AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷ 4 ಟ್ರೋಫಿ ಎತ್ತಿ ಹಿಡಿದ ಶ್ರೇಯಸ್ ಅಯ್ಯರ್..!

SMAT 2024: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ 2024 ರಲ್ಲಿ ಮುಂಬೈ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಧ್ಯ ಪ್ರದೇಶ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 174 ರನ್ ಕಲೆಹಾಕಿತು. ಈ ಗುರಿಯನ್ನು 17.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಮುಂಬೈ ತಂಡವು 5 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Dec 16, 2024 | 7:53 AM

Share
ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

1 / 5
ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

2 / 5
ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

3 / 5
ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

4 / 5
ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್