಲಿರುವ ಯುವ ಬ್ಯಾಟ್ಸ್​ಮನ್​ಗೆ ಟೆಸ್ಟ್​ನಲ್ಲಿ ಅವಕಾಶ ನೀಡಬೇಕೆಂಬ ಕೂಗುಗಳು ಕೇಳಿ ಬರುತ್ತಿದೆ. ಅದರಂತೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

ಇದೀಗ ಇರಾನಿ ಕಪ್​ನಲ್ಲೂ 138 ರನ್​ ಬಾರಿಸಿ ಅಬ್ಬರಿಸಿದ್ದಾರೆ. ಅಂದರೆ ಯಾವುದೇ ತಂಡದ ನಿರ್ಣಾಯಕ ಪಂದ್ಯದಲ್ಲಿ ಸರ್ಫರಾಜ್ ಖಾನ್ ಮಹತ್ವದ ಪಾತ್ರವಹಿಸುತ್ತಿರುವುದು ಸ್ಪಷ್ಟ. ಹೀಗಾಗಿಯೇ ಭರ್ಜರಿ ಫಾರ್ಮ್​ನಲ್ಲಿರುವ ಯುವ ಬ್ಯಾಟ್ಸ್​ಮನ್​ಗೆ ಟೆಸ್ಟ್​ನಲ್ಲಿ ಅವಕಾಶ ನೀಡಬೇಕೆಂಬ ಕೂಗುಗಳು ಕೇಳಿ ಬರುತ್ತಿದೆ. ಅದರಂತೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಅವಕಾಶ ಪಡೆಯಲಿದ್ದಾರಾ ಕಾದು ನೋಡಬೇಕಿದೆ.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ