AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರವೇಗದ ಶತಕ ಬಾರಿಸಿ ಮತ್ತೆ ಟೀಂ ಇಂಡಿಯಾದ ಕದ ತಟ್ಟಿದ ಸರ್ಫರಾಜ್ ಖಾನ್

Sarfaraz Khan Century: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸರ್ಫರಾಜ್ ಖಾನ್ ಅಸ್ಸಾಂ ವಿರುದ್ಧ ಭರ್ಜರಿ ಚೊಚ್ಚಲ ಟಿ20 ಶತಕ ಸಿಡಿಸಿದ್ದಾರೆ. ದೇಶಿ ಕ್ರಿಕೆಟ್‌ನಲ್ಲಿ ನಿರಂತರ ಉತ್ತಮ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದಲ್ಲಿ ಅವಕಾಶ ವಂಚಿತರಾಗಿರುವ ಸರ್ಫರಾಜ್, ಕೇವಲ 47 ಎಸೆತಗಳಲ್ಲಿ 100 ರನ್ ಗಳಿಸಿದರು. ಈ ಸಾಧನೆಯು ಮುಂಬರುವ ಐಪಿಎಲ್ ಹರಾಜಿನಲ್ಲಿ ಅವರಿಗೆ ಪ್ರಮುಖ ಪಾತ್ರ ವಹಿಸಲಿದ್ದು, ಬಿಳಿ ಚೆಂಡಿನ ಕ್ರಿಕೆಟ್‌ನಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: Dec 02, 2025 | 5:35 PM

Share
ದೇಶೀ ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡಿ ಪದೇ ಪದೇ ಟೀಂ ಇಂಡಿಯಾ ಕದ ತಟ್ಟುತ್ತಿರುವ ಸರ್ಫರಾಜ್ ಖಾನ್​ಗೆ ನಾನಾ ಕಾರಣಗಳಿಂದ ಭಾರತ ತಂಡದಲ್ಲಿ ಅವಕಾಶ ಸಿಗುತ್ತಿಲ್ಲ. ಆದಾಗ್ಯೂ ತಮ್ಮ ಪ್ರಯತ್ನಗಳನ್ನು ಕೈಬಿಡದ ಸರ್ಫರಾಜ್ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

ದೇಶೀ ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ನೀಡಿ ಪದೇ ಪದೇ ಟೀಂ ಇಂಡಿಯಾ ಕದ ತಟ್ಟುತ್ತಿರುವ ಸರ್ಫರಾಜ್ ಖಾನ್​ಗೆ ನಾನಾ ಕಾರಣಗಳಿಂದ ಭಾರತ ತಂಡದಲ್ಲಿ ಅವಕಾಶ ಸಿಗುತ್ತಿಲ್ಲ. ಆದಾಗ್ಯೂ ತಮ್ಮ ಪ್ರಯತ್ನಗಳನ್ನು ಕೈಬಿಡದ ಸರ್ಫರಾಜ್ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ.

1 / 5
ವಾಸ್ತವವಾಗಿ ಇದು ಸರ್ಫರಾಜ್ ಖಾನ್ ಅವರ ಟಿ20 ವೃತ್ತಿಜೀವನದ ಮೊದಲ ಶತಕವಾಗಿದೆ. ಸರ್ಫರಾಜ್ ಅವರ ಅಬ್ಬರದ ಶತಕದ ನೆರವಿನಿಂದ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ಕೇವಲ 4 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಸ್ಸಾಂ ತಂಡ ಕೇವಲ 122 ರನ್​ಗಳಿಗೆ ಆಲೌಟ್ ಆಗಿ 98 ರನ್​ಗಳಿಂದ ಸೋಲೊಪ್ಪಿಕೊಂಡಿತು.

ವಾಸ್ತವವಾಗಿ ಇದು ಸರ್ಫರಾಜ್ ಖಾನ್ ಅವರ ಟಿ20 ವೃತ್ತಿಜೀವನದ ಮೊದಲ ಶತಕವಾಗಿದೆ. ಸರ್ಫರಾಜ್ ಅವರ ಅಬ್ಬರದ ಶತಕದ ನೆರವಿನಿಂದ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ಕೇವಲ 4 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಸ್ಸಾಂ ತಂಡ ಕೇವಲ 122 ರನ್​ಗಳಿಗೆ ಆಲೌಟ್ ಆಗಿ 98 ರನ್​ಗಳಿಂದ ಸೋಲೊಪ್ಪಿಕೊಂಡಿತು.

2 / 5
ಅಸ್ಸಾಂ ವಿರುದ್ಧದ ಈ ಪಂದ್ಯದಲ್ಲಿ ಸರ್ಫರಾಜ್ ಖಾನ್ ಕೇವಲ 47 ಎಸೆತಗಳಲ್ಲಿ 100 ರನ್​ಗಳ ಅಜೇಯ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ 8 ಬೌಂಡರಿಗಳು ಮತ್ತು 7 ಅಗಾಧ ಸಿಕ್ಸರ್‌ಗಳು ಸೇರಿದ್ದವು. ಮೇಲೆ ಹೇಳಿದಂತೆ ಕಳೆದ ಎರಡು ವರ್ಷಗಳಿಂದ, ಸರ್ಫರಾಜ್ ದೇಶೀಯ ಕ್ರಿಕೆಟ್‌ನಲ್ಲಿ ರನ್ ಗಳಿಸುತ್ತಿದ್ದಾರೆ. ರಣಜಿ ಟ್ರೋಫಿಯಲ್ಲಿ ಶತಕಗಳ ಮೇಲೆ ಶತಕ ಬಾರಿಸಿದ್ದ ಸರ್ಫರಾಜ್, ಭಾರತದ ಪರ ಚೊಚ್ಚಲ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿದ್ದರು.

ಅಸ್ಸಾಂ ವಿರುದ್ಧದ ಈ ಪಂದ್ಯದಲ್ಲಿ ಸರ್ಫರಾಜ್ ಖಾನ್ ಕೇವಲ 47 ಎಸೆತಗಳಲ್ಲಿ 100 ರನ್​ಗಳ ಅಜೇಯ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ 8 ಬೌಂಡರಿಗಳು ಮತ್ತು 7 ಅಗಾಧ ಸಿಕ್ಸರ್‌ಗಳು ಸೇರಿದ್ದವು. ಮೇಲೆ ಹೇಳಿದಂತೆ ಕಳೆದ ಎರಡು ವರ್ಷಗಳಿಂದ, ಸರ್ಫರಾಜ್ ದೇಶೀಯ ಕ್ರಿಕೆಟ್‌ನಲ್ಲಿ ರನ್ ಗಳಿಸುತ್ತಿದ್ದಾರೆ. ರಣಜಿ ಟ್ರೋಫಿಯಲ್ಲಿ ಶತಕಗಳ ಮೇಲೆ ಶತಕ ಬಾರಿಸಿದ್ದ ಸರ್ಫರಾಜ್, ಭಾರತದ ಪರ ಚೊಚ್ಚಲ ಟೆಸ್ಟ್‌ನಲ್ಲಿ ಅರ್ಧಶತಕ ಬಾರಿಸಿದ್ದರು.

3 / 5
ಸರ್ಫರಾಜ್​ಗೆ ಟೀಂ ಇಂಡಿಯಾದಲ್ಲಿ ಸಧ್ಯಕ್ಕೆ ಸ್ಥಾನ ಸಿಗದಿದ್ದರೂ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ಐಪಿಎಲ್ ಮಿನಿ ಹರಾಜಿನಲ್ಲಿ ಅವರ ಖರೀದಿಯಲ್ಲಿ ಈ ಶತಕ ಪ್ರಮುಖ ಪಾತ್ರವಹಿಸಲಿದೆ. ಕೇವಲ 47 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ, ಸರ್ಫರಾಜ್ ಅವರು ಕೆಂಪು ಚೆಂಡಿನ ಕ್ರಿಕೆಟ್‌ನಲ್ಲಿ ಮಾತ್ರವಲ್ಲದೆ ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿಯೂ ಪ್ರಮುಖ ಪಂದ್ಯ ವಿಜೇತರಾಗಬಹುದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಸರ್ಫರಾಜ್​ಗೆ ಟೀಂ ಇಂಡಿಯಾದಲ್ಲಿ ಸಧ್ಯಕ್ಕೆ ಸ್ಥಾನ ಸಿಗದಿದ್ದರೂ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿರುವ ಐಪಿಎಲ್ ಮಿನಿ ಹರಾಜಿನಲ್ಲಿ ಅವರ ಖರೀದಿಯಲ್ಲಿ ಈ ಶತಕ ಪ್ರಮುಖ ಪಾತ್ರವಹಿಸಲಿದೆ. ಕೇವಲ 47 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ, ಸರ್ಫರಾಜ್ ಅವರು ಕೆಂಪು ಚೆಂಡಿನ ಕ್ರಿಕೆಟ್‌ನಲ್ಲಿ ಮಾತ್ರವಲ್ಲದೆ ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿಯೂ ಪ್ರಮುಖ ಪಂದ್ಯ ವಿಜೇತರಾಗಬಹುದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

4 / 5
ಪಂದ್ಯದ ಬಗ್ಗೆ ಹೇಳುವುದಾದರೆ.. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 220 ರನ್ ಗಳಿಸಿತು. ಸರ್ಫರಾಜ್ ಖಾನ್ ಜೊತೆಗೆ, ಅಜಿಂಕ್ಯ ರಹಾನೆ ಕೂಡ 42 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಮಧ್ಯೆ, ಸಾಯಿರಾಜ್ ಪಾಟೀಲ್ 9 ಎಸೆತಗಳಲ್ಲಿ ಅಜೇಯ 25 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಕೂಡ 20 ರನ್‌ಗಳ ಕೊಡುಗೆ ನೀಡಿದರೆ, ಆಯುಷ್ ಮ್ಹಾತ್ರೆ 21 ರನ್‌ಗಳ ಕೊಡುಗೆ ನೀಡಿದರು.

ಪಂದ್ಯದ ಬಗ್ಗೆ ಹೇಳುವುದಾದರೆ.. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡವು 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 220 ರನ್ ಗಳಿಸಿತು. ಸರ್ಫರಾಜ್ ಖಾನ್ ಜೊತೆಗೆ, ಅಜಿಂಕ್ಯ ರಹಾನೆ ಕೂಡ 42 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಈ ಮಧ್ಯೆ, ಸಾಯಿರಾಜ್ ಪಾಟೀಲ್ 9 ಎಸೆತಗಳಲ್ಲಿ ಅಜೇಯ 25 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಕೂಡ 20 ರನ್‌ಗಳ ಕೊಡುಗೆ ನೀಡಿದರೆ, ಆಯುಷ್ ಮ್ಹಾತ್ರೆ 21 ರನ್‌ಗಳ ಕೊಡುಗೆ ನೀಡಿದರು.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್