India Test Squad: ಭಾರತ ಟೆಸ್ಟ್ ತಂಡದಿಂದ ಮೂವರು ಔಟ್

Updated on: Oct 26, 2024 | 9:04 AM

Border-Gavaskar Trophy: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಿದ್ದು, ಈ ಪಂದ್ಯಗಳಿಗಾಗಿ 18 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ.

1 / 5
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡದಲ್ಲಿ ಮೂವರು ಪ್ರಮುಖ ಆಟಗಾರರಿಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ. ಅಂದರೆ ಪ್ರಸ್ತುತ ಟೆಸ್ಟ್ ತಂಡದ ಭಾಗವಾಗಿರುವ ಇಬ್ಬರು ಆಟಗಾರರನ್ನು ಮುಂಬರುವ ಸರಣಿಯಿಂದ ಕೈ ಬಿಡಲಾಗಿದೆ. ಅವರೆಂದರೆ...

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡದಲ್ಲಿ ಮೂವರು ಪ್ರಮುಖ ಆಟಗಾರರಿಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ. ಅಂದರೆ ಪ್ರಸ್ತುತ ಟೆಸ್ಟ್ ತಂಡದ ಭಾಗವಾಗಿರುವ ಇಬ್ಬರು ಆಟಗಾರರನ್ನು ಮುಂಬರುವ ಸರಣಿಯಿಂದ ಕೈ ಬಿಡಲಾಗಿದೆ. ಅವರೆಂದರೆ...

2 / 5
ಕುಲ್ದೀಪ್ ಯಾದವ್: ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಭಾಗವಾಗಿರುವ ಕುಲ್ದೀಪ್ ಯಾದವ್​ ಅವರನ್ನು ಆಸ್ಟ್ರೇಲಿಯಾ ಸರಣಿಯಿಂದ ಕೈ ಬಿಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಕುಲ್ದೀಪ್ ಯಾದವ್​ ದೀರ್ಘಕಾಲದ ತೊಡೆಸಂದು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ.

ಕುಲ್ದೀಪ್ ಯಾದವ್: ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಭಾಗವಾಗಿರುವ ಕುಲ್ದೀಪ್ ಯಾದವ್​ ಅವರನ್ನು ಆಸ್ಟ್ರೇಲಿಯಾ ಸರಣಿಯಿಂದ ಕೈ ಬಿಡಲಾಗಿದೆ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಕುಲ್ದೀಪ್ ಯಾದವ್​ ದೀರ್ಘಕಾಲದ ತೊಡೆಸಂದು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಾಗಿದೆ.

3 / 5
ಅಕ್ಷರ್ ಪಟೇಲ್: ಪ್ರಸ್ತುತ ಭಾರತ ಟೆಸ್ಟ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಕೂಡ ಬಾರ್ಡರ್-ಗವಾಸ್ಕರ್ ಸರಣಿಗೆ ಆಯ್ಕೆಯಾಗಿಲ್ಲ. ಇದಕ್ಕೆ ಕಾರಣ ಅವರು ಮುಂಬರುವ ಸೌತ್ ಆಫ್ರಿಕಾ ಸರಣಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು. ಅಕ್ಷರ್ ಪಟೇಲ್ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ.

ಅಕ್ಷರ್ ಪಟೇಲ್: ಪ್ರಸ್ತುತ ಭಾರತ ಟೆಸ್ಟ್ ತಂಡದ ಭಾಗವಾಗಿರುವ ಅಕ್ಷರ್ ಪಟೇಲ್ ಕೂಡ ಬಾರ್ಡರ್-ಗವಾಸ್ಕರ್ ಸರಣಿಗೆ ಆಯ್ಕೆಯಾಗಿಲ್ಲ. ಇದಕ್ಕೆ ಕಾರಣ ಅವರು ಮುಂಬರುವ ಸೌತ್ ಆಫ್ರಿಕಾ ಸರಣಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು. ಅಕ್ಷರ್ ಪಟೇಲ್ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗಿಡಲಾಗಿದೆ.

4 / 5
ಮೊಹಮ್ಮದ್ ಶಮಿ: ಪಾದದ ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ನಿರೀಕ್ಷೆಯಿತ್ತು. ಆದರೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಅವರು ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನೂ ಸಹ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿಲ್ಲ.

ಮೊಹಮ್ಮದ್ ಶಮಿ: ಪಾದದ ಗಾಯದಿಂದ ಚೇತರಿಸಿಕೊಂಡಿರುವ ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಕಂಬ್ಯಾಕ್ ಮಾಡುವ ನಿರೀಕ್ಷೆಯಿತ್ತು. ಆದರೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಅವರು ಈವರೆಗೆ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಅವರನ್ನೂ ಸಹ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿಲ್ಲ.

5 / 5
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us