AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL ನಲ್ಲಿ ಹೊಸ ಇತಿಹಾಸ ರಚಿಸಿದ ಲೇಡಿ ಸೆಹ್ವಾಗ್

WPL 2025 Shafali Verma: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಲೇಡಿ ಸೆಹ್ವಾಗ್ ಎಂದೇ ಫೇಮಸ್. ಮಾಜಿ ಡ್ಯಾಶಿಂಗ್ ಒಪನರ್ ಸೆಹ್ವಾಗ್ ರೀತಿಯಲ್ಲಿ ಬ್ಯಾಟ್ ಬೀಸುತ್ತಿರುವುದರಿಂದ ಶಫಾಲಿಗೆ ಈ ಹೆಸರು ಲಭಿಸಿದೆ. ಅದಕ್ಕೆ ತಕ್ಕಂತೆ ಶಫಾಲಿ ವರ್ಮಾ ವುಮೆನ್ಸ್ ಪ್ರೀಮಿಯರ್ ಲೀಗ್‌ನ 14ನೇ ಪಂದ್ಯದಲ್ಲಿ ಅಬ್ಬರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 02, 2025 | 11:08 AM

Share
ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಶಫಾಲಿ ವರ್ಮಾ ಅಬ್ಬರ ಮುಂದುವರೆದಿದೆ. ಶನಿವಾರ (ಮಾ.೧) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದ ಶಫಾಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಶಫಾಲಿ ವರ್ಮಾ ಅಬ್ಬರ ಮುಂದುವರೆದಿದೆ. ಶನಿವಾರ (ಮಾ.೧) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದ ಶಫಾಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಎಲ್ಲಿಸ್ ಪೆರ್ರಿ 47 ಎಸೆತಗಳಲ್ಲಿ 60 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಎಲ್ಲಿಸ್ ಪೆರ್ರಿ 47 ಎಸೆತಗಳಲ್ಲಿ 60 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು.

2 / 6
148 ರನ್ ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಶಫಾಲಿ ವರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್‌ನಿಂದಲೇ ಆರ್​ಸಿಬಿ ಬೌಲರ್‌ಗಳ ಬೆಂಡೆತ್ತಿದ ಶಫಾಲಿ ಸಿಕ್ಸ್-ಫೋರ್ ಗಳ ಸುರಿಮಳೆಗೈದರು.

148 ರನ್ ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಶಫಾಲಿ ವರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್‌ನಿಂದಲೇ ಆರ್​ಸಿಬಿ ಬೌಲರ್‌ಗಳ ಬೆಂಡೆತ್ತಿದ ಶಫಾಲಿ ಸಿಕ್ಸ್-ಫೋರ್ ಗಳ ಸುರಿಮಳೆಗೈದರು.

3 / 6
ಪರಿಣಾಮ ಶಫಾಲಿ ವರ್ಮಾ ಬ್ಯಾಟ್ ನಿಂದ 43 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 8 ಫೋರ್ ಒಳಗೊಂಡಂತೆ 80 ರನ್ ಮೂಡಿಬಂತು. ಅತ್ತ ಜೆಸ್ ಜೊನ್ಸೆನ್ 61 ರನ್ ಗಳ ಕೊಡುಗೆ ನೀಡಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 15.3 ಓವರುಗಳಲ್ಲಿ 151 ರನ್ ಬಾರಿಸಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಪರಿಣಾಮ ಶಫಾಲಿ ವರ್ಮಾ ಬ್ಯಾಟ್ ನಿಂದ 43 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 8 ಫೋರ್ ಒಳಗೊಂಡಂತೆ 80 ರನ್ ಮೂಡಿಬಂತು. ಅತ್ತ ಜೆಸ್ ಜೊನ್ಸೆನ್ 61 ರನ್ ಗಳ ಕೊಡುಗೆ ನೀಡಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 15.3 ಓವರುಗಳಲ್ಲಿ 151 ರನ್ ಬಾರಿಸಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

4 / 6
ಇನ್ನು ಈ ಪಂದ್ಯದಲ್ಲಿ ಬಾರಿಸಿದ 80 ರನ್ ಗಳೊಂದಿಗೆ ಶಫಾಲಿ ವರ್ಮಾ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800 ರನ್ ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಶಫಾಲಿ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಬಾರಿಸಿದ 80 ರನ್ ಗಳೊಂದಿಗೆ ಶಫಾಲಿ ವರ್ಮಾ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800 ರನ್ ಪೂರೈಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಶಫಾಲಿ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ಪರ ಈವರೆಗೆ 25 ಇನಿಂಗ್ಸ್ ಆಡಿರುವ ಶಫಾಲಿ ವರ್ಮಾ 6 ಅರ್ಧಶತಕಗಳೊಂದಿಗೆ ಒಟ್ಟು 821 ರನ್ ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800+ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಎಲ್ಲಿಸ್ ಪೆರ್ರಿ (895) ಹಾಗೂ ಮೆಗ್ ಲ್ಯಾನಿಂಗ್ (847) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ರನ್ ಸರದಾರಿಣಿಯರ ಪಟ್ಟಿಗೆ ಶಫಾಲಿ ವರ್ಮಾ ಕೂಡ ಎಂಟ್ರಿ ಕೊಟ್ಟಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಪರ ಈವರೆಗೆ 25 ಇನಿಂಗ್ಸ್ ಆಡಿರುವ ಶಫಾಲಿ ವರ್ಮಾ 6 ಅರ್ಧಶತಕಗಳೊಂದಿಗೆ ಒಟ್ಟು 821 ರನ್ ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800+ ರನ್ ಕಲೆಹಾಕಿದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಎಲ್ಲಿಸ್ ಪೆರ್ರಿ (895) ಹಾಗೂ ಮೆಗ್ ಲ್ಯಾನಿಂಗ್ (847) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ರನ್ ಸರದಾರಿಣಿಯರ ಪಟ್ಟಿಗೆ ಶಫಾಲಿ ವರ್ಮಾ ಕೂಡ ಎಂಟ್ರಿ ಕೊಟ್ಟಿದ್ದಾರೆ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ