AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡಂಕಿ ಎಸೆತಗಳಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಸರ್ಫರಾಝ್ ಖಾನ್

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನಲ್ಲಿ ಜರುಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು 5 ಪಂದ್ಯಗಳನ್ನಾಡಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಸರ್ಫರಾಝ್ ಖಾನ್​ಗೆ ಸ್ಥಾನ ನೀಡಲಾಗಿಲ್ಲ. ಆದರೀಗ ಟೀಮ್ ಇಂಡಿಯಾ ಬೌಲರ್​ಗಳ ವಿರುದ್ಧವೇ ಸರ್ಫರಾಝ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 16, 2025 | 7:30 AM

Share
ಇಂಗ್ಲೆಂಡ್​ ವಿರುದ್ಧದ ಟೆಸ್ಟ್ ಸರಣಿಯಿಂದ ವಂಚಿತರಾಗಿರುವ ಸರ್ಫರಾಝ್ ಖಾನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅದು ಕೂಡ ಇಂಗ್ಲೆಂಡ್ ನೆಲದಲ್ಲಿ ಎಂಬುದು ವಿಶೇಷ. ಈ ಹಿಂದೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 92 ರನ್ ಬಾರಿಸಿ ಮಿಂಚಿದ್ದ ಸರ್ಫರಾಝ್ ಇದೀಗ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ.

ಇಂಗ್ಲೆಂಡ್​ ವಿರುದ್ಧದ ಟೆಸ್ಟ್ ಸರಣಿಯಿಂದ ವಂಚಿತರಾಗಿರುವ ಸರ್ಫರಾಝ್ ಖಾನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಅದು ಕೂಡ ಇಂಗ್ಲೆಂಡ್ ನೆಲದಲ್ಲಿ ಎಂಬುದು ವಿಶೇಷ. ಈ ಹಿಂದೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 92 ರನ್ ಬಾರಿಸಿ ಮಿಂಚಿದ್ದ ಸರ್ಫರಾಝ್ ಇದೀಗ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ.

1 / 5
ಭಾರತ ಮತ್ತು ಭಾರತ ಎ ತಂಡಗಳ ನಡುವಣ ಅಭ್ಯಾಸ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದ ಸರ್ಫರಾಝ್ ಕೇವಲ 76 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಸ್ಪೋಟಕ ಇನಿಂಗ್ಸ್​ನಲ್ಲಿ ಸರ್ಫರಾಝ್ ಬ್ಯಾಟ್​ನಿಂದ ಮೂಡಿಬಂದ ಫೋರ್​ಗಳ ಸಂಖ್ಯೆ 15, ಹಾಗೆಯೇ 2 ಸಿಕ್ಸರ್​ಗಳನ್ನು ಸಹ ಬಾರಿಸಿದ್ದಾರೆ.

ಭಾರತ ಮತ್ತು ಭಾರತ ಎ ತಂಡಗಳ ನಡುವಣ ಅಭ್ಯಾಸ ಪಂದ್ಯದಲ್ಲಿ ಭಾರತ ಎ ಪರ ಕಣಕ್ಕಿಳಿದ ಸರ್ಫರಾಝ್ ಕೇವಲ 76 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಸ್ಪೋಟಕ ಇನಿಂಗ್ಸ್​ನಲ್ಲಿ ಸರ್ಫರಾಝ್ ಬ್ಯಾಟ್​ನಿಂದ ಮೂಡಿಬಂದ ಫೋರ್​ಗಳ ಸಂಖ್ಯೆ 15, ಹಾಗೆಯೇ 2 ಸಿಕ್ಸರ್​ಗಳನ್ನು ಸಹ ಬಾರಿಸಿದ್ದಾರೆ.

2 / 5
ಸರ್ಫರಾಝ್ ಖಾನ್ ಹೀಗೆ ಅಬ್ಬರಿಸಿರುವುದು ಟೀಮ್ ಇಂಡಿಯಾದ ಅನುಭವಿ ಬೌಲರ್​ಗಳಾದ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಅವರ ಮುಂದೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಇದಾಗ್ಯೂ ಭಾರತ ಟೆಸ್ಟ್ ತಂಡದ ಬೌಲರ್​ಗಳಿಗೆ ಸರ್ಫರಾಝ್ ಖಾನ್ ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ. ಅಂದರೆ 101 ರನ್​ಗಳೊಂದಿಗೆ ಅಜೇಯರಾಗಿ ಮರಳಿದ್ದರು.

ಸರ್ಫರಾಝ್ ಖಾನ್ ಹೀಗೆ ಅಬ್ಬರಿಸಿರುವುದು ಟೀಮ್ ಇಂಡಿಯಾದ ಅನುಭವಿ ಬೌಲರ್​ಗಳಾದ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಅವರ ಮುಂದೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಇದಾಗ್ಯೂ ಭಾರತ ಟೆಸ್ಟ್ ತಂಡದ ಬೌಲರ್​ಗಳಿಗೆ ಸರ್ಫರಾಝ್ ಖಾನ್ ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ. ಅಂದರೆ 101 ರನ್​ಗಳೊಂದಿಗೆ ಅಜೇಯರಾಗಿ ಮರಳಿದ್ದರು.

3 / 5
ಕಳೆದ ವರ್ಷ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದ ಸರ್ಫರಾಝ್ ಖಾನ್ ನ್ಯೂಝಿಲೆಂಡ್ ವಿರುದ್ಧ 150 ರನ್ ಬಾರಿಸಿ ಮಿಂಚಿದ್ದರು. ಆದರೆ ಈ ಭರ್ಜರಿ ಸೆಂಚುರಿ ಬಳಿಕ ಯುವ ದಾಂಡಿಗನಿಗೆ ಕಣಕ್ಕಿಳಿದದ್ದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಸರ್ಫರಾಝ್ ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದರು.

ಕಳೆದ ವರ್ಷ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದ ಸರ್ಫರಾಝ್ ಖಾನ್ ನ್ಯೂಝಿಲೆಂಡ್ ವಿರುದ್ಧ 150 ರನ್ ಬಾರಿಸಿ ಮಿಂಚಿದ್ದರು. ಆದರೆ ಈ ಭರ್ಜರಿ ಸೆಂಚುರಿ ಬಳಿಕ ಯುವ ದಾಂಡಿಗನಿಗೆ ಕಣಕ್ಕಿಳಿದದ್ದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಸರ್ಫರಾಝ್ ಇಡೀ ಸರಣಿಯಲ್ಲಿ ಬೆಂಚ್ ಕಾದಿದ್ದರು.

4 / 5
ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಚಾನ್ಸ್ ನೀಡಲಾಗಿಲ್ಲ. ಇತ್ತ ಭಾರತ ಎ ತಂಡದ ಪರ ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಸರ್ಫರಾಝ್ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 92 ರನ್ ಬಾರಿಸಿ ಮಿಂಚಿದ್ದಾರೆ. ಇದೀಗ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೇವಲ 76 ಎಸೆತಗಳಲ್ಲಿ ಅಜೇಯ 101 ರನ್​ ಬಾರಿಸಿ ಆಯ್ಕೆಗಾರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಚಾನ್ಸ್ ನೀಡಲಾಗಿಲ್ಲ. ಇತ್ತ ಭಾರತ ಎ ತಂಡದ ಪರ ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಸರ್ಫರಾಝ್ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 92 ರನ್ ಬಾರಿಸಿ ಮಿಂಚಿದ್ದಾರೆ. ಇದೀಗ ಟೀಮ್ ಇಂಡಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಕೇವಲ 76 ಎಸೆತಗಳಲ್ಲಿ ಅಜೇಯ 101 ರನ್​ ಬಾರಿಸಿ ಆಯ್ಕೆಗಾರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

5 / 5
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ