AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷ 4 ಟ್ರೋಫಿ ಎತ್ತಿ ಹಿಡಿದ ಶ್ರೇಯಸ್ ಅಯ್ಯರ್..!

SMAT 2024: ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿ 2024 ರಲ್ಲಿ ಮುಂಬೈ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮಧ್ಯ ಪ್ರದೇಶ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 174 ರನ್ ಕಲೆಹಾಕಿತು. ಈ ಗುರಿಯನ್ನು 17.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಮುಂಬೈ ತಂಡವು 5 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Dec 16, 2024 | 7:53 AM

Share
ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

ಶ್ರೇಯಸ್ ಅಯ್ಯರ್ ಪಾಲಿಗೆ 2024 ಸ್ಮರಣೀಯ ವರ್ಷ. ಏಕೆಂದರೆ ಈ ವರ್ಷ ಅಯ್ಯರ್ ಬರೋಬ್ಬರಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ. ಅದರಲ್ಲಿ 2 ಟ್ರೋಫಿಗಳು ತನ್ನದೇ ನಾಯಕತ್ವದಲ್ಲಿ ಮೂಡಿಬಂದಿರುವುದು ವಿಶೇಷ. ಈ ವರ್ಷ ಶ್ರೇಯಸ್ ಅಯ್ಯರ್ ಗೆದ್ದಂತಹ ಟ್ರೋಫಿಗಳಾವುವು ಎಂದು ನೋಡುವುದಾದರೆ...

1 / 5
ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

ರಣಜಿ ಟ್ರೋಫಿ: 2023-24ರ ರಣಜಿ ಟೂರ್ನಿಯಲ್ಲಿ ಶ್ರೇಯಸ್ ಅಯ್ಯರ್ ಮುಂಬೈ ಪರ ಕಣಕ್ಕಿಳಿದಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಮುಂಬೈ ತಂಡವು 169 ರನ್​ಗಳಿಂದ ಅಮೋಘ ಗೆಲುವು ದಾಖಲಿಸಿತ್ತು. ಈ ಚಾಂಪಿಯನ್​ ಪಟ್ಟದೊಂದಿಗೆ ಶ್ರೇಯಸ್ ಅಯ್ಯರ್ 2024 ಅನ್ನು ಆರಂಭಿಸಿದ್ದರು.

2 / 5
ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

ಐಪಿಎಲ್ ಟ್ರೋಫಿ: ಇಂಡಿಯನ್ ಪ್ರೀಮಿಯರ್ ಲೀಗ್​ 2024 ರಲ್ಲಿ ಶ್ರೇಯಸ್ ಅಯ್ಯರ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಕಣಕ್ಕಿಳಿದಿದ್ದರು. ಈ ಟೂರ್ನಿಯಲ್ಲಿ ಕೆಕೆಆರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಅಯ್ಯರ್ ಪ್ರಮುಖ ಪಾತ್ರವಹಿಸಿದ್ದರು.

3 / 5
ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

ಇರಾನಿ ಕಪ್: 2024ರಲ್ಲಿ ನಡೆದ ಇರಾನಿ ಕಪ್ ಪಂದ್ಯದಲ್ಲಿ ರಣಜಿ ಚಾಂಪಿಯನ್ ಮುಂಬೈ ಹಾಗೂ ಶೇಷ ಭಾರತ ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ, ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ ಮುಂಬೈ ಟ್ರೋಫಿ ಎತ್ತಿ ಹಿಡಿಯಿತು.

4 / 5
ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ: 2024ರ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮುಂಬೈ ತಂಡವು ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕಣಕ್ಕಿಳಿದಿತ್ತು. ಬೆಂಗಳೂರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ಒಂದೇ ವರ್ಷದಲ್ಲಿ 4 ಟ್ರೋಫಿಗಳನ್ನು ಎತ್ತಿ ಹಿಡಿದಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ