AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕನಾಗಿ ಮೊದಲ ಗೆಲುವ ಹುಡುಕಾಟದಲ್ಲಿ ಶ್ರೇಯಸ್ ಅಯ್ಯರ್

ಭಾರತ-ಅಫ್ಘಾನಿಸ್ತಾನ ಟಿ20 ಸರಣಿ ಭಾನುವಾರದಿಂದ ಆರಂಭವಾಗಲಿದ್ದು, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ನಾಯಕತ್ವ ವಹಿಸಲಿದ್ದಾರೆ. ತಾಯ್ನಾಡಿನಲ್ಲಿ ಇದು ಅವರ ಮೊದಲ ನಾಯಕತ್ವದ ಟಿ20 ಪಂದ್ಯವಾಗಿದ್ದು, ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಅಯ್ಯರ್ ತಮ್ಮ ನಾಯಕತ್ವದ ಪ್ರಯಾಣದಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿದ್ದಾರೆ.

ಪೃಥ್ವಿಶಂಕರ
|

Updated on: Sep 12, 2026 | 4:45 PM

Share
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ ಆರಂಭವಾಗಲಿದೆ. ಈ ಸರಣಿಗಾಗಿ ಶ್ರೇಯಸ್ ಅಯ್ಯರ್ ನಾಯಕತ್ವದ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸುತ್ತಿದೆ. ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಬೇಕೆಂದಿರುವ ಶ್ರೇಯಸ್ ಅಯ್ಯರ್​ಗೆ ಈ ಪಂದ್ಯ ಮತ್ತಷ್ಟು ವಿಶೇಷವೂ ಆಗಿದೆ(PC-BCCI).

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ ಆರಂಭವಾಗಲಿದೆ. ಈ ಸರಣಿಗಾಗಿ ಶ್ರೇಯಸ್ ಅಯ್ಯರ್ ನಾಯಕತ್ವದ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸುತ್ತಿದೆ. ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಬೇಕೆಂದಿರುವ ಶ್ರೇಯಸ್ ಅಯ್ಯರ್​ಗೆ ಈ ಪಂದ್ಯ ಮತ್ತಷ್ಟು ವಿಶೇಷವೂ ಆಗಿದೆ(PC-BCCI).

1 / 5
ವಾಸ್ತವವಾಗಿ 2026ರ ಟಿ20 ವಿಶ್ವಕಪ್ ನಂತರ ಶ್ರೇಯಸ್ ಅಯ್ಯರ್ ಟಿ20 ತಂಡಕ್ಕೆ ಆಯ್ಕೆಯಾಗಿದ್ದಲ್ಲದೆ ನಾಯಕತ್ವದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಆದಾಗ್ಯೂ ಅಯ್ಯರ್​ಗೆ ನಾಯಕನಾಗಿ ಉತ್ತಮ ಆರಂಭ ಸಿಗಲಿಲ್ಲ. ಅಯ್ಯರ್ ನಾಯಕತ್ವದ ಮೊದಲ ಸರಣಿಯಲ್ಲಿ ಭಾರತವು ಐರ್ಲೆಂಡ್ ವಿರುದ್ಧ ಸೋತಿತ್ತು. ನಂತರ ಇಂಗ್ಲೆಂಡ್ ವಿರುದ್ಧವೂ ಸೋತಿತ್ತು(PC-BCCI).

ವಾಸ್ತವವಾಗಿ 2026ರ ಟಿ20 ವಿಶ್ವಕಪ್ ನಂತರ ಶ್ರೇಯಸ್ ಅಯ್ಯರ್ ಟಿ20 ತಂಡಕ್ಕೆ ಆಯ್ಕೆಯಾಗಿದ್ದಲ್ಲದೆ ನಾಯಕತ್ವದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಆದಾಗ್ಯೂ ಅಯ್ಯರ್​ಗೆ ನಾಯಕನಾಗಿ ಉತ್ತಮ ಆರಂಭ ಸಿಗಲಿಲ್ಲ. ಅಯ್ಯರ್ ನಾಯಕತ್ವದ ಮೊದಲ ಸರಣಿಯಲ್ಲಿ ಭಾರತವು ಐರ್ಲೆಂಡ್ ವಿರುದ್ಧ ಸೋತಿತ್ತು. ನಂತರ ಇಂಗ್ಲೆಂಡ್ ವಿರುದ್ಧವೂ ಸೋತಿತ್ತು(PC-BCCI).

2 / 5
ಆದರೆ ಜಿಂಬಾಬ್ವೆ ಪ್ರವಾಸದಲ್ಲಿ ಟಿ20 ಸರಣಿ  ಗೆಲ್ಲುವಲ್ಲಿ ಶ್ರೇಯಸ್ ಅಯ್ಯರ್ ಯಶಸ್ವಿಯಾಗಿದ್ದರು. ಇದೀಗ ಭಾರತದಲ್ಲಿ ಅಫ್ಘಾನಿಸ್ತಾನದ ವಿರುದ್ಧ ತಂಡವನ್ನು ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್ ತನ್ನ ಮೊದಲ ಗೆಲುವಿನ ನಿರೀಕ್ಷೆಯಲಿದ್ದಾರೆ. ವಾಸ್ತವವಾಗಿ ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ ಭಾರತದಲ್ಲಿ ಇದು ಮೊದಲ ಟಿ20 ಪಂದ್ಯವಾಗಿದೆ(PC-BCCI).

ಆದರೆ ಜಿಂಬಾಬ್ವೆ ಪ್ರವಾಸದಲ್ಲಿ ಟಿ20 ಸರಣಿ ಗೆಲ್ಲುವಲ್ಲಿ ಶ್ರೇಯಸ್ ಅಯ್ಯರ್ ಯಶಸ್ವಿಯಾಗಿದ್ದರು. ಇದೀಗ ಭಾರತದಲ್ಲಿ ಅಫ್ಘಾನಿಸ್ತಾನದ ವಿರುದ್ಧ ತಂಡವನ್ನು ಮುನ್ನಡೆಸುತ್ತಿರುವ ಶ್ರೇಯಸ್ ಅಯ್ಯರ್ ತನ್ನ ಮೊದಲ ಗೆಲುವಿನ ನಿರೀಕ್ಷೆಯಲಿದ್ದಾರೆ. ವಾಸ್ತವವಾಗಿ ನಾಯಕನಾಗಿ ಶ್ರೇಯಸ್ ಅಯ್ಯರ್​ಗೆ ಭಾರತದಲ್ಲಿ ಇದು ಮೊದಲ ಟಿ20 ಪಂದ್ಯವಾಗಿದೆ(PC-BCCI).

3 / 5
ಈ ಮೊದಲು ನಾಯಕನಾಗಿ ಮೂರು ಸರಣಿಗಳಲ್ಲಿ ಅಯ್ಯರ್ ತಂಡವನ್ನು ಮುನ್ನಡೆಸಿದ್ದಾರೆ. ಆದರೆ ಆ ಮೂರು ಸರಣಿಗಳು ವಿದೇಶದಲ್ಲಿ ನಡೆದಿವೆ. ಇದೀಗ ಅಯ್ಯರ್ ತಾಯ್ನಾಡಿನಲ್ಲಿ ನಾಯಕನಾಗಿ ತಂಡವನ್ನು ಮೊದಲ ಬಾರಿಗೆ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಮೊದಲ ಪಂದ್ಯವನ್ನು ಗೆದ್ದು ಭಾರತದಲ್ಲಿ ಉತ್ತಮ ಆರಂಭ ಪಡೆಯುವ ಇರಾದೆಯಲ್ಲಿ ಶ್ರೇಯಸ್ ಅಯ್ಯರ್ ಇದ್ದಾರೆ(PC-BCCI).

ಈ ಮೊದಲು ನಾಯಕನಾಗಿ ಮೂರು ಸರಣಿಗಳಲ್ಲಿ ಅಯ್ಯರ್ ತಂಡವನ್ನು ಮುನ್ನಡೆಸಿದ್ದಾರೆ. ಆದರೆ ಆ ಮೂರು ಸರಣಿಗಳು ವಿದೇಶದಲ್ಲಿ ನಡೆದಿವೆ. ಇದೀಗ ಅಯ್ಯರ್ ತಾಯ್ನಾಡಿನಲ್ಲಿ ನಾಯಕನಾಗಿ ತಂಡವನ್ನು ಮೊದಲ ಬಾರಿಗೆ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಮೊದಲ ಪಂದ್ಯವನ್ನು ಗೆದ್ದು ಭಾರತದಲ್ಲಿ ಉತ್ತಮ ಆರಂಭ ಪಡೆಯುವ ಇರಾದೆಯಲ್ಲಿ ಶ್ರೇಯಸ್ ಅಯ್ಯರ್ ಇದ್ದಾರೆ(PC-BCCI).

4 / 5
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ನಡೆಯಲಿದೆ. ಆದರೆ ಈ ಟಿ20 ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಪಂದ್ಯದ ದಿನದಂದು ದೆಹಲಿಯ ಹವಾಮಾನ ವರದಿ. ಅಕ್ಯೂವೆದರ್ ಪ್ರಕಾರ, ಪಂದ್ಯದ ದಿನವಾದ ಸೆಪ್ಟೆಂಬರ್ 13 ರಂದು ಮಳೆಯಾಗುವ ಸಾಧ್ಯತೆ ಶೇ. 55 ರಷ್ಟು ಇದ್ದು, ರಾತ್ರಿ ವೇಳೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಪಂದ್ಯ ರದ್ದಾಗುವ ಸಾಧ್ಯತೆಗಳಿವೆ(PC-BCCI).

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ನಡೆಯಲಿದೆ. ಆದರೆ ಈ ಟಿ20 ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಪಂದ್ಯದ ದಿನದಂದು ದೆಹಲಿಯ ಹವಾಮಾನ ವರದಿ. ಅಕ್ಯೂವೆದರ್ ಪ್ರಕಾರ, ಪಂದ್ಯದ ದಿನವಾದ ಸೆಪ್ಟೆಂಬರ್ 13 ರಂದು ಮಳೆಯಾಗುವ ಸಾಧ್ಯತೆ ಶೇ. 55 ರಷ್ಟು ಇದ್ದು, ರಾತ್ರಿ ವೇಳೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಪಂದ್ಯ ರದ್ದಾಗುವ ಸಾಧ್ಯತೆಗಳಿವೆ(PC-BCCI).

5 / 5
Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ