AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL ನಲ್ಲಿ ಹೊಸ ಇತಿಹಾಸ ರಚಿಸಿದ ಲೇಡಿ ಸೆಹ್ವಾಗ್

WPL 2025 Shafali Verma: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಲೇಡಿ ಸೆಹ್ವಾಗ್ ಎಂದೇ ಫೇಮಸ್. ಮಾಜಿ ಡ್ಯಾಶಿಂಗ್ ಒಪನರ್ ಸೆಹ್ವಾಗ್ ರೀತಿಯಲ್ಲಿ ಬ್ಯಾಟ್ ಬೀಸುತ್ತಿರುವುದರಿಂದ ಶಫಾಲಿಗೆ ಈ ಹೆಸರು ಲಭಿಸಿದೆ. ಅದಕ್ಕೆ ತಕ್ಕಂತೆ ಶಫಾಲಿ ವರ್ಮಾ ವುಮೆನ್ಸ್ ಪ್ರೀಮಿಯರ್ ಲೀಗ್‌ನ 14ನೇ ಪಂದ್ಯದಲ್ಲಿ ಅಬ್ಬರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 02, 2025 | 11:08 AM

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಶಫಾಲಿ ವರ್ಮಾ ಅಬ್ಬರ ಮುಂದುವರೆದಿದೆ. ಶನಿವಾರ (ಮಾ.೧) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದ ಶಫಾಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಶಫಾಲಿ ವರ್ಮಾ ಅಬ್ಬರ ಮುಂದುವರೆದಿದೆ. ಶನಿವಾರ (ಮಾ.೧) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದ ಶಫಾಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಎಲ್ಲಿಸ್ ಪೆರ್ರಿ 47 ಎಸೆತಗಳಲ್ಲಿ 60 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಎಲ್ಲಿಸ್ ಪೆರ್ರಿ 47 ಎಸೆತಗಳಲ್ಲಿ 60 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು.

2 / 6
148 ರನ್ ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಶಫಾಲಿ ವರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್‌ನಿಂದಲೇ ಆರ್​ಸಿಬಿ ಬೌಲರ್‌ಗಳ ಬೆಂಡೆತ್ತಿದ ಶಫಾಲಿ ಸಿಕ್ಸ್-ಫೋರ್ ಗಳ ಸುರಿಮಳೆಗೈದರು.

148 ರನ್ ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಶಫಾಲಿ ವರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್‌ನಿಂದಲೇ ಆರ್​ಸಿಬಿ ಬೌಲರ್‌ಗಳ ಬೆಂಡೆತ್ತಿದ ಶಫಾಲಿ ಸಿಕ್ಸ್-ಫೋರ್ ಗಳ ಸುರಿಮಳೆಗೈದರು.

3 / 6
ಪರಿಣಾಮ ಶಫಾಲಿ ವರ್ಮಾ ಬ್ಯಾಟ್ ನಿಂದ 43 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 8 ಫೋರ್ ಒಳಗೊಂಡಂತೆ 80 ರನ್ ಮೂಡಿಬಂತು. ಅತ್ತ ಜೆಸ್ ಜೊನ್ಸೆನ್ 61 ರನ್ ಗಳ ಕೊಡುಗೆ ನೀಡಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 15.3 ಓವರುಗಳಲ್ಲಿ 151 ರನ್ ಬಾರಿಸಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಪರಿಣಾಮ ಶಫಾಲಿ ವರ್ಮಾ ಬ್ಯಾಟ್ ನಿಂದ 43 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 8 ಫೋರ್ ಒಳಗೊಂಡಂತೆ 80 ರನ್ ಮೂಡಿಬಂತು. ಅತ್ತ ಜೆಸ್ ಜೊನ್ಸೆನ್ 61 ರನ್ ಗಳ ಕೊಡುಗೆ ನೀಡಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 15.3 ಓವರುಗಳಲ್ಲಿ 151 ರನ್ ಬಾರಿಸಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

4 / 6
ಇನ್ನು ಈ ಪಂದ್ಯದಲ್ಲಿ ಬಾರಿಸಿದ 80 ರನ್ ಗಳೊಂದಿಗೆ ಶಫಾಲಿ ವರ್ಮಾ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800 ರನ್ ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಶಫಾಲಿ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಬಾರಿಸಿದ 80 ರನ್ ಗಳೊಂದಿಗೆ ಶಫಾಲಿ ವರ್ಮಾ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800 ರನ್ ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಶಫಾಲಿ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ಪರ ಈವರೆಗೆ 25 ಇನಿಂಗ್ಸ್ ಆಡಿರುವ ಶಫಾಲಿ ವರ್ಮಾ 6 ಅರ್ಧಶತಕಗಳೊಂದಿಗೆ ಒಟ್ಟು 821 ರನ್ ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800+ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಎಲ್ಲಿಸ್ ಪೆರ್ರಿ (895) ಹಾಗೂ ಮೆಗ್ ಲ್ಯಾನಿಂಗ್ (847) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ರನ್ ಸರದಾರಿಣಿಯರ ಪಟ್ಟಿಗೆ ಶಫಾಲಿ ವರ್ಮಾ ಕೂಡ ಎಂಟ್ರಿ ಕೊಟ್ಟಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಪರ ಈವರೆಗೆ 25 ಇನಿಂಗ್ಸ್ ಆಡಿರುವ ಶಫಾಲಿ ವರ್ಮಾ 6 ಅರ್ಧಶತಕಗಳೊಂದಿಗೆ ಒಟ್ಟು 821 ರನ್ ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800+ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಎಲ್ಲಿಸ್ ಪೆರ್ರಿ (895) ಹಾಗೂ ಮೆಗ್ ಲ್ಯಾನಿಂಗ್ (847) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ರನ್ ಸರದಾರಿಣಿಯರ ಪಟ್ಟಿಗೆ ಶಫಾಲಿ ವರ್ಮಾ ಕೂಡ ಎಂಟ್ರಿ ಕೊಟ್ಟಿದ್ದಾರೆ.

6 / 6
Follow us
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ