AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷ 4 ಟ್ರೋಫಿ ಎತ್ತಿ ಹಿಡಿದ ಶ್ರೇಯಸ್ ಅಯ್ಯರ್..!

SMAT 2024: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ 2024 ರಲ್ಲಿ ಮುಂಬೈ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಧ್ಯ ಪ್ರದೇಶ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 174 ರನ್ ಕಲೆಹಾಕಿತು. ಈ ಗುರಿಯನ್ನು 17.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಮುಂಬೈ ತಂಡವು 5 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Dec 16, 2024 | 7:53 AM

ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

1 / 5
ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

2 / 5
ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

3 / 5
ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

4 / 5
ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

5 / 5
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ