AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂತ್ರಿ ಬುದ್ಧಿ… ವಿರಾಟ್ ಕೊಹ್ಲಿಯ ಶತಕ ತಪ್ಪಿಸಲು ಯತ್ನಿಸಿದ ಪಾಕ್ ವೇಗಿ..!

Virat Kohli Century: ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 241 ರನ್​ ಕಲೆಹಾಕಿದರೆ, ಈ ಗುರಿಯನ್ನು ಟೀಮ್ ಇಂಡಿಯಾ 42.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 24, 2025 | 7:11 AM

Share
ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಅದು ಸಹ ಪಾಕಿಸ್ತಾನ್ ತಂಡವನ್ನು ಹೀನಾಯವಾಗಿ ಬಗ್ಗು ಬಡಿಯುವ ಮೂಲಕ. ಈ ಭರ್ಜರಿ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಏಕೆಂದರೆ ಬ್ಯಾಟಿಂಗ್ ಕಷ್ಟಕರವಾಗಿದ್ದ ಪಿಚ್​ನಲ್ಲಿ ಕಿಂಗ್ ಕೊಹ್ಲಿ ಆಕರ್ಷಕ ಸೆಂಚುರಿ ಬಾರಿಸಿ ಮಿಂಚಿದ್ದರು.

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಅದು ಸಹ ಪಾಕಿಸ್ತಾನ್ ತಂಡವನ್ನು ಹೀನಾಯವಾಗಿ ಬಗ್ಗು ಬಡಿಯುವ ಮೂಲಕ. ಈ ಭರ್ಜರಿ ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಏಕೆಂದರೆ ಬ್ಯಾಟಿಂಗ್ ಕಷ್ಟಕರವಾಗಿದ್ದ ಪಿಚ್​ನಲ್ಲಿ ಕಿಂಗ್ ಕೊಹ್ಲಿ ಆಕರ್ಷಕ ಸೆಂಚುರಿ ಬಾರಿಸಿ ಮಿಂಚಿದ್ದರು.

1 / 6
ಆದರೆ ಈ ಶತಕ ಮೂಡಿಬಂದಿದ್ದು ಭಾರತ ತಂಡದ ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾಗೆ ಗೆಲ್ಲಲು 2 ರನ್​ಗಳ ಅವಶ್ಯಕತೆಯಿದ್ದಾಗ ಬೌಂಡರಿ ಬಾರಿಸಿ ವಿರಾಟ್ ಕೊಹ್ಲಿ ತಮ್ಮ 51ನೇ ಶತಕ ಪೂರೈಸಿದ್ದರು. ಆದರೆ ಇದಕ್ಕೂ ಮುನ್ನವೇ ಕೊಹ್ಲಿಯ ಶತಕ ತಪ್ಪಿಸಲು ಪಾಕಿಸ್ತಾನ್ ಬೌಲರ್​ಗಳು ಇನ್ನಿಲ್ಲದ ಪ್ರಯತ್ನ ಮಾಡಿದ್ದರು.

ಆದರೆ ಈ ಶತಕ ಮೂಡಿಬಂದಿದ್ದು ಭಾರತ ತಂಡದ ಇನಿಂಗ್ಸ್​ನ ಕೊನೆಯ ಎಸೆತದಲ್ಲಿ ಎಂಬುದು ವಿಶೇಷ. ಅಂದರೆ ಟೀಮ್ ಇಂಡಿಯಾಗೆ ಗೆಲ್ಲಲು 2 ರನ್​ಗಳ ಅವಶ್ಯಕತೆಯಿದ್ದಾಗ ಬೌಂಡರಿ ಬಾರಿಸಿ ವಿರಾಟ್ ಕೊಹ್ಲಿ ತಮ್ಮ 51ನೇ ಶತಕ ಪೂರೈಸಿದ್ದರು. ಆದರೆ ಇದಕ್ಕೂ ಮುನ್ನವೇ ಕೊಹ್ಲಿಯ ಶತಕ ತಪ್ಪಿಸಲು ಪಾಕಿಸ್ತಾನ್ ಬೌಲರ್​ಗಳು ಇನ್ನಿಲ್ಲದ ಪ್ರಯತ್ನ ಮಾಡಿದ್ದರು.

2 / 6
ಅದರಲ್ಲೂ ಪ್ರಮುಖ ವೇಗಿ ಶಾಹೀನ್ ಅಫ್ರಿದಿ 42ನೇ ಓವರ್​ನಲ್ಲಿ ಸತತ ವೈಡ್​ಗಳನ್ನು ಎಸೆಯುವ ಮೂಲಕ ಅಚ್ಚರಿ ಮೂಡಿಸಿದರು. 41 ಓವರ್​ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 225 ರನ್ ಕಲೆಹಾಕಿತ್ತು. ಅಲ್ಲದೆ ಭಾರತ ತಂಡಕ್ಕೆ ಗೆಲ್ಲಲು ಇನ್ನೂ 17 ರನ್​ಗಳ ಅವಶ್ಯಕತೆಯಿತ್ತು. ಇತ್ತ ವಿರಾಟ್ ಕೊಹ್ಲಿಗೆ ಶತಕ ಪೂರೈಸಲು 13 ರನ್ ಬೇಕಿತ್ತು.

ಅದರಲ್ಲೂ ಪ್ರಮುಖ ವೇಗಿ ಶಾಹೀನ್ ಅಫ್ರಿದಿ 42ನೇ ಓವರ್​ನಲ್ಲಿ ಸತತ ವೈಡ್​ಗಳನ್ನು ಎಸೆಯುವ ಮೂಲಕ ಅಚ್ಚರಿ ಮೂಡಿಸಿದರು. 41 ಓವರ್​ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 225 ರನ್ ಕಲೆಹಾಕಿತ್ತು. ಅಲ್ಲದೆ ಭಾರತ ತಂಡಕ್ಕೆ ಗೆಲ್ಲಲು ಇನ್ನೂ 17 ರನ್​ಗಳ ಅವಶ್ಯಕತೆಯಿತ್ತು. ಇತ್ತ ವಿರಾಟ್ ಕೊಹ್ಲಿಗೆ ಶತಕ ಪೂರೈಸಲು 13 ರನ್ ಬೇಕಿತ್ತು.

3 / 6
ಈ ಹಂತದಲ್ಲಿ ದಾಳಿಗಿಳಿದ ಶಾಹೀನ್ ಅಫ್ರಿದಿ ಲಾಂಗ್ ವೈಡ್​ಗಳನ್ನು ಎಸೆಯುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಅದರಂತೆ 42ನೇ ಓವರ್​ನ 3ನೇ ಎಸೆತದಲ್ಲಿ ಅಚ್ಚರಿ ಎಂಬಂತೆ ವೈಡ್ ಎಸೆದರು. ಇದಾದ ಬಳಿಕ ಮತ್ತೊಂದು ವೈಡ್ ಎಸೆದರು. ಆ ಬಳಿಕ 4ನೇ ಎಸೆತದಲ್ಲಿ ಇನ್ನೊಂದು ವೈಡ್ ಎಸೆಯುವ ಮೂಲಕ ಅಚ್ಚರಿ ಮೂಡಿಸಿದರು.

ಈ ಹಂತದಲ್ಲಿ ದಾಳಿಗಿಳಿದ ಶಾಹೀನ್ ಅಫ್ರಿದಿ ಲಾಂಗ್ ವೈಡ್​ಗಳನ್ನು ಎಸೆಯುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಅದರಂತೆ 42ನೇ ಓವರ್​ನ 3ನೇ ಎಸೆತದಲ್ಲಿ ಅಚ್ಚರಿ ಎಂಬಂತೆ ವೈಡ್ ಎಸೆದರು. ಇದಾದ ಬಳಿಕ ಮತ್ತೊಂದು ವೈಡ್ ಎಸೆದರು. ಆ ಬಳಿಕ 4ನೇ ಎಸೆತದಲ್ಲಿ ಇನ್ನೊಂದು ವೈಡ್ ಎಸೆಯುವ ಮೂಲಕ ಅಚ್ಚರಿ ಮೂಡಿಸಿದರು.

4 / 6
ಹೀಗೆ ನಾಲ್ಕು ವೈಡ್​ಗಳೊಂದಿಗೆ ಶಾಹೀನ್ ಅಫ್ರಿದಿ ಈ ಓವರ್​ನಲ್ಲಿ ಒಟ್ಟು 13 ರನ್​ಗಳನ್ನು ನೀಡಿದ್ದರು. ಪಾಕಿಸ್ತಾನ್ ವೇಗಿಯ ಕುತಂತ್ರದ ಹೊರತಾಗಿಯೂ ಕೊನೆಯ ಓವರ್​ನಲ್ಲಿ ವಿರಾಟ್ ಕೊಹ್ಲಿಗೆ ಸ್ಟ್ರೈಕ್ ಲಭಿಸಿತು. ಖುಶ್ದಿಲ್ ಶಾ ಎಸೆದ 42ನೇ ಓವರ್​ನ ಮೊದಲ ಎಸೆತದಲ್ಲಿ ಕೊಹ್ಲಿ ಒಂದು ರನ್ ಕಲೆಹಾಕಿದರು. ಮರು ಎಸೆತದಲ್ಲಿ ಅಕ್ಷರ್ ಪಟೇಲ್ ಒಂದು ರನ್​ಗಳಿಸಿ ಮತ್ತೆ ಸ್ಟ್ರೈಕ್ ನೀಡಿದರು.

ಹೀಗೆ ನಾಲ್ಕು ವೈಡ್​ಗಳೊಂದಿಗೆ ಶಾಹೀನ್ ಅಫ್ರಿದಿ ಈ ಓವರ್​ನಲ್ಲಿ ಒಟ್ಟು 13 ರನ್​ಗಳನ್ನು ನೀಡಿದ್ದರು. ಪಾಕಿಸ್ತಾನ್ ವೇಗಿಯ ಕುತಂತ್ರದ ಹೊರತಾಗಿಯೂ ಕೊನೆಯ ಓವರ್​ನಲ್ಲಿ ವಿರಾಟ್ ಕೊಹ್ಲಿಗೆ ಸ್ಟ್ರೈಕ್ ಲಭಿಸಿತು. ಖುಶ್ದಿಲ್ ಶಾ ಎಸೆದ 42ನೇ ಓವರ್​ನ ಮೊದಲ ಎಸೆತದಲ್ಲಿ ಕೊಹ್ಲಿ ಒಂದು ರನ್ ಕಲೆಹಾಕಿದರು. ಮರು ಎಸೆತದಲ್ಲಿ ಅಕ್ಷರ್ ಪಟೇಲ್ ಒಂದು ರನ್​ಗಳಿಸಿ ಮತ್ತೆ ಸ್ಟ್ರೈಕ್ ನೀಡಿದರು.

5 / 6
42ನೇ ಓವರ್​ನ ಮೂರನೇ ಎಸೆತದಲ್ಲಿ ಡೀಪ್ ಎಕ್ಸ್​ಟ್ರಾ ಕವರ್​ನತ್ತ ಆಕರ್ಷಕ ಫೋರ್ ಬಾರಿಸಿ ವಿರಾಟ್ ಕೊಹ್ಲಿ ಶತಕ ಪೂರೈಸಿದರು. ಅತ್ತ ಕಿಂಗ್ ಕೊಹ್ಲಿಯ ಶತಕ ತಪ್ಪಿಸಲು ಯತ್ನಿಸಿದ್ದ ಶಾಹೀನ್ ಅಫ್ರಿದಿ ಪೆಚ್ಚು ಮೊರೆಯೊಂದಿಗೆ ಬಂದು ವಿರಾಟ್ ಕೊಹ್ಲಿಯ ಕೈ ಕುಲುಕಿದರು.

42ನೇ ಓವರ್​ನ ಮೂರನೇ ಎಸೆತದಲ್ಲಿ ಡೀಪ್ ಎಕ್ಸ್​ಟ್ರಾ ಕವರ್​ನತ್ತ ಆಕರ್ಷಕ ಫೋರ್ ಬಾರಿಸಿ ವಿರಾಟ್ ಕೊಹ್ಲಿ ಶತಕ ಪೂರೈಸಿದರು. ಅತ್ತ ಕಿಂಗ್ ಕೊಹ್ಲಿಯ ಶತಕ ತಪ್ಪಿಸಲು ಯತ್ನಿಸಿದ್ದ ಶಾಹೀನ್ ಅಫ್ರಿದಿ ಪೆಚ್ಚು ಮೊರೆಯೊಂದಿಗೆ ಬಂದು ವಿರಾಟ್ ಕೊಹ್ಲಿಯ ಕೈ ಕುಲುಕಿದರು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!