AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್

Shreyanka Patil Records: ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಶ್ರೇಯಾಂಕಾ ಪಾಟೀಲ್ ಈವರೆಗೆ 18 ಪಂದ್ಯಗಳನ್ನಾಡಿದ್ದಾರೆ. ಈ ಹದಿನೆಂಟು ಪಂದ್ಯಗಳಲ್ಲಿ 317 ಎಸೆತಗಳನ್ನು ಎಸೆದಿರುವ ಶ್ರೇಯಾಂಕಾ ಒಟ್ಟು 27 ವಿಕೆಟ್ ಕಬಳಿಸಿದ್ದಾರೆ. ಅದರಲ್ಲೂ ಮೂರು ಬಾರಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 17, 2026 | 12:03 PM

Share
WPL 2026: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

WPL 2026: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ನವಿ ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್​ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ WPL ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ 23 ವರ್ಷದ ಶ್ರೇಯಾಂಕಾ ಪಾಲಾಯಿತು.

ನವಿ ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 3.5 ಓವರ್​ ಎಸೆದ ಶ್ರೇಯಾಂಕಾ ಪಾಟೀಲ್ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ WPL ನಲ್ಲಿ 5 ವಿಕೆಟ್ ಕಬಳಿಸಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆ 23 ವರ್ಷದ ಶ್ರೇಯಾಂಕಾ ಪಾಲಾಯಿತು.

2 / 5
ಅಷ್ಟೇ ಅಲ್ಲದೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ವಿಕೆಟ್ ಕಬಳಿಸಿದ ಬೌಲರ್ ಎಂಬ ಹಿರಿಮೆಗೂ ಪಾತ್ರರಾದರು. ಅಂದರೆ ಶ್ರೇಯಾಂಕಾ ಪಾಟೀಲ್ WPL ನಲ್ಲಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿರುವುದು ಇದು ಮೂರನೇ ಬಾರಿ.

ಅಷ್ಟೇ ಅಲ್ಲದೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ವಿಕೆಟ್ ಕಬಳಿಸಿದ ಬೌಲರ್ ಎಂಬ ಹಿರಿಮೆಗೂ ಪಾತ್ರರಾದರು. ಅಂದರೆ ಶ್ರೇಯಾಂಕಾ ಪಾಟೀಲ್ WPL ನಲ್ಲಿ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿರುವುದು ಇದು ಮೂರನೇ ಬಾರಿ.

3 / 5
2024ರ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಶ್ರೇಯಾಂಕಾ ಪಾಟೀಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್​ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 2024ರ WPL ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದವೇ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು.

2024ರ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಶ್ರೇಯಾಂಕಾ ಪಾಟೀಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್​ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಇದಾದ ಬಳಿಕ 2024ರ WPL ಫೈನಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದವೇ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದಿದ್ದರು.

4 / 5
ಇದೀಗ ಗುಜರಾತ್ ಜೈಂಟ್ಸ್ ವಿರುದ್ಧ 5 ವಿಕೆಟ್ ಉರುಳಿಸುವ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಮೂರು ಬಾರಿ 4 ಅಥವಾ 4+ ವಿಕೆಟ್ ಪಡೆದ ಏಕೈಕ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ WPL ನಲ್ಲಿ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಭರ್ಜರಿ ದಾಖಲೆಯೊಂದನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೀಗ ಗುಜರಾತ್ ಜೈಂಟ್ಸ್ ವಿರುದ್ಧ 5 ವಿಕೆಟ್ ಉರುಳಿಸುವ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಮೂರು ಬಾರಿ 4 ಅಥವಾ 4+ ವಿಕೆಟ್ ಪಡೆದ ಏಕೈಕ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ WPL ನಲ್ಲಿ ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್ ಭರ್ಜರಿ ದಾಖಲೆಯೊಂದನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

5 / 5
Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್