AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷ 4 ಟ್ರೋಫಿ ಎತ್ತಿ ಹಿಡಿದ ಶ್ರೇಯಸ್ ಅಯ್ಯರ್..!

SMAT 2024: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ 2024 ರಲ್ಲಿ ಮುಂಬೈ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಧ್ಯ ಪ್ರದೇಶ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 174 ರನ್ ಕಲೆಹಾಕಿತು. ಈ ಗುರಿಯನ್ನು 17.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಮುಂಬೈ ತಂಡವು 5 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Dec 16, 2024 | 7:53 AM

Share
ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

1 / 5
ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

2 / 5
ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

3 / 5
ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

4 / 5
ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

5 / 5
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ