AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sarfaraz Khan: ಅಬ್ಬರ ಸಿಡಿಲಬ್ಬರ: ಸ್ಪೋಟಕ ಸೆಂಚುರಿ ಸಿಡಿಸಿದ ಸರ್ಫರಾಝ್ ಖಾನ್

Sarfaraz Khan: ರಣಜಿ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಸರ್ಫರಾಝ್ ಖಾನ್ ಅವರನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿಲ್ಲ. ಇದರ ಬೆನ್ನಲ್ಲೇ ಇಂಗ್ಲೆಂಡ್ ಲಯನ್ಸ್ ವಿರುದ್ಧ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸುವ ಮೂಲಕ ಸರ್ಫರಾಝ್ ಎಲ್ಲರ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Jan 25, 2024 | 2:03 PM

Share
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಲಯನ್ಸ್​ ವಿರುದ್ಧದ ಪಂದ್ಯದಲ್ಲಿ ಸರ್ಫರಾಝ್ ಖಾನ್ (Sarfaraz Khan) ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಲಯನ್ಸ್ ತಂಡವು 152 ರನ್​ಗಳಿಸಿ ಆಲೌಟ್ ಆಗಿತ್ತು.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಲಯನ್ಸ್​ ವಿರುದ್ಧದ ಪಂದ್ಯದಲ್ಲಿ ಸರ್ಫರಾಝ್ ಖಾನ್ (Sarfaraz Khan) ಸ್ಪೋಟಕ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಲಯನ್ಸ್ ತಂಡವು 152 ರನ್​ಗಳಿಸಿ ಆಲೌಟ್ ಆಗಿತ್ತು.

1 / 6
ಆ ಬಳಿಕ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡಕ್ಕೆ ಅಭಿಮನ್ಯು ಈಶ್ವರನ್ (58) ಹಾಗೂ ದೇವದತ್ ಪಡಿಕ್ಕಲ್ (105) ಉತ್ತಮ ಆರಂಭ ಒದಗಿಸಿದ್ದರು. ಇದಾದ ಬಳಿಕ ಕಣಕ್ಕಿಳಿದ ಸರ್ಫರಾಝ್ ಖಾನ್ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

ಆ ಬಳಿಕ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡಕ್ಕೆ ಅಭಿಮನ್ಯು ಈಶ್ವರನ್ (58) ಹಾಗೂ ದೇವದತ್ ಪಡಿಕ್ಕಲ್ (105) ಉತ್ತಮ ಆರಂಭ ಒದಗಿಸಿದ್ದರು. ಇದಾದ ಬಳಿಕ ಕಣಕ್ಕಿಳಿದ ಸರ್ಫರಾಝ್ ಖಾನ್ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

2 / 6
ಇಂಗ್ಲೆಂಡ್ ಲಯನ್ಸ್ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ಸರ್ಫರಾಝ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಕೇವಲ 89 ಎಸೆತಗಳಲ್ಲಿ ಸರ್ಫರಾಝ್ ಖಾನ್ ಶತಕ ಪೂರೈಸಿದರು.

ಇಂಗ್ಲೆಂಡ್ ಲಯನ್ಸ್ ಬೌಲರ್​ಗಳನ್ನು ಹಿಗ್ಗಾಮುಗ್ಗಾ ದಂಡಿಸಿದ ಸರ್ಫರಾಝ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಪರಿಣಾಮ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಕೇವಲ 89 ಎಸೆತಗಳಲ್ಲಿ ಸರ್ಫರಾಝ್ ಖಾನ್ ಶತಕ ಪೂರೈಸಿದರು.

3 / 6
ಈ ಸ್ಪೋಟಕ ಶತಕದೊಂದಿಗೆ ಸರ್ಫರಾಝ್ ಖಾನ್ ಮತ್ತೊಮ್ಮೆ ಟೀಮ್ ಇಂಡಿಯಾದ ಕದ ತಟ್ಟಿದ್ದಾರೆ. ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ಯುವ ದಾಂಡಿಗನಿಗೆ ಇದುವರೆಗೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು.

ಈ ಸ್ಪೋಟಕ ಶತಕದೊಂದಿಗೆ ಸರ್ಫರಾಝ್ ಖಾನ್ ಮತ್ತೊಮ್ಮೆ ಟೀಮ್ ಇಂಡಿಯಾದ ಕದ ತಟ್ಟಿದ್ದಾರೆ. ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿರುವ ಯುವ ದಾಂಡಿಗನಿಗೆ ಇದುವರೆಗೆ ಭಾರತ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದರು.

4 / 6
ಆದರೆ ಈ ಬಾರಿ ಕೂಡ ಆಯ್ಕೆ ಸಮಿತಿ ಸರ್ಫರಾಝ್ ಅವರನ್ನು ಕಡೆಗಣಿಸಿದ್ದರು. ಅಲ್ಲದೆ ವಿಕೆಟ್ ಕೀಪರ್ ಬ್ಯಾಟರ್​ ಆಗಿ 23 ವರ್ಷದ ಧ್ರುವ್ ಜುರೇಲ್​ಗೆ ಮಣೆ ಹಾಕಿದ್ದರು. ಹಾಗೆಯೇ ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಬದಲಿ ಆಟಗಾರನಾಗಿ ರಜತ್ ಪಾಟಿದಾರ್​​​ಗೆ ಚಾನ್ಸ್ ನೀಡಲಾಗಿದೆ. ಈ ಆಯ್ಕೆಗಳ ಬೆನ್ನಲ್ಲೇ ಇದೀಗ ಸ್ಪೋಟಕ ಬ್ಯಾಟಿಂಗ್ ಮೂಲಕ ಸರ್ಫರಾಝ್ ಖಾನ್ ಅಬ್ಬರಿಸಿರುವುದು ವಿಶೇಷ.

ಆದರೆ ಈ ಬಾರಿ ಕೂಡ ಆಯ್ಕೆ ಸಮಿತಿ ಸರ್ಫರಾಝ್ ಅವರನ್ನು ಕಡೆಗಣಿಸಿದ್ದರು. ಅಲ್ಲದೆ ವಿಕೆಟ್ ಕೀಪರ್ ಬ್ಯಾಟರ್​ ಆಗಿ 23 ವರ್ಷದ ಧ್ರುವ್ ಜುರೇಲ್​ಗೆ ಮಣೆ ಹಾಕಿದ್ದರು. ಹಾಗೆಯೇ ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಬದಲಿ ಆಟಗಾರನಾಗಿ ರಜತ್ ಪಾಟಿದಾರ್​​​ಗೆ ಚಾನ್ಸ್ ನೀಡಲಾಗಿದೆ. ಈ ಆಯ್ಕೆಗಳ ಬೆನ್ನಲ್ಲೇ ಇದೀಗ ಸ್ಪೋಟಕ ಬ್ಯಾಟಿಂಗ್ ಮೂಲಕ ಸರ್ಫರಾಝ್ ಖಾನ್ ಅಬ್ಬರಿಸಿರುವುದು ವಿಶೇಷ.

5 / 6
ಇನ್ನು ಸರ್ಫರಾಝ್ ಖಾನ್ ಅವರ ಈ ಬಿರುಸಿನ ಶತಕದ ನೆರವಿನಿಂದ ಭಾರತ ತಂಡವು 73 ಓವರ್​ಗಳ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 313 ರನ್​ ಕಲೆಹಾಕಿದೆ. ಈ ಮೂಲಕ ಇಂಗ್ಲೆಂಡ್ ಲಯನ್ಸ್ ವಿರುದ್ಧ 161 ರನ್​ಗಳ ಮುನ್ನಡೆ ಸಾಧಿಸಿದೆ.

ಇನ್ನು ಸರ್ಫರಾಝ್ ಖಾನ್ ಅವರ ಈ ಬಿರುಸಿನ ಶತಕದ ನೆರವಿನಿಂದ ಭಾರತ ತಂಡವು 73 ಓವರ್​ಗಳ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 313 ರನ್​ ಕಲೆಹಾಕಿದೆ. ಈ ಮೂಲಕ ಇಂಗ್ಲೆಂಡ್ ಲಯನ್ಸ್ ವಿರುದ್ಧ 161 ರನ್​ಗಳ ಮುನ್ನಡೆ ಸಾಧಿಸಿದೆ.

6 / 6
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ