AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shikhar Dhawan: ಟೆಸ್ಟ್ ತಂಡದಲ್ಲಿ ಚಾನ್ಸ್ ಕೊಡಲ್ಲ, ಮತ್ತೇಕೆ ನಾ ರಣಜಿ ಕ್ರಿಕೆಟ್ ಆಡಲಿ: ಶಿಖರ್ ಧವನ್

Shikhar Dhawan: ಟೀಮ್ ಇಂಡಿಯಾ ಪರ 34 ಟೆಸ್ಟ್ ಪಂದ್ಯಗಳನ್ನಾಡಿರುವ ಶಿಖರ್ ಧವನ್ 7 ಶತಕ ಹಾಗೂ 5 ಅರ್ಧಶತಕದೊಂದಿಗೆ 2315 ರನ್​ ಕಲೆಹಾಕಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 02, 2023 | 1:53 PM

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಆರಂಭಿಕರ ವೈಫಲ್ಯದಿಂದ ಚಿಂತೆಗೀಡಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ 3ನೇ ಟೆಸ್ಟ್​ನಲ್ಲಿ ಶುಭ್​ಮನ್ ಗಿಲ್​ಗೆ ಅವಕಾಶ ನೀಡಲಾಯಿತು. ಆದರೆ ಗಿಲ್ ಅವರಿಂದ ಕೂಡ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ.

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಆರಂಭಿಕರ ವೈಫಲ್ಯದಿಂದ ಚಿಂತೆಗೀಡಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ 3ನೇ ಟೆಸ್ಟ್​ನಲ್ಲಿ ಶುಭ್​ಮನ್ ಗಿಲ್​ಗೆ ಅವಕಾಶ ನೀಡಲಾಯಿತು. ಆದರೆ ಗಿಲ್ ಅವರಿಂದ ಕೂಡ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ.

1 / 7
ಇತ್ತ ಟೀಮ್ ಇಂಡಿಯಾ ಆರಂಭಿಕರ ವೈಫಲ್ಯಗಳ ನಡುವೆ ಅನುಭವಿ ಆಟಗಾರರಿಗೆ ಮಣೆಹಾಕಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಈ ಅಭಿಪ್ರಾಯಗಳ ನಡುವೆ ಶಿಖರ್ ಧವನ್ ಹೆಸರು ಕೂಡ ಕೇಳಿ ಬಂದಿದೆ. ಆದರೆ ಧವನ್ ಮಾತ್ರ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಭರವಸೆಯನ್ನೇ ಹೊಂದಿಲ್ಲ.

ಇತ್ತ ಟೀಮ್ ಇಂಡಿಯಾ ಆರಂಭಿಕರ ವೈಫಲ್ಯಗಳ ನಡುವೆ ಅನುಭವಿ ಆಟಗಾರರಿಗೆ ಮಣೆಹಾಕಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಈ ಅಭಿಪ್ರಾಯಗಳ ನಡುವೆ ಶಿಖರ್ ಧವನ್ ಹೆಸರು ಕೂಡ ಕೇಳಿ ಬಂದಿದೆ. ಆದರೆ ಧವನ್ ಮಾತ್ರ ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಭರವಸೆಯನ್ನೇ ಹೊಂದಿಲ್ಲ.

2 / 7
ಹೌದು, ಶಿಖರ್ ಧವನ್ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದು 5 ವರ್ಷಗಳೇ ಕಳೆದಿವೆ. ಅವರು ಕೊನೆಯ ಬಾರಿ ಟೀಮ್ ಇಂಡಿಯಾ ಪರ ಟೆಸ್ಟ್ ಆಡಿದ್ದು 2018 ರಲ್ಲಿ. ಇದಾದ ಬಳಿಕ ಎಡಗೈ ದಾಂಡಿಗನನ್ನು ದೀರ್ಘಾವಧಿ ಕ್ರಿಕೆಟ್​ಗೆ ಆಯ್ಕೆ ಮಾಡಿಲ್ಲ. ಇದೇ ಕಾರಣದಿಂದಾಗಿ ಇದೀಗ ರಣಜಿ ಕ್ರಿಕೆಟ್ ಆಡುವುದನ್ನು ಕೂಡ ಶಿಖರ್ ಧವನ್ ಬಿಟ್ಟಿದ್ದಾರೆ.

ಹೌದು, ಶಿಖರ್ ಧವನ್ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದು 5 ವರ್ಷಗಳೇ ಕಳೆದಿವೆ. ಅವರು ಕೊನೆಯ ಬಾರಿ ಟೀಮ್ ಇಂಡಿಯಾ ಪರ ಟೆಸ್ಟ್ ಆಡಿದ್ದು 2018 ರಲ್ಲಿ. ಇದಾದ ಬಳಿಕ ಎಡಗೈ ದಾಂಡಿಗನನ್ನು ದೀರ್ಘಾವಧಿ ಕ್ರಿಕೆಟ್​ಗೆ ಆಯ್ಕೆ ಮಾಡಿಲ್ಲ. ಇದೇ ಕಾರಣದಿಂದಾಗಿ ಇದೀಗ ರಣಜಿ ಕ್ರಿಕೆಟ್ ಆಡುವುದನ್ನು ಕೂಡ ಶಿಖರ್ ಧವನ್ ಬಿಟ್ಟಿದ್ದಾರೆ.

3 / 7
ಈ ಬಗ್ಗೆ ಮಾತನಾಡಿರುವ ಶಿಖರ್ ಧವನ್, ನನ್ನ ಟೆಸ್ಟ್ ವೃತ್ತಿಜೀವನ ಮುಗಿದಿದೆ ಎಂಬುದು ನನಗೆ ತಿಳಿದಿದೆ. ಕಳೆದ 2-3 ವರ್ಷಗಳಿಂದ ನಾನು ಟೆಸ್ಟ್ ತಂಡದ ಭಾಗವಾಗಿಲ್ಲ. ಇದಕ್ಕೆ ವಯಸ್ಸು ಕೂಡ ಕಾರಣ ಇರಬಹುದು. ಪ್ರತಿಯೊಬ್ಬ ಕ್ರಿಕೆಟಿಗನ ಜೀವನವೂ ವಿಭಿನ್ನವಾಗಿರುತ್ತದೆ. ಪ್ರಸ್ತುತ ಸನ್ನಿವೇಶದಲ್ಲಿ ಯುವಕರಿಗೆ ಅವಕಾಶ ನೀಡಲಾಗುತ್ತದೆ. ಹೀಗಾಗಿ ನಾನು ಸಹ ರೆಡ್ ಬಾಲ್ ಕ್ರಿಕೆಟ್​ನಿಂದ ದೂರ ಉಳಿದಿದ್ದೇನೆ ಎಂದು ಧವನ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಶಿಖರ್ ಧವನ್, ನನ್ನ ಟೆಸ್ಟ್ ವೃತ್ತಿಜೀವನ ಮುಗಿದಿದೆ ಎಂಬುದು ನನಗೆ ತಿಳಿದಿದೆ. ಕಳೆದ 2-3 ವರ್ಷಗಳಿಂದ ನಾನು ಟೆಸ್ಟ್ ತಂಡದ ಭಾಗವಾಗಿಲ್ಲ. ಇದಕ್ಕೆ ವಯಸ್ಸು ಕೂಡ ಕಾರಣ ಇರಬಹುದು. ಪ್ರತಿಯೊಬ್ಬ ಕ್ರಿಕೆಟಿಗನ ಜೀವನವೂ ವಿಭಿನ್ನವಾಗಿರುತ್ತದೆ. ಪ್ರಸ್ತುತ ಸನ್ನಿವೇಶದಲ್ಲಿ ಯುವಕರಿಗೆ ಅವಕಾಶ ನೀಡಲಾಗುತ್ತದೆ. ಹೀಗಾಗಿ ನಾನು ಸಹ ರೆಡ್ ಬಾಲ್ ಕ್ರಿಕೆಟ್​ನಿಂದ ದೂರ ಉಳಿದಿದ್ದೇನೆ ಎಂದು ಧವನ್ ತಿಳಿಸಿದ್ದಾರೆ.

4 / 7
ನಮಗೆ ತಂಡದಲ್ಲಿ ಅವಕಾಶ ಸಿಗುವುದಿಲ್ಲ ಎಂದು ಗೊತ್ತಾದ ಮೇಲೆ ನಾನು ರಣಜಿ ಟೂರ್ನಿಯನ್ನು ಏಕೆ ಆಡಬೇಕು ಹೇಳಿ. ಅದೇ ಸಮಯದಲ್ಲಿ ವಿಶ್ರಾಂತಿ ಪಡೆಯಬಹುದಲ್ಲವೇ. ಹೀಗಾಗಿ ನಾನು ದೇಶೀಯ ಏಕದಿನ ಮತ್ತು ಟಿ20 ಕ್ರಿಕೆಟ್‌ಗಳನ್ನು ಆಡಿದ್ದೇನೆ ಎಂದು ಧವನ್ ತಿಳಿಸಿದ್ದಾರೆ. ಈ ಮೂಲಕ ರಣಜಿ ಟೂರ್ನಿಯಿಂದ ಹೊರಗುಳಿಯುತ್ತಿರುವುದಕ್ಕೆ ಗಬ್ಬರ್ ಸ್ಪಷ್ಟ ಕಾರಣ ನೀಡಿದ್ದಾರೆ.

ನಮಗೆ ತಂಡದಲ್ಲಿ ಅವಕಾಶ ಸಿಗುವುದಿಲ್ಲ ಎಂದು ಗೊತ್ತಾದ ಮೇಲೆ ನಾನು ರಣಜಿ ಟೂರ್ನಿಯನ್ನು ಏಕೆ ಆಡಬೇಕು ಹೇಳಿ. ಅದೇ ಸಮಯದಲ್ಲಿ ವಿಶ್ರಾಂತಿ ಪಡೆಯಬಹುದಲ್ಲವೇ. ಹೀಗಾಗಿ ನಾನು ದೇಶೀಯ ಏಕದಿನ ಮತ್ತು ಟಿ20 ಕ್ರಿಕೆಟ್‌ಗಳನ್ನು ಆಡಿದ್ದೇನೆ ಎಂದು ಧವನ್ ತಿಳಿಸಿದ್ದಾರೆ. ಈ ಮೂಲಕ ರಣಜಿ ಟೂರ್ನಿಯಿಂದ ಹೊರಗುಳಿಯುತ್ತಿರುವುದಕ್ಕೆ ಗಬ್ಬರ್ ಸ್ಪಷ್ಟ ಕಾರಣ ನೀಡಿದ್ದಾರೆ.

5 / 7
ಟೀಮ್ ಇಂಡಿಯಾ ಪರ 34 ಟೆಸ್ಟ್ ಪಂದ್ಯಗಳನ್ನಾಡಿರುವ ಶಿಖರ್ ಧವನ್ 7 ಶತಕ ಹಾಗೂ 5 ಅರ್ಧಶತಕದೊಂದಿಗೆ 2315 ರನ್​ ಕಲೆಹಾಕಿದ್ದಾರೆ. ಅಂದರೆ ಧವನ್ ಟೆಸ್ಟ್​ ಕ್ರಿಕೆಟ್​ನಲ್ಲಿ 40.61 ಸರಾಸರಿಯಲ್ಲಿ ರನ್​ಗಳಿಸಿದ್ದರು. ಇದು ಪ್ರಸ್ತುತ ತಂಡದಲ್ಲಿರುವ ಕೆಲ ಆಟಗಾರರ ರನ್ ಸರಾಸರಿಗಿಂತ ಹೆಚ್ಚು ಎಂಬುದು ವಿಶೇಷ.

ಟೀಮ್ ಇಂಡಿಯಾ ಪರ 34 ಟೆಸ್ಟ್ ಪಂದ್ಯಗಳನ್ನಾಡಿರುವ ಶಿಖರ್ ಧವನ್ 7 ಶತಕ ಹಾಗೂ 5 ಅರ್ಧಶತಕದೊಂದಿಗೆ 2315 ರನ್​ ಕಲೆಹಾಕಿದ್ದಾರೆ. ಅಂದರೆ ಧವನ್ ಟೆಸ್ಟ್​ ಕ್ರಿಕೆಟ್​ನಲ್ಲಿ 40.61 ಸರಾಸರಿಯಲ್ಲಿ ರನ್​ಗಳಿಸಿದ್ದರು. ಇದು ಪ್ರಸ್ತುತ ತಂಡದಲ್ಲಿರುವ ಕೆಲ ಆಟಗಾರರ ರನ್ ಸರಾಸರಿಗಿಂತ ಹೆಚ್ಚು ಎಂಬುದು ವಿಶೇಷ.

6 / 7
ಇದಾಗ್ಯೂ ಶಿಖರ್ ಧವನ್ ಅವರನ್ನು ಕಳೆದ 5 ವರ್ಷಗಳಿಂದ ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಿಲ್ಲ. ಇದೇ ಕಾರಣದಿಂದಾಗಿ ಇದೀಗ ರಣಜಿ ಟೂರ್ನಿಯಿಂದ ಧವನ್ ಹಿಂದೆ ಸರಿದಿದ್ದಾರೆ. ಅಲ್ಲದೆ ಏಕದಿನ ಹಾಗೂ ಟಿ20 ಕ್ರಿಕೆಟ್​ನತ್ತ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದಾರೆ.

ಇದಾಗ್ಯೂ ಶಿಖರ್ ಧವನ್ ಅವರನ್ನು ಕಳೆದ 5 ವರ್ಷಗಳಿಂದ ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಿಲ್ಲ. ಇದೇ ಕಾರಣದಿಂದಾಗಿ ಇದೀಗ ರಣಜಿ ಟೂರ್ನಿಯಿಂದ ಧವನ್ ಹಿಂದೆ ಸರಿದಿದ್ದಾರೆ. ಅಲ್ಲದೆ ಏಕದಿನ ಹಾಗೂ ಟಿ20 ಕ್ರಿಕೆಟ್​ನತ್ತ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದಾರೆ.

7 / 7
Follow us
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್