AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡಂಕಿ ಎಸೆತಗಳಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಸರ್ಫರಾಝ್ ಖಾನ್

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ಜರುಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು 5 ಪಂದ್ಯಗಳನ್ನಾಡಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಸರ್ಫರಾಝ್ ಖಾನ್​ಗೆ ಸ್ಥಾನ ನೀಡಲಾಗಿಲ್ಲ. ಆದರೀಗ ಟೀಮ್ ಇಂಡಿಯಾ ಬೌಲರ್​ಗಳ ವಿರುದ್ಧವೇ ಸರ್ಫರಾಝ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 16, 2025 | 7:30 AM

Share
ಇಂಗ್ಲೆಂಡ್​ ವಿರುದ್ಧದ ಟೆಸ್ಟ್ ಸರಣಿಯಿಂದ ವಂಚಿತರಾಗಿರುವ ಸರ್ಫರಾಝ್ ಖಾನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅದು ಕೂಡ ಇಂಗ್ಲೆಂಡ್ ನೆಲದಲ್ಲಿ ಎಂಬುದು ವಿಶೇಷ. ಈ ಹಿಂದೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 92 ರನ್ ಬಾರಿಸಿ ಮಿಂಚಿದ್ದ ಸರ್ಫರಾಝ್ ಇದೀಗ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ.

ಇಂಗ್ಲೆಂಡ್​ ವಿರುದ್ಧದ ಟೆಸ್ಟ್ ಸರಣಿಯಿಂದ ವಂಚಿತರಾಗಿರುವ ಸರ್ಫರಾಝ್ ಖಾನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅದು ಕೂಡ ಇಂಗ್ಲೆಂಡ್ ನೆಲದಲ್ಲಿ ಎಂಬುದು ವಿಶೇಷ. ಈ ಹಿಂದೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 92 ರನ್ ಬಾರಿಸಿ ಮಿಂಚಿದ್ದ ಸರ್ಫರಾಝ್ ಇದೀಗ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ.

1 / 5
ಭಾರತ ಮತ್ತು ಭಾರತ ಎ ತಂಡಗಳ ನಡುವಣ ಅಭ್ಯಾಸ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದ ಸರ್ಫರಾಝ್ ಕೇವಲ 76 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಸ್ಪೋಟಕ ಇನಿಂಗ್ಸ್​ನಲ್ಲಿ ಸರ್ಫರಾಝ್ ಬ್ಯಾಟ್​ನಿಂದ ಮೂಡಿಬಂದ ಫೋರ್​ಗಳ ಸಂಖ್ಯೆ 15, ಹಾಗೆಯೇ 2 ಸಿಕ್ಸರ್​ಗಳನ್ನು ಸಹ ಬಾರಿಸಿದ್ದಾರೆ.

ಭಾರತ ಮತ್ತು ಭಾರತ ಎ ತಂಡಗಳ ನಡುವಣ ಅಭ್ಯಾಸ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದ ಸರ್ಫರಾಝ್ ಕೇವಲ 76 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಸ್ಪೋಟಕ ಇನಿಂಗ್ಸ್​ನಲ್ಲಿ ಸರ್ಫರಾಝ್ ಬ್ಯಾಟ್​ನಿಂದ ಮೂಡಿಬಂದ ಫೋರ್​ಗಳ ಸಂಖ್ಯೆ 15, ಹಾಗೆಯೇ 2 ಸಿಕ್ಸರ್​ಗಳನ್ನು ಸಹ ಬಾರಿಸಿದ್ದಾರೆ.

2 / 5
ಸರ್ಫರಾಝ್ ಖಾನ್ ಹೀಗೆ ಅಬ್ಬರಿಸಿರುವುದು ಟೀಮ್ ಇಂಡಿಯಾದ ಅನುಭವಿ ಬೌಲರ್​ಗಳಾದ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಅವರ ಮುಂದೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಇದಾಗ್ಯೂ ಭಾರತ ಟೆಸ್ಟ್ ತಂಡದ ಬೌಲರ್​ಗಳಿಗೆ ಸರ್ಫರಾಝ್ ಖಾನ್ ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ. ಅಂದರೆ 101 ರನ್​ಗಳೊಂದಿಗೆ ಅಜೇಯರಾಗಿ ಮರಳಿದ್ದರು.

ಸರ್ಫರಾಝ್ ಖಾನ್ ಹೀಗೆ ಅಬ್ಬರಿಸಿರುವುದು ಟೀಮ್ ಇಂಡಿಯಾದ ಅನುಭವಿ ಬೌಲರ್​ಗಳಾದ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಅವರ ಮುಂದೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಇದಾಗ್ಯೂ ಭಾರತ ಟೆಸ್ಟ್ ತಂಡದ ಬೌಲರ್​ಗಳಿಗೆ ಸರ್ಫರಾಝ್ ಖಾನ್ ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ. ಅಂದರೆ 101 ರನ್​ಗಳೊಂದಿಗೆ ಅಜೇಯರಾಗಿ ಮರಳಿದ್ದರು.

3 / 5
ಕಳೆದ ವರ್ಷ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದ ಸರ್ಫರಾಝ್ ಖಾನ್ ನ್ಯೂಝಿಲೆಂಡ್ ವಿರುದ್ಧ 150 ರನ್ ಬಾರಿಸಿ ಮಿಂಚಿದ್ದರು. ಆದರೆ ಈ ಭರ್ಜರಿ ಸೆಂಚುರಿ ಬಳಿಕ ಯುವ ದಾಂಡಿಗನಿಗೆ ಕಣಕ್ಕಿಳಿದದ್ದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಸರ್ಫರಾಝ್ ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದರು.

ಕಳೆದ ವರ್ಷ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದ ಸರ್ಫರಾಝ್ ಖಾನ್ ನ್ಯೂಝಿಲೆಂಡ್ ವಿರುದ್ಧ 150 ರನ್ ಬಾರಿಸಿ ಮಿಂಚಿದ್ದರು. ಆದರೆ ಈ ಭರ್ಜರಿ ಸೆಂಚುರಿ ಬಳಿಕ ಯುವ ದಾಂಡಿಗನಿಗೆ ಕಣಕ್ಕಿಳಿದದ್ದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಸರ್ಫರಾಝ್ ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದರು.

4 / 5
ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಚಾನ್ಸ್ ನೀಡಲಾಗಿಲ್ಲ. ಇತ್ತ ಭಾರತ ಎ ತಂಡದ ಪರ ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಸರ್ಫರಾಝ್ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 92 ರನ್ ಬಾರಿಸಿ ಮಿಂಚಿದ್ದಾರೆ. ಇದೀಗ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೇವಲ 76 ಎಸೆತಗಳಲ್ಲಿ ಅಜೇಯ 101 ರನ್​ ಬಾರಿಸಿ ಆಯ್ಕೆಗಾರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಚಾನ್ಸ್ ನೀಡಲಾಗಿಲ್ಲ. ಇತ್ತ ಭಾರತ ಎ ತಂಡದ ಪರ ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಸರ್ಫರಾಝ್ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 92 ರನ್ ಬಾರಿಸಿ ಮಿಂಚಿದ್ದಾರೆ. ಇದೀಗ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೇವಲ 76 ಎಸೆತಗಳಲ್ಲಿ ಅಜೇಯ 101 ರನ್​ ಬಾರಿಸಿ ಆಯ್ಕೆಗಾರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ