AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6,6: ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಶಾರುಖ್ ಖಾನ್

TNPL 2024: ಶಾರುಖ್ ಖಾನ್ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಲೈಕಾ ಕೋವೈ ಕಿಂಗ್ಸ್ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಇನ್ನು ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿರುವ ಶಾರುಖ್ ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾದ್ಯತೆಯಿದೆ. ಹೀಗಾಗಿ ತಮಿಳುನಾಡು ಮೂಲದ ಸ್ಪೋಟಕ ದಾಂಡಿಗನ ಖರೀದಿಗೆ ಕೆಲ ಫ್ರಾಂಚೈಸಿಗಳು ಹೆಚ್ಚಿನ ಆಸಕ್ತಿವಹಿಸಬಹುದು.

ಝಾಹಿರ್ ಯೂಸುಫ್
|

Updated on: Jul 28, 2024 | 11:34 AM

ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಶಾರುಖ್ ಖಾನ್ ಸ್ಪೋಟಕ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ. ಈ ಟೂರ್ನಿಯ 25ನೇ ಪಂದ್ಯದಲ್ಲಿ ಸೇಲಂ ಸ್ಪಾರ್ಟನ್ಸ್ vs ಲೈಕಾ ಕೋವೈ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಲೈಕಾ ಕೋವೈ ಕಿಂಗ್ಸ್ ತಂಡದ ನಾಯಕ ಶಾರುಖ್ ಖಾನ್ ಬೌಲಿಂಗ್ ಆಯ್ದುಕೊಂಡರು.

ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಶಾರುಖ್ ಖಾನ್ ಸ್ಪೋಟಕ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ. ಈ ಟೂರ್ನಿಯ 25ನೇ ಪಂದ್ಯದಲ್ಲಿ ಸೇಲಂ ಸ್ಪಾರ್ಟನ್ಸ್ vs ಲೈಕಾ ಕೋವೈ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಲೈಕಾ ಕೋವೈ ಕಿಂಗ್ಸ್ ತಂಡದ ನಾಯಕ ಶಾರುಖ್ ಖಾನ್ ಬೌಲಿಂಗ್ ಆಯ್ದುಕೊಂಡರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಸೇಲಂ ಸ್ಪಾರ್ಟನ್ಸ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕರಾದ ವಿಶಾಲ್ ವೈದ್ಯ (36) ಹಾಗೂ ಅಭಿಷೇಕ್ (20) ಉತ್ತಮ ಅಡಿಪಾಯ ಹಾಕಿಕೊಟ್ಟರೆ, ಅಂತಿಮ ಹಂತದಲ್ಲಿ ಕಣಕ್ಕಿಳಿದ ಹರೀಶ್ ಕುಮಾರ್ 19 ಎಸೆತಗಳಲ್ಲಿ 5 ಸಿಕ್ಸ್​ನೊಂದಿಗೆ 42 ರನ್​ ಚಚ್ಚಿದರು. ಈ ಮೂಲಕ ಸೇಲಂ ಸ್ಪಾರ್ಟನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಸೇಲಂ ಸ್ಪಾರ್ಟನ್ಸ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕರಾದ ವಿಶಾಲ್ ವೈದ್ಯ (36) ಹಾಗೂ ಅಭಿಷೇಕ್ (20) ಉತ್ತಮ ಅಡಿಪಾಯ ಹಾಕಿಕೊಟ್ಟರೆ, ಅಂತಿಮ ಹಂತದಲ್ಲಿ ಕಣಕ್ಕಿಳಿದ ಹರೀಶ್ ಕುಮಾರ್ 19 ಎಸೆತಗಳಲ್ಲಿ 5 ಸಿಕ್ಸ್​ನೊಂದಿಗೆ 42 ರನ್​ ಚಚ್ಚಿದರು. ಈ ಮೂಲಕ ಸೇಲಂ ಸ್ಪಾರ್ಟನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು.

2 / 6
172 ರನ್​ಗಳ ಕಠಿಣ ಗುರಿ ಪಡೆದ ಲೈಕಾ ಕೋವೈ ಕಿಂಗ್ಸ್ ತಂಡಕ್ಕೆ ಸಂಜಯ್ (48) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 22 ರನ್​ಗಳ ಕೊಡುಗೆ ನೀಡಿದರು. ಇದಾಗ್ಯೂ ಸೇಲಂ ಸ್ಪಾರ್ಟನ್ಸ್ ತಂಡವು ಪಂದ್ಯದ ಮೇಲೆ ಹಿಡಿತ ಹೊಂದಿತ್ತು. ಆದರೆ ಯಾವಾಗ ಶಾರುಖ್ ಖಾನ್ ಕಣಕ್ಕಿಳಿದರೋ ಇಡೀ ಪಂದ್ಯದ ಚಿತ್ರಣ ಬದಲಾಯಿತು.

172 ರನ್​ಗಳ ಕಠಿಣ ಗುರಿ ಪಡೆದ ಲೈಕಾ ಕೋವೈ ಕಿಂಗ್ಸ್ ತಂಡಕ್ಕೆ ಸಂಜಯ್ (48) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 22 ರನ್​ಗಳ ಕೊಡುಗೆ ನೀಡಿದರು. ಇದಾಗ್ಯೂ ಸೇಲಂ ಸ್ಪಾರ್ಟನ್ಸ್ ತಂಡವು ಪಂದ್ಯದ ಮೇಲೆ ಹಿಡಿತ ಹೊಂದಿತ್ತು. ಆದರೆ ಯಾವಾಗ ಶಾರುಖ್ ಖಾನ್ ಕಣಕ್ಕಿಳಿದರೋ ಇಡೀ ಪಂದ್ಯದ ಚಿತ್ರಣ ಬದಲಾಯಿತು.

3 / 6
6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾರುಖ್ ಖಾನ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದರು. ಸೇಲಂ ಸ್ಪಾರ್ಟನ್ಸ್ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದ ಶಾರುಖ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​ಗಳನ್ನು ಅಟ್ಟಿದರು. ಪರಿಣಾಮ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಇದು ಈ ಬಾರಿಯ ಟಿಎನ್​ಪಿಎಲ್​ನ ಅತ್ಯಂತ ವೇಗದ ಅರ್ಧಶತಕ ಎಂಬುದು ವಿಶೇಷ.

6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾರುಖ್ ಖಾನ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದರು. ಸೇಲಂ ಸ್ಪಾರ್ಟನ್ಸ್ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದ ಶಾರುಖ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​ಗಳನ್ನು ಅಟ್ಟಿದರು. ಪರಿಣಾಮ ಕೇವಲ 17 ಎಸೆತಗಳಲ್ಲಿ ಅರ್ಧಶತಕ ಮೂಡಿಬಂತು. ಇದು ಈ ಬಾರಿಯ ಟಿಎನ್​ಪಿಎಲ್​ನ ಅತ್ಯಂತ ವೇಗದ ಅರ್ಧಶತಕ ಎಂಬುದು ವಿಶೇಷ.

4 / 6
ಇನ್ನು 18 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ ಬಾರಿಸಿ ಶಾರುಖ್ ಖಾನ್ (50) ಔಟಾದರು. ಅಷ್ಟರಲ್ಲಾಗಲೇ ಗೆಲುವಿನತ್ತ ಮುಖ ಮಾಡಿದ್ದ ಲೈಕಾ ಕೋವೈ ಕಿಂಗ್ಸ್ ತಂಡವು ಅಂತಿಮ ಓವರ್​ನಲ್ಲಿ 6 ರನ್ ಕಲೆಹಾಕಿ 1 ವಿಕೆಟ್​ನ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ ಶಾರುಖ್ ಖಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಇನ್ನು 18 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ ಬಾರಿಸಿ ಶಾರುಖ್ ಖಾನ್ (50) ಔಟಾದರು. ಅಷ್ಟರಲ್ಲಾಗಲೇ ಗೆಲುವಿನತ್ತ ಮುಖ ಮಾಡಿದ್ದ ಲೈಕಾ ಕೋವೈ ಕಿಂಗ್ಸ್ ತಂಡವು ಅಂತಿಮ ಓವರ್​ನಲ್ಲಿ 6 ರನ್ ಕಲೆಹಾಕಿ 1 ವಿಕೆಟ್​ನ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ ಶಾರುಖ್ ಖಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

5 / 6
ಅಂದಹಾಗೆ ಶಾರುಖ್ ಖಾನ್ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಸ್ಪೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಯುವ ದಾಂಡಿಗ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಮುಂದಿನ ಸೀಸನ್​ಗಾಗಿ ಶಾರುಖ್ ಖಾನ್ ಅವರನ್ನು ಯಾವ ತಂಡ ಖರೀದಿಸಲಿದೆ ಕಾದು ನೋಡಬೇಕಿದೆ.

ಅಂದಹಾಗೆ ಶಾರುಖ್ ಖಾನ್ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. ಸ್ಪೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಯುವ ದಾಂಡಿಗ ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಮುಂದಿನ ಸೀಸನ್​ಗಾಗಿ ಶಾರುಖ್ ಖಾನ್ ಅವರನ್ನು ಯಾವ ತಂಡ ಖರೀದಿಸಲಿದೆ ಕಾದು ನೋಡಬೇಕಿದೆ.

6 / 6
Follow us
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್