Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಯಾವ ತಂಡಕ್ಕೂ ಬೇಡವಾಗಿದ್ದ ಶಾರ್ದೂಲ್ ಈಗ ಐಪಿಎಲ್​ನ ನಂ.1 ಬೌಲರ್​..!

Shardul Thakur's Purple Cap Performance: ಐಪಿಎಲ್ 2025ರ ಏಳನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ ಸೋಲುಂಡಿದೆ. ಲಕ್ನೋ ಪರ ಶಾರ್ದೂಲ್ ಠಾಕೂರ್ ಅವರು ಅದ್ಭುತ ಬೌಲಿಂಗ್ ಮಾಡಿ 4 ವಿಕೆಟ್‌ಗಳನ್ನು ಪಡೆದು ಪರ್ಪಲ್ ಕ್ಯಾಪ್ ಗೆದ್ದಿದ್ದಾರೆ. ಮೆಗಾ ಹರಾಜಿನಲ್ಲಿ ಮಾರಾಟವಾಗದೆ ಉಳಿದಿದ್ದ ಶಾರ್ದೂಲ್, ಲಕ್ನೋ ತಂಡ ಸೇರಿದ ನಂತರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರ ಈ ಅದ್ಭುತ ಬೌಲಿಂಗ್ ಲಕ್ನೋ ತಂಡಕ್ಕೆ ಗೆಲುವನ್ನು ತಂದುಕೊಟ್ಟಿದೆ.

ಪೃಥ್ವಿಶಂಕರ
|

Updated on: Mar 27, 2025 | 10:42 PM

ಐಪಿಎಲ್ 2025 ರ ಏಳನೇ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್‌ ತಂಡವನ್ನು 190 ರನ್​ಗಳಿಗೆ ಕಟ್ಟಿಹಾಕುವಲ್ಲಿ ಲಕ್ನೋ ತಂಡ ಯಶಸ್ವಿಯಾಯಿತು. ಲಕ್ನೋ ಪರ ಮಾರಕ ದಾಳಿ ನಡೆಸಿದ ಶಾರ್ದೂಲ್ ಠಾಕೂರ್, ಅತ್ಯಧಿಕ 4 ವಿಕೆಟ್ ಪಡೆದು ಮಿಂಚಿದರು.

ಐಪಿಎಲ್ 2025 ರ ಏಳನೇ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್‌ ತಂಡವನ್ನು 190 ರನ್​ಗಳಿಗೆ ಕಟ್ಟಿಹಾಕುವಲ್ಲಿ ಲಕ್ನೋ ತಂಡ ಯಶಸ್ವಿಯಾಯಿತು. ಲಕ್ನೋ ಪರ ಮಾರಕ ದಾಳಿ ನಡೆಸಿದ ಶಾರ್ದೂಲ್ ಠಾಕೂರ್, ಅತ್ಯಧಿಕ 4 ವಿಕೆಟ್ ಪಡೆದು ಮಿಂಚಿದರು.

1 / 6
ಆತಿಥೇಯ ಹೈದರಾಬಾದ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ ಶಾರ್ದೂಲ್, ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿರುವ ಹೈದರಾಬಾದ್​ನ ನಾಲ್ವರು ಸ್ಫೋಟಕ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್​ಗಟ್ಟಿದರು. ಈ ಪಂದ್ಯದಲ್ಲಿ ಶಾರ್ದೂಲ್ 4 ಓವರ್‌ಗಳಲ್ಲಿ 34 ರನ್ ನೀಡಿ 4 ವಿಕೆಟ್ ಕಬಳಿಸಿ ಹೈದರಾಬಾದ್ ತಂಡದ ಬ್ಯಾಟಿಂಗ್ ಲೈನ್ ಅಪ್ ಅನ್ನು ನಾಶಪಡಿಸಿದರು.

ಆತಿಥೇಯ ಹೈದರಾಬಾದ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ ಶಾರ್ದೂಲ್, ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿರುವ ಹೈದರಾಬಾದ್​ನ ನಾಲ್ವರು ಸ್ಫೋಟಕ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್​ಗಟ್ಟಿದರು. ಈ ಪಂದ್ಯದಲ್ಲಿ ಶಾರ್ದೂಲ್ 4 ಓವರ್‌ಗಳಲ್ಲಿ 34 ರನ್ ನೀಡಿ 4 ವಿಕೆಟ್ ಕಬಳಿಸಿ ಹೈದರಾಬಾದ್ ತಂಡದ ಬ್ಯಾಟಿಂಗ್ ಲೈನ್ ಅಪ್ ಅನ್ನು ನಾಶಪಡಿಸಿದರು.

2 / 6
ಇದೀಗ ಈ ಪಂದ್ಯದಲ್ಲಿ 4 ವಿಕೆಟ್​ ಪಡೆದ ಸಾಧನೆ ಮಾಡಿದ ಶಾರ್ದೂಲ್ ಈ ಆವೃತ್ತಿಯ ನಂಬರ್-1 ಬೌಲರ್ ಆಗಿ ಹೊರಹೊಮ್ಮಿದ್ದು, ಪರ್ಪಲ್ ಕ್ಯಾಪ್ ಪಡೆದಿದ್ದಾರೆ. ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಶಾರ್ದೂಲ್ ಠಾಕೂರ್ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಅವರು 2 ಪಂದ್ಯಗಳಲ್ಲಿ 6 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇದೀಗ ಈ ಪಂದ್ಯದಲ್ಲಿ 4 ವಿಕೆಟ್​ ಪಡೆದ ಸಾಧನೆ ಮಾಡಿದ ಶಾರ್ದೂಲ್ ಈ ಆವೃತ್ತಿಯ ನಂಬರ್-1 ಬೌಲರ್ ಆಗಿ ಹೊರಹೊಮ್ಮಿದ್ದು, ಪರ್ಪಲ್ ಕ್ಯಾಪ್ ಪಡೆದಿದ್ದಾರೆ. ಇದುವರೆಗೆ ಆಡಿರುವ ಪಂದ್ಯಗಳಲ್ಲಿ ಶಾರ್ದೂಲ್ ಠಾಕೂರ್ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಅವರು 2 ಪಂದ್ಯಗಳಲ್ಲಿ 6 ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 6
ಶಾರ್ದೂಲ್ ಠಾಕೂರ್ ಇಂದು ಐಪಿಎಲ್ 2025 ರಲ್ಲಿ ಛಾಪು ಮೂಡಿಸಿರಬಹುದು. ಆದರೆ ಇದಕ್ಕೂ ಮೊದಲು ಯಾವುದೇ ತಂಡವು ಅವರನ್ನು ಖರೀದಿಸಿರಲಿಲ್ಲ. ಮೆಗಾ ಹರಾಜಿಗೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಪ್ರವೇಶಿಸಿದ್ದ ಶಾರ್ದೂಲ್​ ಮೇಲೆ ಯಾವುದೇ ಫ್ರಾಂಚೈಸಿ ಬಿಡ್ ಮಾಡಲಿಲ್ಲ. ಹೀಗಾಗಿ ಶಾರ್ದೂಲ್ ಮಾರಾಟವಾಗದೆ ಉಳಿಯಬೇಕಾಯಿತು.

ಶಾರ್ದೂಲ್ ಠಾಕೂರ್ ಇಂದು ಐಪಿಎಲ್ 2025 ರಲ್ಲಿ ಛಾಪು ಮೂಡಿಸಿರಬಹುದು. ಆದರೆ ಇದಕ್ಕೂ ಮೊದಲು ಯಾವುದೇ ತಂಡವು ಅವರನ್ನು ಖರೀದಿಸಿರಲಿಲ್ಲ. ಮೆಗಾ ಹರಾಜಿಗೆ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಪ್ರವೇಶಿಸಿದ್ದ ಶಾರ್ದೂಲ್​ ಮೇಲೆ ಯಾವುದೇ ಫ್ರಾಂಚೈಸಿ ಬಿಡ್ ಮಾಡಲಿಲ್ಲ. ಹೀಗಾಗಿ ಶಾರ್ದೂಲ್ ಮಾರಾಟವಾಗದೆ ಉಳಿಯಬೇಕಾಯಿತು.

4 / 6
ಇದಾದ ನಂತರ, ಲಕ್ನೋ ಸೂಪರ್ ಜೈಂಟ್ಸ್ ತಂಡವು ತಮ್ಮ ಪ್ರಮುಖ ವೇಗಿ ಮೊಹ್ಸಿನ್ ಖಾನ್ ಗಾಯಗೊಂಡಾಗ ಅವರ ಬದಲಿಯಾಗಿ ಶಾರ್ದೂಲ್​ ಠಾಕೂರ್​ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು. ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಶಾರ್ದೂಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಓವರ್‌ನಲ್ಲಿ 2 ವಿಕೆಟ್‌ಗಳನ್ನು ಉರುಳಿಸಿದ್ದರು.

ಇದಾದ ನಂತರ, ಲಕ್ನೋ ಸೂಪರ್ ಜೈಂಟ್ಸ್ ತಂಡವು ತಮ್ಮ ಪ್ರಮುಖ ವೇಗಿ ಮೊಹ್ಸಿನ್ ಖಾನ್ ಗಾಯಗೊಂಡಾಗ ಅವರ ಬದಲಿಯಾಗಿ ಶಾರ್ದೂಲ್​ ಠಾಕೂರ್​ ಅವರನ್ನು ತಂಡಕ್ಕೆ ಸೇರಿಸಿಕೊಂಡಿತು. ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಶಾರ್ದೂಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಓವರ್‌ನಲ್ಲಿ 2 ವಿಕೆಟ್‌ಗಳನ್ನು ಉರುಳಿಸಿದ್ದರು.

5 / 6
ಇದಾದ ನಂತರ, ಹೈದರಾಬಾದ್ ವಿರುದ್ಧದ ಪವರ್‌ಪ್ಲೇನಲ್ಲಿಯೇ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರಂತಹ ಬ್ಯಾಟ್ಸ್‌ಮನ್‌ಗಳ ವಿಕೆಟ್‌ಗಳನ್ನು ಪಡೆಯುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಕೊನೆಯಲ್ಲಿ ಅವರು ಮೊಹಮ್ಮದ್ ಶಮಿ ಮತ್ತು ಅಭಿನವ್ ಮನೋಹರ್ ಅವರನ್ನು ಔಟ್ ಮಾಡಿದರು. ಈ ರೀತಿಯಾಗಿ, ಅವರು 4 ಓವರ್‌ಗಳಲ್ಲಿ 34 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರು. ಇದು ಈ ಟೂರ್ನಿಯಲ್ಲಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

ಇದಾದ ನಂತರ, ಹೈದರಾಬಾದ್ ವಿರುದ್ಧದ ಪವರ್‌ಪ್ಲೇನಲ್ಲಿಯೇ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರಂತಹ ಬ್ಯಾಟ್ಸ್‌ಮನ್‌ಗಳ ವಿಕೆಟ್‌ಗಳನ್ನು ಪಡೆಯುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ಕೊನೆಯಲ್ಲಿ ಅವರು ಮೊಹಮ್ಮದ್ ಶಮಿ ಮತ್ತು ಅಭಿನವ್ ಮನೋಹರ್ ಅವರನ್ನು ಔಟ್ ಮಾಡಿದರು. ಈ ರೀತಿಯಾಗಿ, ಅವರು 4 ಓವರ್‌ಗಳಲ್ಲಿ 34 ರನ್‌ಗಳಿಗೆ 4 ವಿಕೆಟ್‌ಗಳನ್ನು ಪಡೆದರು. ಇದು ಈ ಟೂರ್ನಿಯಲ್ಲಿ ಅವರ ಅತ್ಯುತ್ತಮ ಪ್ರದರ್ಶನವಾಗಿದೆ.

6 / 6
Follow us
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್