Shoaib Akhtar: ಭಗವದ್ಗೀತೆ ಶ್ಲೋಕ ಹಂಚಿಕೊಂಡ ಶೊಯೇಬ್ ಅಖ್ತರ್

Shoaib Akhtar's Record: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗದಲ್ಲಿ ಚೆಂಡೆಸೆದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಶೊಯೇಬ್ ಅಖ್ತರ್ ಹೆಸರಿನಲ್ಲಿದೆ. 2002 ರಲ್ಲಿ ನ್ಯೂಝಿಲೆಂಡ್ ವಿರುದ್ದದ ಪಂದ್ಯದಲ್ಲಿ ಅಖ್ತರ್ ಬರೋಬ್ಬರಿ ಗಂಟೆ 161.3 ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ದಾಖಲೆ ನಿರ್ಮಾಣವಾಗಿ 2 ದಶಕಗಳೇ ಕಳೆದರೂ ಇದನ್ನು ಮೀರುವಂತೆ ಯಾರಿಂದಲೂ ಬೌಲಿಂಗ್ ಮಾಡಲು ಸಾಧ್ಯವಾಗಿಲ್ಲ.

|

Updated on:Jul 01, 2024 | 12:54 PM

ಪಾಕಿಸ್ತಾನ್ ತಂಡದ ಮಾಜಿ ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಸಖತ್ ಸುದ್ದಿಯಾಗಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್. ಈ ಪೋಸ್ಟ್ ಭಗವದ್ಗೀತೆಗೆ ಸಂಬಂಧಿಸಿದ್ದು ಎಂಬುದೇ ಇಲ್ಲಿ ವಿಶೇಷ.

ಪಾಕಿಸ್ತಾನ್ ತಂಡದ ಮಾಜಿ ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಸಖತ್ ಸುದ್ದಿಯಾಗಿದ್ದಾರೆ. ಹೀಗೆ ಸುದ್ದಿಯಾಗಲು ಮುಖ್ಯ ಕಾರಣ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಒಂದು ಪೋಸ್ಟ್. ಈ ಪೋಸ್ಟ್ ಭಗವದ್ಗೀತೆಗೆ ಸಂಬಂಧಿಸಿದ್ದು ಎಂಬುದೇ ಇಲ್ಲಿ ವಿಶೇಷ.

1 / 6
ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೊಯೇಬ್ ಅಖ್ತರ್ ಭಗವದ್ಗೀತೆ ಶ್ಲೋಕವನ್ನು ಹಂಚಿಕೊಂಡಿದ್ದಾರೆ. ಅದು ಕೂಡ ಭಗವಾನ್ ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ. ಅನಿಯಂತ್ರಿತ ಮನಸ್ಸಿಗಿಂತ ದೊಡ್ಡ ಶತ್ರುವಿಲ್ಲ ಎನ್ನುವ ಶ್ಲೋಕದ ವಿಡಿಯೋವನ್ನು ಅಖ್ತರ್ ಶೇರ್ ಮಾಡಿದ್ದು, ಇದೀಗ ಈ ವಿಡಿಯೋ ಭಾರೀ ವೈರಲ್ ಆಗಿದೆ.

ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೊಯೇಬ್ ಅಖ್ತರ್ ಭಗವದ್ಗೀತೆ ಶ್ಲೋಕವನ್ನು ಹಂಚಿಕೊಂಡಿದ್ದಾರೆ. ಅದು ಕೂಡ ಭಗವಾನ್ ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ. ಅನಿಯಂತ್ರಿತ ಮನಸ್ಸಿಗಿಂತ ದೊಡ್ಡ ಶತ್ರುವಿಲ್ಲ ಎನ್ನುವ ಶ್ಲೋಕದ ವಿಡಿಯೋವನ್ನು ಅಖ್ತರ್ ಶೇರ್ ಮಾಡಿದ್ದು, ಇದೀಗ ಈ ವಿಡಿಯೋ ಭಾರೀ ವೈರಲ್ ಆಗಿದೆ.

2 / 6
ಪಾಕಿಸ್ತಾನ್ ಕ್ರಿಕೆಟಿಗನ ಈ ಪೋಸ್ಟ್​ಗೆ ಭಾರತೀಯ ಕ್ರಿಕೆಟ್​ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಅತ್ತ ಪಾಕ್​ನ ಕೆಲವರು ತಗಾದೆ ತೆಗೆದಿದ್ದಾರೆ. ಇದಾಗ್ಯೂ ಶೊಯೇಬ್ ಅಖ್ತರ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಿಂದ ಈ ಪೋಸ್ಟ್ ಅನ್ನು ಅಳಿಸಿ ಹಾಕಿಲ್ಲ ಎಂಬುದು ವಿಶೇಷ.

ಪಾಕಿಸ್ತಾನ್ ಕ್ರಿಕೆಟಿಗನ ಈ ಪೋಸ್ಟ್​ಗೆ ಭಾರತೀಯ ಕ್ರಿಕೆಟ್​ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಅತ್ತ ಪಾಕ್​ನ ಕೆಲವರು ತಗಾದೆ ತೆಗೆದಿದ್ದಾರೆ. ಇದಾಗ್ಯೂ ಶೊಯೇಬ್ ಅಖ್ತರ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಿಂದ ಈ ಪೋಸ್ಟ್ ಅನ್ನು ಅಳಿಸಿ ಹಾಕಿಲ್ಲ ಎಂಬುದು ವಿಶೇಷ.

3 / 6
ಸೋಷಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುವ ಶೊಯೇಬ್ ಅಖ್ತರ್ ಕೆಲ ದಿನಗಳ ಹಿಂದೆ ಮುಕ್ತಾಯಗೊಂಡ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಬೆಂಬಲ ಸೂಚಿಸಿದ್ದರು. ಅಲ್ಲದೆ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲಬೇಕೆಂದು ಹೇಳಿದ್ದರು. ಕಳೆದ ಏಕದಿನ ವಿಶ್ವಕಪ್ ಫೈನಲ್​ನಲ್ಲಿ ಸೋತಿದ್ದ ಭಾರತ ತಂಡವು ಈ ಬಾರಿ ವಿಶ್ವಕಪ್ ಗೆಲ್ಲಬೇಕು, ರೋಹಿತ್ ಶರ್ಮಾ ಅದಕ್ಕೆ ಅರ್ಹರು ಎಂಬ ಹೇಳಿಕೆ ನೀಡಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುವ ಶೊಯೇಬ್ ಅಖ್ತರ್ ಕೆಲ ದಿನಗಳ ಹಿಂದೆ ಮುಕ್ತಾಯಗೊಂಡ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡಕ್ಕೆ ಬೆಂಬಲ ಸೂಚಿಸಿದ್ದರು. ಅಲ್ಲದೆ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲಬೇಕೆಂದು ಹೇಳಿದ್ದರು. ಕಳೆದ ಏಕದಿನ ವಿಶ್ವಕಪ್ ಫೈನಲ್​ನಲ್ಲಿ ಸೋತಿದ್ದ ಭಾರತ ತಂಡವು ಈ ಬಾರಿ ವಿಶ್ವಕಪ್ ಗೆಲ್ಲಬೇಕು, ರೋಹಿತ್ ಶರ್ಮಾ ಅದಕ್ಕೆ ಅರ್ಹರು ಎಂಬ ಹೇಳಿಕೆ ನೀಡಿದ್ದರು.

4 / 6
ಇದೀಗ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ಗೆಲುವಿನ ಬಳಿಕ ಮಾತನಾಡಿದ್ದ ಅಖ್ತರ್, ಅರ್ಹ ತಂಡಕ್ಕೆ ವಿಶ್ವಕಪ್ ಟ್ರೋಫಿ ಸಂದಿದೆ. ರೋಹಿತ್ ಶರ್ಮಾ ಕೊನೆಗೂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಕ್ಕೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದರು. ಇದೀಗ ಅಖ್ತರ್, ಅನಿಯಂತ್ರಿತ ಮನಸ್ಸಿಗಿಂತ ದೊಡ್ಡ ಶತ್ರುವಿಲ್ಲ ಎನ್ನುವ ಶ್ಲೋಕದ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಮತ್ತೆ ಸುದ್ದಿಯಾಗಿರುವುದು ವಿಶೇಷ.

ಇದೀಗ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ಗೆಲುವಿನ ಬಳಿಕ ಮಾತನಾಡಿದ್ದ ಅಖ್ತರ್, ಅರ್ಹ ತಂಡಕ್ಕೆ ವಿಶ್ವಕಪ್ ಟ್ರೋಫಿ ಸಂದಿದೆ. ರೋಹಿತ್ ಶರ್ಮಾ ಕೊನೆಗೂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಕ್ಕೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದರು. ಇದೀಗ ಅಖ್ತರ್, ಅನಿಯಂತ್ರಿತ ಮನಸ್ಸಿಗಿಂತ ದೊಡ್ಡ ಶತ್ರುವಿಲ್ಲ ಎನ್ನುವ ಶ್ಲೋಕದ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಮತ್ತೆ ಸುದ್ದಿಯಾಗಿರುವುದು ವಿಶೇಷ.

5 / 6
ಪಾಕಿಸ್ತಾನ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178	ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ. ಹಾಗೆಯೇ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗದಲ್ಲಿ ಚೆಂಡೆಸೆದ ವಿಶ್ವ ದಾಖಲೆ ಕೂಡ ಅಖ್ತರ್ ಹೆಸರಿನಲ್ಲಿದೆ. 2002 ರಲ್ಲಿ ನ್ಯೂಝಿಲೆಂಡ್ ವಿರುದ್ದ 161.3 kph ವೇಗದಲ್ಲಿ ಚೆಂಡೆಸೆದು ಶೊಯೇಬ್ ಅಖ್ತರ್ ಈ ವಿಶ್ವ ದಾಖಲೆ ಬರೆದಿದ್ದಾರೆ.

ಪಾಕಿಸ್ತಾನ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178 ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ. ಹಾಗೆಯೇ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗದಲ್ಲಿ ಚೆಂಡೆಸೆದ ವಿಶ್ವ ದಾಖಲೆ ಕೂಡ ಅಖ್ತರ್ ಹೆಸರಿನಲ್ಲಿದೆ. 2002 ರಲ್ಲಿ ನ್ಯೂಝಿಲೆಂಡ್ ವಿರುದ್ದ 161.3 kph ವೇಗದಲ್ಲಿ ಚೆಂಡೆಸೆದು ಶೊಯೇಬ್ ಅಖ್ತರ್ ಈ ವಿಶ್ವ ದಾಖಲೆ ಬರೆದಿದ್ದಾರೆ.

6 / 6

Published On - 12:53 pm, Mon, 1 July 24

Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್