AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

58 ರಲ್ಲಿ 24: ಸಾಟಿಯಿಲ್ಲದ ಶ್ರೇಯಸ್: ಕೊಹ್ಲಿ, ರಾಹುಲ್​ರನ್ನು ಹಿಂದಿಕ್ಕಿದ ಅಯ್ಯರ್

Shreyas Iyer: ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾ ಪರ 63 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು 58 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ಇನಿಂಗ್ಸ್​ಗಳಲ್ಲಿ 5 ಶತಕ ಹಾಗೂ 19 ಅರ್ಧಶತಕಗಳು ಮೂಡಿಬಂದಿವೆ. ಈ ಭರ್ಜರಿ ಬ್ಯಾಟಿಂಗ್​​ನೊಂದಿಗೆ ಅಯ್ಯರ್ ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 08, 2025 | 10:23 AM

Share
ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ 58 ಏಕದಿನ ಪಂದ್ಯಗಳ ಮೂಲಕ. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 59 ರನ್ ಬಾರಿಸಿದ್ದರು.

ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ 58 ಏಕದಿನ ಪಂದ್ಯಗಳ ಮೂಲಕ. ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 59 ರನ್ ಬಾರಿಸಿದ್ದರು.

1 / 5
ಇದು ಏಕದಿನ ಕ್ರಿಕೆಟ್​ನಲ್ಲಿ ಶ್ರೇಯಸ್ ಅಯ್ಯರ್ ಅವರ 19ನೇ ಅರ್ಧಶತಕ. ಈವರೆಗೆ 58 ಏಕದಿನ ಇನಿಂಗ್ಸ್ ಆಡಿರುವ ಅಯ್ಯರ್ 5 ಭರ್ಜರಿ ಶತಕ ಹಾಗೂ 19 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಮೊದಲ 58 ಪಂದ್ಯಗಳಲ್ಲಿ ಭಾರತದ ಪರ ಅತೀ ಹೆಚ್ಚು 50+ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದು ಏಕದಿನ ಕ್ರಿಕೆಟ್​ನಲ್ಲಿ ಶ್ರೇಯಸ್ ಅಯ್ಯರ್ ಅವರ 19ನೇ ಅರ್ಧಶತಕ. ಈವರೆಗೆ 58 ಏಕದಿನ ಇನಿಂಗ್ಸ್ ಆಡಿರುವ ಅಯ್ಯರ್ 5 ಭರ್ಜರಿ ಶತಕ ಹಾಗೂ 19 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಮೊದಲ 58 ಪಂದ್ಯಗಳಲ್ಲಿ ಭಾರತದ ಪರ ಅತೀ ಹೆಚ್ಚು 50+ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಭಾರತದ ಪರ ಏಕದಿನ ಕ್ರಿಕೆಟ್​ನಲ್ಲಿ ಮೊದಲ 58 ಇನಿಂಗ್ಸ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟರ್​ಗಳಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ನವಜೋತ್ ಸಿಂಗ್ ಸಿಧು ಮೊದಲ ಸ್ಥಾನದಲ್ಲಿದ್ದರು. ಈ ಮೂವರು ಮೊದಲ 58 ಇನಿಂಗ್ಸ್​ಗಳಲ್ಲಿ 21 ಬಾರಿ 50+ ಸ್ಕೋರ್​ಗಳಿಸಿದ್ದರು.

ಭಾರತದ ಪರ ಏಕದಿನ ಕ್ರಿಕೆಟ್​ನಲ್ಲಿ ಮೊದಲ 58 ಇನಿಂಗ್ಸ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟರ್​ಗಳಲ್ಲಿ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ನವಜೋತ್ ಸಿಂಗ್ ಸಿಧು ಮೊದಲ ಸ್ಥಾನದಲ್ಲಿದ್ದರು. ಈ ಮೂವರು ಮೊದಲ 58 ಇನಿಂಗ್ಸ್​ಗಳಲ್ಲಿ 21 ಬಾರಿ 50+ ಸ್ಕೋರ್​ಗಳಿಸಿದ್ದರು.

3 / 5
ಆದರೀಗ ಇವರೆಲ್ಲರನ್ನೂ ಹಿಂದಿಕ್ಕಿ ಶ್ರೇಯಸ್ ಅಯ್ಯರ್ ಒನ್​ಡೇ ಕ್ರಿಕೆಟ್​ನಲ್ಲಿ ತಮ್ಮ ನಾಗಾಲೋಟ ಮುಂದುವರೆಸಿದ್ದಾರೆ. ಈವರೆಗೆ ಆಡಿದ 58 ಇನಿಂಗ್ಸ್​ಗಳಲ್ಲಿ ಅಯ್ಯರ್ ಒಟ್ಟು 24 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್​ನಲ್ಲಿ ಮೊದಲ 58 ಇನಿಂಗ್ಸ್​ಗಳಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಆದರೀಗ ಇವರೆಲ್ಲರನ್ನೂ ಹಿಂದಿಕ್ಕಿ ಶ್ರೇಯಸ್ ಅಯ್ಯರ್ ಒನ್​ಡೇ ಕ್ರಿಕೆಟ್​ನಲ್ಲಿ ತಮ್ಮ ನಾಗಾಲೋಟ ಮುಂದುವರೆಸಿದ್ದಾರೆ. ಈವರೆಗೆ ಆಡಿದ 58 ಇನಿಂಗ್ಸ್​ಗಳಲ್ಲಿ ಅಯ್ಯರ್ ಒಟ್ಟು 24 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್​ನಲ್ಲಿ ಮೊದಲ 58 ಇನಿಂಗ್ಸ್​ಗಳಲ್ಲಿ ಅತ್ಯಧಿಕ 50+ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಸದ್ಯ 58 ಏಕದಿನ ಇನಿಂಗ್ಸ್ ಆಡಿರುವ ಶ್ರೇಯಸ್ ಅಯ್ಯರ್ 2428 ಎಸೆತಗಳನ್ನು ಎದುರಿಸಿ 2480 ರನ್ ಕಲೆಹಾಕಿದ್ದಾರೆ. ಈ ಮೂಲಕ ಭಾರತ ತಂಡದ ಮಧ್ಯಮ ಕ್ರಮಾಂಕದ ಬೆನ್ನೆಲುಬಾಗಿ ನಿಂತಿದ್ದಾರೆ. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ಅಯ್ಯರ್ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 3 ಸಾವಿರ ರನ್​​ಗಳ ಗಡಿದಾಟುವ ವಿಶ್ವಾಸದಲ್ಲಿದ್ದಾರೆ.

ಸದ್ಯ 58 ಏಕದಿನ ಇನಿಂಗ್ಸ್ ಆಡಿರುವ ಶ್ರೇಯಸ್ ಅಯ್ಯರ್ 2428 ಎಸೆತಗಳನ್ನು ಎದುರಿಸಿ 2480 ರನ್ ಕಲೆಹಾಕಿದ್ದಾರೆ. ಈ ಮೂಲಕ ಭಾರತ ತಂಡದ ಮಧ್ಯಮ ಕ್ರಮಾಂಕದ ಬೆನ್ನೆಲುಬಾಗಿ ನಿಂತಿದ್ದಾರೆ. ಇದೀಗ ಭರ್ಜರಿ ಫಾರ್ಮ್​ನಲ್ಲಿರುವ ಅಯ್ಯರ್ ಮುಂಬರುವ ಚಾಂಪಿಯನ್ಸ್ ಟ್ರೋಫಿ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 3 ಸಾವಿರ ರನ್​​ಗಳ ಗಡಿದಾಟುವ ವಿಶ್ವಾಸದಲ್ಲಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ