Shreyanka Patil: WPL ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಶ್ರೇಯಾಂಕಾ ಪಾಟೀಲ್

Shreyanka Patil: ವುಮೆನ್ಸ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡುವ ಮೂಲಕ ಆರ್​ಸಿಬಿ ತಂಡದ ಯುವ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಇದುವರೆಗೆ ಯಾರೂ ಮಾಡದ ದಾಖಲೆ ಬರೆಯುವ ಮೂಲಕ ಎಂಬುದು ವಿಶೇಷ.

| Updated By: ಝಾಹಿರ್ ಯೂಸುಫ್

Updated on: Mar 18, 2024 | 11:03 AM

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿಗಳಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೂಡ ಒಬ್ಬರು.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ (WPL 2024) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿಗಳಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೂಡ ಒಬ್ಬರು.

1 / 5
ಏಕೆಂದರೆ ಈ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 12 ರನ್​ಗಳನ್ನು ಮಾತ್ರ ನೀಡಿದ್ದರು. ಇದೇ ವೇಳೆ 4 ವಿಕೆಟ್​ಗಳನ್ನು ಕಬಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 113 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಏಕೆಂದರೆ ಈ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 12 ರನ್​ಗಳನ್ನು ಮಾತ್ರ ನೀಡಿದ್ದರು. ಇದೇ ವೇಳೆ 4 ವಿಕೆಟ್​ಗಳನ್ನು ಕಬಳಿಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 113 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2 / 5
ವಿಶೇಷ ಎಂದರೆ ಈ 4 ವಿಕೆಟ್​ಗಳೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಎರಡು ಬಾರಿ ನಾಲ್ಕು ವಿಕೆಟ್ ಪಡೆದ ದಾಖಲೆಯೊಂದು ಶ್ರೇಯಾಂಕಾ ಹೆಸರಿಗೆ ಸೇರ್ಪಡೆಯಾಯಿತು. ಅಂದರೆ ಶ್ರೇಯಾಂಕಾ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಆಟಗಾರ್ತಿ WPL ನಲ್ಲಿ 2 ಬಾರಿ 4 ವಿಕೆಟ್ ಕಬಳಿಸಿಲ್ಲ.

ವಿಶೇಷ ಎಂದರೆ ಈ 4 ವಿಕೆಟ್​ಗಳೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಎರಡು ಬಾರಿ ನಾಲ್ಕು ವಿಕೆಟ್ ಪಡೆದ ದಾಖಲೆಯೊಂದು ಶ್ರೇಯಾಂಕಾ ಹೆಸರಿಗೆ ಸೇರ್ಪಡೆಯಾಯಿತು. ಅಂದರೆ ಶ್ರೇಯಾಂಕಾ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಆಟಗಾರ್ತಿ WPL ನಲ್ಲಿ 2 ಬಾರಿ 4 ವಿಕೆಟ್ ಕಬಳಿಸಿಲ್ಲ.

3 / 5
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿ ಮಿಂಚಿದ್ದ ಶ್ರೇಯಾಂಕ ಪಾಟೀಲ್ ಇದೀಗ ಫೈನಲ್ ಪಂದ್ಯದಲ್ಲೂ 4 ವಿಕೆಟ್​ಗಳನ್ನು ಉರುಳಿಸಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಯಾರೂ ಮಾಡದ ಸಾಧನೆ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಲೀಗ್ ಹಂತದ ಪಂದ್ಯದಲ್ಲಿ 4 ವಿಕೆಟ್ ಕಬಳಿಸಿ ಮಿಂಚಿದ್ದ ಶ್ರೇಯಾಂಕ ಪಾಟೀಲ್ ಇದೀಗ ಫೈನಲ್ ಪಂದ್ಯದಲ್ಲೂ 4 ವಿಕೆಟ್​ಗಳನ್ನು ಉರುಳಿಸಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಯಾರೂ ಮಾಡದ ಸಾಧನೆ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ಇನ್ನು ಈ ಬಾರಿಯ ಟೂರ್ನಿಯಲ್ಲಿ ಒಟ್ಟು 12 ವಿಕೆಟ್ ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಆರ್​ಸಿಬಿ ಮಹಿಳಾ ತಂಡದ ಪರ ಪರ್ಪಲ್ ಕ್ಯಾಪ್ ಗೆದ್ದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಶ್ರೇಯಾಂಕಾ ಪಾಟೀಲ್ ಪಾತ್ರರಾಗಿದ್ದಾರೆ.

ಇನ್ನು ಈ ಬಾರಿಯ ಟೂರ್ನಿಯಲ್ಲಿ ಒಟ್ಟು 12 ವಿಕೆಟ್ ಕಬಳಿಸುವ ಮೂಲಕ ಪರ್ಪಲ್ ಕ್ಯಾಪ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಆರ್​ಸಿಬಿ ಮಹಿಳಾ ತಂಡದ ಪರ ಪರ್ಪಲ್ ಕ್ಯಾಪ್ ಗೆದ್ದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಶ್ರೇಯಾಂಕಾ ಪಾಟೀಲ್ ಪಾತ್ರರಾಗಿದ್ದಾರೆ.

5 / 5
Follow us
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?