Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs RCB: ಭರ್ಜರಿ ಗೆಲುವಿನ ಬಳಿಕ ಹೀನಾಯ ಸೋಲು: 123 ರನ್​ಗೆ ಆಲೌಟ್ ಆದ ಆರ್​ಸಿಬಿ

IPL 20203: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

Vinay Bhat
|

Updated on: Apr 07, 2023 | 7:53 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ತಾನಾಡಿದ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಮೆರೆದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇದೀಗ ತಾನಾಡಿದ ದ್ವಿತೀಯ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ.

1 / 7
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಆರ್​ಸಿಬಿ 200+ ರನ್ ಬಿಟ್ಟುಕೊಟ್ಟಿತು. ಅಲ್ಲದೆ 123 ರನ್​ಗೆ ಆಲೌಟ್ ಆಯಿತು. ಕೆಕೆಆರ್ 81 ರನ್​ಗಳ ಅಮೋಘ ಜಯ ಸಾಧಿಸಿತು.

2 / 7
ಟಾಸ್​ ಸೋತು ​ಮೊದಲು ಬ್ಯಾಟಿಂಗ್​ಗೆ ಇಳಿದ ನಿತೀಶ್ ರಾಣಾ ಪಡೆ ಆರಂಭಿಕ ಆಘಾತದ ಹೊರತಾಗಿಯೂ ಬೃಹತ್​ ಮೊತ್ತ ಕಲೆ ಹಾಕಿತು. ರಹಮಾನುಲ್ಲಾ ಅವರು 3 ಸಿಕ್ಸರ್​ ಮತ್ತು 4 ಬೌಂಡರಿಗಳ ಮೂಲಕ 57 ರನ್​ ಗಳಿಸಿದರು. ವೆಂಕಟೇಶ್​ ಅಯ್ಯರ್​ (3), ಮಂದೀಪ್​ ಸಿಂಗ್​(0), ನಿತೀಶ್​ ರಾಣಾ (1) ರನ್​ ಗಳಿಸಿ ಪೆವಿಲಿಯನ್​ ಪರೇಡ್​ ನಡೆಸಿದರು.

ಟಾಸ್​ ಸೋತು ​ಮೊದಲು ಬ್ಯಾಟಿಂಗ್​ಗೆ ಇಳಿದ ನಿತೀಶ್ ರಾಣಾ ಪಡೆ ಆರಂಭಿಕ ಆಘಾತದ ಹೊರತಾಗಿಯೂ ಬೃಹತ್​ ಮೊತ್ತ ಕಲೆ ಹಾಕಿತು. ರಹಮಾನುಲ್ಲಾ ಅವರು 3 ಸಿಕ್ಸರ್​ ಮತ್ತು 4 ಬೌಂಡರಿಗಳ ಮೂಲಕ 57 ರನ್​ ಗಳಿಸಿದರು. ವೆಂಕಟೇಶ್​ ಅಯ್ಯರ್​ (3), ಮಂದೀಪ್​ ಸಿಂಗ್​(0), ನಿತೀಶ್​ ರಾಣಾ (1) ರನ್​ ಗಳಿಸಿ ಪೆವಿಲಿಯನ್​ ಪರೇಡ್​ ನಡೆಸಿದರು.

3 / 7
ರಿಂಕು ಸಿಂಗ್​ 3 ಸಿಕ್ಸರ್​ ಮತ್ತು 2 ಬೌಂಡರಿ ಸಹಾಯದಿಂದ 46 ರನ್​ ಗಳಿಸಿ ತಂಡಕ್ಕೆ ಆಸರೆಯಾದರು. ನಂತರ ಶುರುವಾಗಿದ್ದು ಶಾರ್ದೂಲ್​ ಠಾಕೂರ್​ ಅಬ್ಬರ. 234.48ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇವರು ಕೇವಲ 29 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಗಳಿಸುವ ಮೂಲಕ 68 ರನ್​ ಗಳಿಸಿ ತಂಡ ಬೃಹತ್​ ರನ್​ ಗಳಿಸುವಲ್ಲಿ ಸಹಕರಿಸಿದರು.

ರಿಂಕು ಸಿಂಗ್​ 3 ಸಿಕ್ಸರ್​ ಮತ್ತು 2 ಬೌಂಡರಿ ಸಹಾಯದಿಂದ 46 ರನ್​ ಗಳಿಸಿ ತಂಡಕ್ಕೆ ಆಸರೆಯಾದರು. ನಂತರ ಶುರುವಾಗಿದ್ದು ಶಾರ್ದೂಲ್​ ಠಾಕೂರ್​ ಅಬ್ಬರ. 234.48ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಇವರು ಕೇವಲ 29 ಎಸೆತಗಳಲ್ಲಿ 3 ಸಿಕ್ಸರ್, 9 ಬೌಂಡರಿ ಗಳಿಸುವ ಮೂಲಕ 68 ರನ್​ ಗಳಿಸಿ ತಂಡ ಬೃಹತ್​ ರನ್​ ಗಳಿಸುವಲ್ಲಿ ಸಹಕರಿಸಿದರು.

4 / 7
ಟಾರ್ಗೆಟ್​ ಬೆನ್ನಟ್ಟಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ನಾಯಕ ಡು ಪ್ಲೆಸಿಸ್ ಉತ್ತಮ ಆರಂಭ ಒದಗಿಸಿ ಭದ್ರ ಅಡಿಪಾಯ ಹಾಕುವ ಮುನ್ಸೂಚನೆ ನೀಡಿದರು. ಆದರೆ, ಕೊಹ್ಲಿ (21), ಡುಪ್ಲೆಸಿಸ್​ (23) ಔಟಾಗಿದ್ದೇ ತಡ ತಂಡದ ದಿಢೀರ್ ಕುಸಿತ ಕಂಡಿತು.

ಟಾರ್ಗೆಟ್​ ಬೆನ್ನಟ್ಟಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ನಾಯಕ ಡು ಪ್ಲೆಸಿಸ್ ಉತ್ತಮ ಆರಂಭ ಒದಗಿಸಿ ಭದ್ರ ಅಡಿಪಾಯ ಹಾಕುವ ಮುನ್ಸೂಚನೆ ನೀಡಿದರು. ಆದರೆ, ಕೊಹ್ಲಿ (21), ಡುಪ್ಲೆಸಿಸ್​ (23) ಔಟಾಗಿದ್ದೇ ತಡ ತಂಡದ ದಿಢೀರ್ ಕುಸಿತ ಕಂಡಿತು.

5 / 7
ವರುಣ್ ಚಕ್ರವರ್ತಿ ಅವರು ಒಂದೇ ಓವರ್​ನಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ (5)​ ಮತ್ತು ಹರ್ಷಲ್​ ಪಟೇಲ್​ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಮೈಕಲ್​ ಬ್ರೇಸ್​ವೆಲ್ (19) ಕ್ಯಾಚಿತ್ತು ನಿರ್ಗಮಿಸಿದರು. ಶಹಬಾಜ್ ಅಹ್ಮದ್​ ಅವರನ್ನು 1 ರನ್​ಗೆ ನರೈನ್​ ಔಟ್​ ಮಾಡಿದರು.

ವರುಣ್ ಚಕ್ರವರ್ತಿ ಅವರು ಒಂದೇ ಓವರ್​ನಲ್ಲಿ ಗ್ಲೆನ್​ ಮ್ಯಾಕ್ಸ್​ವೆಲ್ (5)​ ಮತ್ತು ಹರ್ಷಲ್​ ಪಟೇಲ್​ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಮೈಕಲ್​ ಬ್ರೇಸ್​ವೆಲ್ (19) ಕ್ಯಾಚಿತ್ತು ನಿರ್ಗಮಿಸಿದರು. ಶಹಬಾಜ್ ಅಹ್ಮದ್​ ಅವರನ್ನು 1 ರನ್​ಗೆ ನರೈನ್​ ಔಟ್​ ಮಾಡಿದರು.

6 / 7
ದಿನೇಶ್​ ಕಾರ್ತಿಕ್ (9), ಅನುಜ್​ ರಾವತ್​ (1) ಮತ್ತು ಕರ್ಣ್​ ಶರ್ಮಾ (1), ಆಕಾಶ್​ ದೀಪ್​ 1, ಡೇವಿಡ್​ ವಿಲ್ಲೆ 20 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆರ್​ಸಿಬಿ 17.4 ಓವರ್​ಗಳಲ್ಲಿ 123 ರನ್​ಗಳಿಗೆ ಸರ್ವಪತನ ಕಂಡಿತು. 81 ರನ್​ಗಳ ಜಯದೊಂದಿಗೆ ಕೆಕೆಆರ್ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ.

ದಿನೇಶ್​ ಕಾರ್ತಿಕ್ (9), ಅನುಜ್​ ರಾವತ್​ (1) ಮತ್ತು ಕರ್ಣ್​ ಶರ್ಮಾ (1), ಆಕಾಶ್​ ದೀಪ್​ 1, ಡೇವಿಡ್​ ವಿಲ್ಲೆ 20 ರನ್ ಗಳಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ಆರ್​ಸಿಬಿ 17.4 ಓವರ್​ಗಳಲ್ಲಿ 123 ರನ್​ಗಳಿಗೆ ಸರ್ವಪತನ ಕಂಡಿತು. 81 ರನ್​ಗಳ ಜಯದೊಂದಿಗೆ ಕೆಕೆಆರ್ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ.

7 / 7
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ