AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Iyer IPL Auction 2025: ಊಹೆಗೂ ಮೀರಿದ ಮೊತ್ತಕ್ಕೆ ಪಂಜಾಬ್ ಸೇರಿಕೊಂಡ ಶ್ರೇಯಸ್ ಅಯ್ಯರ್

Shreyas Iyer Auction Price: ಕಳೆದ ಸೀಸನ್​ನ ಐಪಿಎಲ್ ಚಾಂಪಿಯನ್ ನಾಯಕ ಶ್ರೇಯಸ್ ಅಯ್ಯರ್ ಇದೀಗ ಹೊಸ ತಂಡವನ್ನು ಸೇರಿಕೊಂಡಿದ್ದಾರೆ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಶ್ರೇಯಸ್ ಅಯ್ಯರ್, ಇದೀಗ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Nov 24, 2024 | 4:28 PM

Share
ತನ್ನ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು ಚಾಂಪಿಯನ್ ಮಾಡಿದ್ದ ಶ್ರೇಯಸ್ ಅಯ್ಯರ್, ಈ ಬಾರಿ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತವಾಗಿದೆ. ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟದಲ್ಲಿ ಅಂತಿಮವಾಗಿ ಶ್ರೇಯಸ್ ಪಂಜಾಬ್ ತಂಡವನ್ನು ಸೇರಿಕೊಂಡಿದ್ದಾರೆ.

ತನ್ನ ನಾಯಕತ್ವದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡವನ್ನು ಚಾಂಪಿಯನ್ ಮಾಡಿದ್ದ ಶ್ರೇಯಸ್ ಅಯ್ಯರ್, ಈ ಬಾರಿ ಹೊಸ ತಂಡದ ಪರ ಕಣಕ್ಕಿಳಿಯುವುದು ಖಚಿತವಾಗಿದೆ. ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಜಿದ್ದಾಜಿದ್ದಿನ ಹೋರಾಟದಲ್ಲಿ ಅಂತಿಮವಾಗಿ ಶ್ರೇಯಸ್ ಪಂಜಾಬ್ ತಂಡವನ್ನು ಸೇರಿಕೊಂಡಿದ್ದಾರೆ.

1 / 5
2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ಅಯ್ಯರ್​ ಅವರನ್ನು ಖರೀದಿಸಲು ಆರಂಭದಿಂದಲೂ  ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ನಡೆಯಿತು. ಈ ಎರಡು ಫ್ರಾಂಚೈಸಿಗಳನ್ನು ಬಿಟ್ಟು ಬೇರೆ ಫ್ರಾಂಚೈಸಿಗಳಿಗೆ ಅವಕಾಶವೆ ಸಿಗಲಿಲ್ಲ. ಅಂತಿಮವಾಗಿ ಶ್ರೇಯಸ್, ಬರೋಬ್ಬರಿ 26.75 ಕೋಟಿ ರೂ.ಗೆ ಪಂಜಾಬ್ ಪಾಲಾದರು.

2 ಕೋಟಿ ಮೂಲ ಬೆಲೆಯೊಂದಿಗೆ ಹರಾಜಿಗೆ ಬಂದಿದ್ದ ಅಯ್ಯರ್​ ಅವರನ್ನು ಖರೀದಿಸಲು ಆರಂಭದಿಂದಲೂ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ನಡೆಯಿತು. ಈ ಎರಡು ಫ್ರಾಂಚೈಸಿಗಳನ್ನು ಬಿಟ್ಟು ಬೇರೆ ಫ್ರಾಂಚೈಸಿಗಳಿಗೆ ಅವಕಾಶವೆ ಸಿಗಲಿಲ್ಲ. ಅಂತಿಮವಾಗಿ ಶ್ರೇಯಸ್, ಬರೋಬ್ಬರಿ 26.75 ಕೋಟಿ ರೂ.ಗೆ ಪಂಜಾಬ್ ಪಾಲಾದರು.

2 / 5
ವಾಸ್ತವವಾಗಿ ಹರಾಜಿಗೂ ಮೊದಲು ಶ್ರೇಯಸ್ ಅಯ್ಯರ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಮಾತಿತ್ತು. ಅದರಂತೆ ಡೆಲ್ಲಿ ಕೂಡ ಅಯ್ಯರ್​ಗಾಗಿ ಪ್ರಯತ್ನ ಮಾಡಿತು. ಆದರೆ ಸಫಲವಾಗಲಿಲ್ಲ. ಶ್ರೇಯಸ್ ಪಂಜಾಬ್ ಸೇರಲು ಕಾರಣವೂ ಇದ್ದು, ಈ ಹಿಂದೆ ಡೆಲ್ಲಿ ತಂಡದ ಕೋಚ್ ಆಗಿದ್ದ ರಿಕಿ ಪಾಂಟಿಂಗ್, ಈ ಬಾರಿ ಪಂಜಾಬ್ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಈ ಮೊದಲು ಶ್ರೇಯಸ್ ಜೊತೆ ಕೆಲಸ ಮಾಡಿದ್ದ ಪಾಂಟಿಂಗ್, ಪಂಜಾಬ್​ನಲ್ಲೂ ಅದೇ ಕೆಲಸವನ್ನು ಮುಂದುವರೆಸಲಿದ್ದಾರೆ.

ವಾಸ್ತವವಾಗಿ ಹರಾಜಿಗೂ ಮೊದಲು ಶ್ರೇಯಸ್ ಅಯ್ಯರ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಮಾತಿತ್ತು. ಅದರಂತೆ ಡೆಲ್ಲಿ ಕೂಡ ಅಯ್ಯರ್​ಗಾಗಿ ಪ್ರಯತ್ನ ಮಾಡಿತು. ಆದರೆ ಸಫಲವಾಗಲಿಲ್ಲ. ಶ್ರೇಯಸ್ ಪಂಜಾಬ್ ಸೇರಲು ಕಾರಣವೂ ಇದ್ದು, ಈ ಹಿಂದೆ ಡೆಲ್ಲಿ ತಂಡದ ಕೋಚ್ ಆಗಿದ್ದ ರಿಕಿ ಪಾಂಟಿಂಗ್, ಈ ಬಾರಿ ಪಂಜಾಬ್ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಈ ಮೊದಲು ಶ್ರೇಯಸ್ ಜೊತೆ ಕೆಲಸ ಮಾಡಿದ್ದ ಪಾಂಟಿಂಗ್, ಪಂಜಾಬ್​ನಲ್ಲೂ ಅದೇ ಕೆಲಸವನ್ನು ಮುಂದುವರೆಸಲಿದ್ದಾರೆ.

3 / 5
ಶ್ರೇಯಸ್ ಅಯ್ಯರ್ ಇದುವರೆಗೆ ಐಪಿಎಲ್‌ನಲ್ಲಿ ನಾಯಕನಾಗಿ ಯಶಸ್ವಿಯಾಗಿದ್ದಾರೆ. ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು ಚಾಂಪಿಯನ್ ಮಾಡುವುದರ ಜೊತೆಗೆ, ದೆಹಲಿ ತಂಡವನ್ನು ಒಮ್ಮೆ ಫೈನಲ್‌ಗೆ ಕೊಂಡೊಯ್ದಿದ್ದಾರೆ. ಅಂದರೆ ಒತ್ತಡದ ನಡುವೆಯೂ ತಂಡವನ್ನು ಹೇಗೆ ನಡೆಸಬೇಕೆಂಬ ಕಲೆ ಅಯ್ಯರ್​ಗೆ ಚೆನ್ನಾಗಿ ತಿಳಿದಿದೆ.

ಶ್ರೇಯಸ್ ಅಯ್ಯರ್ ಇದುವರೆಗೆ ಐಪಿಎಲ್‌ನಲ್ಲಿ ನಾಯಕನಾಗಿ ಯಶಸ್ವಿಯಾಗಿದ್ದಾರೆ. ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಅನ್ನು ಚಾಂಪಿಯನ್ ಮಾಡುವುದರ ಜೊತೆಗೆ, ದೆಹಲಿ ತಂಡವನ್ನು ಒಮ್ಮೆ ಫೈನಲ್‌ಗೆ ಕೊಂಡೊಯ್ದಿದ್ದಾರೆ. ಅಂದರೆ ಒತ್ತಡದ ನಡುವೆಯೂ ತಂಡವನ್ನು ಹೇಗೆ ನಡೆಸಬೇಕೆಂಬ ಕಲೆ ಅಯ್ಯರ್​ಗೆ ಚೆನ್ನಾಗಿ ತಿಳಿದಿದೆ.

4 / 5
ಇದಲ್ಲದೇ ಅಯ್ಯರ್ ಬ್ಯಾಟ್ಸ್​ಮನ್ ಆಗಿಯೂ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೇಯಸ್ ಅಯ್ಯರ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 115 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 32.24ರ ಸರಾಸರಿಯಲ್ಲಿ 3127 ರನ್ ಗಳಿಸಿದ್ದಾರೆ. ಇದರಲ್ಲಿ 21 ಅರ್ಧಶತಕಗಳು ಸೇರಿವೆ.

ಇದಲ್ಲದೇ ಅಯ್ಯರ್ ಬ್ಯಾಟ್ಸ್​ಮನ್ ಆಗಿಯೂ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೇಯಸ್ ಅಯ್ಯರ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 115 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 32.24ರ ಸರಾಸರಿಯಲ್ಲಿ 3127 ರನ್ ಗಳಿಸಿದ್ದಾರೆ. ಇದರಲ್ಲಿ 21 ಅರ್ಧಶತಕಗಳು ಸೇರಿವೆ.

5 / 5
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?