AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaheen Afridi: ಶಾಹೀನ್ ಅಫ್ರಿದಿ ಈಗ DSP: ಹೊಸ ಇನಿಂಗ್ಸ್ ಆರಂಭಿಸಿದ ಪಾಕ್ ವೇಗಿ

Shaheen Afridi: ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಅಫ್ರಿದಿ ಸಾಕಷ್ಟು ಸದ್ದು ಮಾಡಿದ್ದರು.

TV9 Web
| Edited By: |

Updated on: Jul 05, 2022 | 3:59 PM

Share
ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಇದೀಗ ಡಿಎಸ್​ಪಿ ಆಗಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಖೈಬರ್ ಪಖ್ತುಂಖ್ವಾ ಪೊಲೀಸರು ಅವರಿಗೆ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಿದ್ದು, ಈ ಮೂಲಕ ಕ್ರಿಕೆಟಿಗನಾಗಿ ಜೊತೆಗೆ ಡಿಎಸ್​ಪಿ ಆಗಿ ಶಾಹೀನ್ ಅಫ್ರಿದಿ ಕಾಣಿಸಿಕೊಳ್ಳಲಿದ್ದಾರೆ.

ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಇದೀಗ ಡಿಎಸ್​ಪಿ ಆಗಿ ಹೊಸ ಇನಿಂಗ್ಸ್​ ಆರಂಭಿಸಿದ್ದಾರೆ. ಖೈಬರ್ ಪಖ್ತುಂಖ್ವಾ ಪೊಲೀಸರು ಅವರಿಗೆ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಿದ್ದು, ಈ ಮೂಲಕ ಕ್ರಿಕೆಟಿಗನಾಗಿ ಜೊತೆಗೆ ಡಿಎಸ್​ಪಿ ಆಗಿ ಶಾಹೀನ್ ಅಫ್ರಿದಿ ಕಾಣಿಸಿಕೊಳ್ಳಲಿದ್ದಾರೆ.

1 / 6
ಶಾಹೀನ್ ಅವರ ತಂದೆಯೂ ಪೊಲೀಸ್ ಅಧಿಕಾರಿಯಾಗಿದ್ದರು. ಅಲ್ಲದೆ ಅವರ ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪಾಕಿಸ್ತಾನದ ಯೂತ್ ಐಕಾನ್ ಆಗಿ ಗುರುತಿಸಿಕೊಂಡಿರುವ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಲಾಗಿದೆ.

ಶಾಹೀನ್ ಅವರ ತಂದೆಯೂ ಪೊಲೀಸ್ ಅಧಿಕಾರಿಯಾಗಿದ್ದರು. ಅಲ್ಲದೆ ಅವರ ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪಾಕಿಸ್ತಾನದ ಯೂತ್ ಐಕಾನ್ ಆಗಿ ಗುರುತಿಸಿಕೊಂಡಿರುವ ಗೌರವ ಡಿಎಸ್​ಪಿ ಹುದ್ದೆಯನ್ನು ನೀಡಲಾಗಿದೆ.

2 / 6
 ಈ ಮೂಲಕ ಯುವಕರನ್ನು ಪೊಲೀಸ್ ಇಖಾಲೆಯತ್ತ ಸೆಳೆಯಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಹೊಸ ಹುದ್ದೆಯಿಂದಾಗಿ ಜನರಲ್ಲಿ ಶಾಹೀನ್ ಅವರ ಮೇಲಿನ ನಂಬಿಕೆ ಹೆಚ್ಚುತ್ತದೆ ಎಂದು  ಪಖ್ತುಂಖ್ವಾ ಪೊಲೀಸರು ತಿಳಿಸಿದ್ದಾರೆ.

ಈ ಮೂಲಕ ಯುವಕರನ್ನು ಪೊಲೀಸ್ ಇಖಾಲೆಯತ್ತ ಸೆಳೆಯಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ಹೊಸ ಹುದ್ದೆಯಿಂದಾಗಿ ಜನರಲ್ಲಿ ಶಾಹೀನ್ ಅವರ ಮೇಲಿನ ನಂಬಿಕೆ ಹೆಚ್ಚುತ್ತದೆ ಎಂದು ಪಖ್ತುಂಖ್ವಾ ಪೊಲೀಸರು ತಿಳಿಸಿದ್ದಾರೆ.

3 / 6
ಡಿಎಸ್​ಪಿ ಶಾಹೀನ್ ಅಫ್ರಿದಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ರಾಯಭಾರಿಯಾಗಿರುವುದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ. ಅಲ್ಲದೆ ನಮ್ಮ ತಾಯ್ನಾಡನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ಪಾಕಿಸ್ತಾನಿ ಪಡೆಗಳಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಅಫ್ರಿದಿ ತಿಳಿಸಿದ್ದಾರೆ.

ಡಿಎಸ್​ಪಿ ಶಾಹೀನ್ ಅಫ್ರಿದಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪೊಲೀಸ್ ರಾಯಭಾರಿಯಾಗಿರುವುದು ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ. ಅಲ್ಲದೆ ನಮ್ಮ ತಾಯ್ನಾಡನ್ನು ಸುರಕ್ಷಿತವಾಗಿರಿಸಿದ್ದಕ್ಕಾಗಿ ಪಾಕಿಸ್ತಾನಿ ಪಡೆಗಳಿಗೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಅಫ್ರಿದಿ ತಿಳಿಸಿದ್ದಾರೆ.

4 / 6
ಎಡಗೈ ವೇಗದ ಬೌಲರ್ ಶಾಹೀನ್ ಅಫ್ರಿದಿ ಪ್ರಸ್ತುತ ಪಾಕಿಸ್ತಾನ ತಂಡದ ಭಾಗವಾಗಿದ್ದಾರೆ. ಈ ತಿಂಗಳು ನಡೆಯಲಿರುವ ಶ್ರೀಲಂಕಾ ವಿರುದ್ದದ ಸರಣಿಗೂ ಅಫ್ರಿದಿ ಆಯ್ಕೆಯಾಗಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವಟ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಅಫ್ರಿದಿ ಸಾಕಷ್ಟು ಸುದ್ದಿ ಮಾಡಿದ್ದರು.

ಎಡಗೈ ವೇಗದ ಬೌಲರ್ ಶಾಹೀನ್ ಅಫ್ರಿದಿ ಪ್ರಸ್ತುತ ಪಾಕಿಸ್ತಾನ ತಂಡದ ಭಾಗವಾಗಿದ್ದಾರೆ. ಈ ತಿಂಗಳು ನಡೆಯಲಿರುವ ಶ್ರೀಲಂಕಾ ವಿರುದ್ದದ ಸರಣಿಗೂ ಅಫ್ರಿದಿ ಆಯ್ಕೆಯಾಗಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವಟ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಅಫ್ರಿದಿ ಸಾಕಷ್ಟು ಸುದ್ದಿ ಮಾಡಿದ್ದರು.

5 / 6
ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಅಭಿಮಾನಿಗಳು ಶಾಹೀನ್ ಅಫ್ರಿದಿ ಹಾಗೂ ಟೀಮ್ ಇಂಡಿಯಾ ಪ್ರಮುಖ ಬ್ಯಾಟ್ಸ್​ಮನ್​ಗಳ ಕದನವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಏಕೆಂದರೆ ಅಕ್ಟೋಬರ್ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದ್ದು, ಅಭಿಮಾನಿಗಳು ಶಾಹೀನ್ ಅಫ್ರಿದಿ ಹಾಗೂ ಟೀಮ್ ಇಂಡಿಯಾ ಪ್ರಮುಖ ಬ್ಯಾಟ್ಸ್​ಮನ್​ಗಳ ಕದನವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಏಕೆಂದರೆ ಅಕ್ಟೋಬರ್ 22 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ