AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC ನನ್ನ ಪಾದಗಳನ್ನು ತೊಳೆದು ನೀರು ಕುಡಿಯಬೇಕು: ಶೊಯೆಬ್ ಅಖ್ತರ್ ಅತಿರೇಕ

Shoaib Akhtar: 2003ರ ಏಕದಿನ ವಿಶ್ವಕಪ್​ ಪಂದ್ಯಾವಳಿಯಲ್ಲಿ ಇಂಗ್ಲೆಂಡ್ ವಿರುದ್ಧ ಶೊಯೆಬ್ ಅಖ್ತರ್ ಗಂಟೆಗೆ 161.3 ಕಿಲೋಮೀಟರ್ ವೇಗದಲ್ಲಿ ಚೆಂಡೆಸದಿದ್ದರು. ಇದು ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗಿನ ಅತ್ಯಂತ ವೇಗದ ಎಸೆತವಾಗಿದೆ. ಕಳೆದ 21 ವರ್ಷಗಳಿಂದ ಈ ದಾಖಲೆಯನ್ನು ಮುರಿಯಲು ಯಾವುದೇ ಬೌಲರ್‌ಗೆ ಸಾಧ್ಯವಾಗಿಲ್ಲ. ಇದೀಗ ಈ ದಾಖಲೆಯನ್ನು ಮುರಿಯಬಲ್ಲ ಬೌಲರ್​​ನನ್ನು ನಾನು ಪರಿಚಯಿಸಬಲ್ಲೆ ಎಂದಿದ್ದಾರೆ ಶೊಯೆಬ್ ಅಖ್ತರ್.

ಝಾಹಿರ್ ಯೂಸುಫ್
|

Updated on: Dec 17, 2024 | 10:10 AM

Share
ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್ ಹೆಸರಿನಲ್ಲಿದೆ. 2003 ರ ಏಕದಿನ ವಿಶ್ವಕಪ್​ನಲ್ಲಿ 161.3 ಕಿಲೋಮೀಟರ್ ವೇಗದಲ್ಲಿ ಚೆಂಡೆಸೆಯುವ ಮೂಲಕ ಅಖ್ತರ್ ಈ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆ ನಿರ್ಮಾಣವಾಗಿ 21 ವರ್ಷಗಳ ಕಳೆದರೂ ಯಾರಿಂದಲೂ ಸಹ ರೆಕಾರ್ಡ್ ಬ್ರೇಕ್ ಮಾಡಲು ಸಾಧ್ಯವಾಗಿಲ್ಲ. ಆದರೆ ಈ ದಾಖಲೆಯನ್ನು ಮುರಿಯಲು ಸಾಧ್ಯ ಎಂದಿದ್ದಾರೆ ಶೊಯೆಬ್ ಅಖ್ತರ್.

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಶೊಯೆಬ್ ಅಖ್ತರ್ ಹೆಸರಿನಲ್ಲಿದೆ. 2003 ರ ಏಕದಿನ ವಿಶ್ವಕಪ್​ನಲ್ಲಿ 161.3 ಕಿಲೋಮೀಟರ್ ವೇಗದಲ್ಲಿ ಚೆಂಡೆಸೆಯುವ ಮೂಲಕ ಅಖ್ತರ್ ಈ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆ ನಿರ್ಮಾಣವಾಗಿ 21 ವರ್ಷಗಳ ಕಳೆದರೂ ಯಾರಿಂದಲೂ ಸಹ ರೆಕಾರ್ಡ್ ಬ್ರೇಕ್ ಮಾಡಲು ಸಾಧ್ಯವಾಗಿಲ್ಲ. ಆದರೆ ಈ ದಾಖಲೆಯನ್ನು ಮುರಿಯಲು ಸಾಧ್ಯ ಎಂದಿದ್ದಾರೆ ಶೊಯೆಬ್ ಅಖ್ತರ್.

1 / 6
TNKS ಪಾಡ್‌ಕ್ಯಾಸ್ಟ್‌ನಲ್ಲಿ ಕಾಣಿಸಿಕೊಂಡ ಶೊಯೆಬ್ ಅಖ್ತರ್​ಗೆ ತಮ್ಮ ವಿಶ್ವ ದಾಖಲೆಯನ್ನು ಯಾರಾದರೂ ಮುರಿಯಬಹುದೇ ಎಂದು ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅಖ್ತರ್, ಖಂಡಿತವಾಗಿಯೂ ಸಾಧ್ಯ. ಈ ವಿಷಯದಲ್ಲಿ ಹೊಸ ದಾಖಲೆ ನಿರ್ಮಾಣವಾಗಲಿದೆ ಎಂದು ನಾನು ಈಗಲೂ ಭಾವಿಸುತ್ತೇನೆ ಎಂದಿದ್ದಾರೆ.

TNKS ಪಾಡ್‌ಕ್ಯಾಸ್ಟ್‌ನಲ್ಲಿ ಕಾಣಿಸಿಕೊಂಡ ಶೊಯೆಬ್ ಅಖ್ತರ್​ಗೆ ತಮ್ಮ ವಿಶ್ವ ದಾಖಲೆಯನ್ನು ಯಾರಾದರೂ ಮುರಿಯಬಹುದೇ ಎಂದು ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ಅಖ್ತರ್, ಖಂಡಿತವಾಗಿಯೂ ಸಾಧ್ಯ. ಈ ವಿಷಯದಲ್ಲಿ ಹೊಸ ದಾಖಲೆ ನಿರ್ಮಾಣವಾಗಲಿದೆ ಎಂದು ನಾನು ಈಗಲೂ ಭಾವಿಸುತ್ತೇನೆ ಎಂದಿದ್ದಾರೆ.

2 / 6
ಒಂದು ವೇಳೆ ನಾನು ಪ್ರಪಂಚದಾದ್ಯಂತದ ಯುವ ಪ್ರತಿಭಾ ಬೌಲರ್‌ಗಳನ್ನು ಒಟ್ಟುಗೂಡಿಸಿದರೆ, ಈ ದಾಖಲೆಯನ್ನು ಕೇವಲ 6 ತಿಂಗಳೊಳಗೆ ಮುರಿದು ತೋರಿಸುತ್ತೇನೆ. ಏಕೆಂದರೆ ಯುವ ಬೌಲರ್​​ಗಳಿಂದ 160-170 ವರೆಗೆ ಬೌಲ್ ಮಾಡಲು ಸಾಧ್ಯ ಎಂದು ಶೊಯೆಬ್ ಅಖ್ತರ್ ಹೇಳಿದ್ದಾರೆ.

ಒಂದು ವೇಳೆ ನಾನು ಪ್ರಪಂಚದಾದ್ಯಂತದ ಯುವ ಪ್ರತಿಭಾ ಬೌಲರ್‌ಗಳನ್ನು ಒಟ್ಟುಗೂಡಿಸಿದರೆ, ಈ ದಾಖಲೆಯನ್ನು ಕೇವಲ 6 ತಿಂಗಳೊಳಗೆ ಮುರಿದು ತೋರಿಸುತ್ತೇನೆ. ಏಕೆಂದರೆ ಯುವ ಬೌಲರ್​​ಗಳಿಂದ 160-170 ವರೆಗೆ ಬೌಲ್ ಮಾಡಲು ಸಾಧ್ಯ ಎಂದು ಶೊಯೆಬ್ ಅಖ್ತರ್ ಹೇಳಿದ್ದಾರೆ.

3 / 6
ನಾನು ಪ್ರಪಂಚದಾದ್ಯಂತದ ಎರಡು-ಮೂರು ಸಾವಿರ ಬೌಲರ್​​ಗಳನ್ನು ಒಟ್ಟುಗೂಡಿಸುವಲ್ಲಿ ಯಶಸ್ವಿಯಾದರೆ, ನನ್ನ ದಾಖಲೆಯನ್ನು ನಾನೇ ಮುರಿಯುವಂತಹ ಬೌಲರ್​ನನ್ನು ಪರಿಚಯಿಸುತ್ತೇನೆ. ಏನೂ ಆಗದಿದ್ದರೆ ಗಂಟೆಗೆ 150, 140 ಮತ್ತು 145 ಕಿಲೋಮೀಟರ್ ವೇಗದಲ್ಲಿ ಬೌಲಿಂಗ್ ಮಾಡುವ ಹೆಚ್ಚಿನ ಸಂಖ್ಯೆಯ ವೇಗದ ಬೌಲರ್‌ಗಳನ್ನು ನಾನು ನಿಮಗೆ ನೀಡುತ್ತೇನೆ ಎಂದು ಶೊಯೆಬ್ ಅಖ್ತರ್ ಹೇಳಿದ್ದಾರೆ.

ನಾನು ಪ್ರಪಂಚದಾದ್ಯಂತದ ಎರಡು-ಮೂರು ಸಾವಿರ ಬೌಲರ್​​ಗಳನ್ನು ಒಟ್ಟುಗೂಡಿಸುವಲ್ಲಿ ಯಶಸ್ವಿಯಾದರೆ, ನನ್ನ ದಾಖಲೆಯನ್ನು ನಾನೇ ಮುರಿಯುವಂತಹ ಬೌಲರ್​ನನ್ನು ಪರಿಚಯಿಸುತ್ತೇನೆ. ಏನೂ ಆಗದಿದ್ದರೆ ಗಂಟೆಗೆ 150, 140 ಮತ್ತು 145 ಕಿಲೋಮೀಟರ್ ವೇಗದಲ್ಲಿ ಬೌಲಿಂಗ್ ಮಾಡುವ ಹೆಚ್ಚಿನ ಸಂಖ್ಯೆಯ ವೇಗದ ಬೌಲರ್‌ಗಳನ್ನು ನಾನು ನಿಮಗೆ ನೀಡುತ್ತೇನೆ ಎಂದು ಶೊಯೆಬ್ ಅಖ್ತರ್ ಹೇಳಿದ್ದಾರೆ.

4 / 6
ನಾನು ಕ್ರಿಕೆಟ್ ಜಗತ್ತಿಗೆ ಅತ್ಯುತ್ತಮ ಬೌಲರ್​​ಗಳನ್ನು ನೀಡಬಲ್ಲೆ. ಅವರನ್ನು ನೀವು ಆಡಿಸುತ್ತೀರೋ ಇಲ್ಲವೋ ನಿಮಗೆ ಬಿಟ್ಟದ್ದು, ಆದರೆ ನಾನು ಪರಿಚಯಿಸುವ ಬೌಲರ್​​ಗಳನ್ನು ಆಡಿಸುವಂತೆ ಪೋಲ್ ನಡೆಸುತ್ತೇನೆ. ಈ ಮೂಲಕ ಅತ್ಯುತ್ತಮ ಬೌಲರ್​ನ ಆಡಿಸುವಂತಹ ವ್ಯವಸ್ಥೆ ಸೃಷ್ಟಿಸುತ್ತೇನೆ ಎಂದು ಶೊಯೆಬ್ ಅಖ್ತರ್ ಹೇಳಿದ್ದಾರೆ.

ನಾನು ಕ್ರಿಕೆಟ್ ಜಗತ್ತಿಗೆ ಅತ್ಯುತ್ತಮ ಬೌಲರ್​​ಗಳನ್ನು ನೀಡಬಲ್ಲೆ. ಅವರನ್ನು ನೀವು ಆಡಿಸುತ್ತೀರೋ ಇಲ್ಲವೋ ನಿಮಗೆ ಬಿಟ್ಟದ್ದು, ಆದರೆ ನಾನು ಪರಿಚಯಿಸುವ ಬೌಲರ್​​ಗಳನ್ನು ಆಡಿಸುವಂತೆ ಪೋಲ್ ನಡೆಸುತ್ತೇನೆ. ಈ ಮೂಲಕ ಅತ್ಯುತ್ತಮ ಬೌಲರ್​ನ ಆಡಿಸುವಂತಹ ವ್ಯವಸ್ಥೆ ಸೃಷ್ಟಿಸುತ್ತೇನೆ ಎಂದು ಶೊಯೆಬ್ ಅಖ್ತರ್ ಹೇಳಿದ್ದಾರೆ.

5 / 6
ಒಂದು ವೇಳೆ ನನ್ನ ಗರಡಿಯಲ್ಲಿ 150 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಬೌಲರ್​ಗಳು ದೊಡ್ಡ ಸಂಖ್ಯೆಯಲ್ಲಿ ಬಂದರೆ, ಐಸಿಸಿ ನನ್ನ ಪಾದಗಳನ್ನು ತೊಳೆದು ನೀರು ಕುಡಿಯಬೇಕು ಎಂದು ಇದೇ ವೇಳೆ ಶೊಯೆಬ್ ಅಖ್ತರ್ ಅತಿರೇಕದ ಮಾತುಗಳನ್ನಾಡಿದ್ದಾರೆ. ಇದೀಗ ಅಖ್ತರ್ ಅವರ ಹೇಳಿಕೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಏಕೆಂದರೆ ಇನ್ನೂ ಸಹ ಬೌಲಿಂಗ್ ಅಕಾಡೆಮಿ ಅಥವಾ ಯುವ ಪ್ರತಿಭಾ ಬೌಲರ್​​ಗಳಿಗಾಗಿ ವ್ಯವಸ್ಥೆ ಸೃಷ್ಟಿಸದೇ ಶೊಯೆಬ್ ಅಖ್ತರ್ ಅತಿರೇಕದ ಮಾತುಗಳನ್ನಾಡುತ್ತಿದ್ದಾರೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ಒಂದು ವೇಳೆ ನನ್ನ ಗರಡಿಯಲ್ಲಿ 150 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಬೌಲರ್​ಗಳು ದೊಡ್ಡ ಸಂಖ್ಯೆಯಲ್ಲಿ ಬಂದರೆ, ಐಸಿಸಿ ನನ್ನ ಪಾದಗಳನ್ನು ತೊಳೆದು ನೀರು ಕುಡಿಯಬೇಕು ಎಂದು ಇದೇ ವೇಳೆ ಶೊಯೆಬ್ ಅಖ್ತರ್ ಅತಿರೇಕದ ಮಾತುಗಳನ್ನಾಡಿದ್ದಾರೆ. ಇದೀಗ ಅಖ್ತರ್ ಅವರ ಹೇಳಿಕೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಏಕೆಂದರೆ ಇನ್ನೂ ಸಹ ಬೌಲಿಂಗ್ ಅಕಾಡೆಮಿ ಅಥವಾ ಯುವ ಪ್ರತಿಭಾ ಬೌಲರ್​​ಗಳಿಗಾಗಿ ವ್ಯವಸ್ಥೆ ಸೃಷ್ಟಿಸದೇ ಶೊಯೆಬ್ ಅಖ್ತರ್ ಅತಿರೇಕದ ಮಾತುಗಳನ್ನಾಡುತ್ತಿದ್ದಾರೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

6 / 6
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ