AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆನ್ ಟನ್​ನೊಂದಿಗೆ ಹಿಟ್​​ಮ್ಯಾನ್ ದಾಖಲೆ ಮುರಿದ ಶುಭ್​​ಮನ್ ಗಿಲ್ 

India vs West Indies, 2nd Test: ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (175) ಹಾಗೂ ಶುಭ್​ಮನ್ ಗಿಲ್ (129) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕಗಳ ನೆರವಿನೊಂದಿಗೆ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 518 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ.

ಝಾಹಿರ್ ಯೂಸುಫ್
|

Updated on: Oct 12, 2025 | 8:23 AM

Share
ವೆಸ್ಟ್ ಇಂಡೀಸ್​ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ಶುಭ್​ಮನ್ ಗಿಲ್ (Shubman Gill) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಬರೆದಿದ್ದ ದಾಖಲೆಯನ್ನು ಮುರಿಯುವ ಮೂಲಕ.

ವೆಸ್ಟ್ ಇಂಡೀಸ್​ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಬಾರಿಸುವ ಮೂಲಕ ಶುಭ್​ಮನ್ ಗಿಲ್ (Shubman Gill) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಬರೆದಿದ್ದ ದಾಖಲೆಯನ್ನು ಮುರಿಯುವ ಮೂಲಕ.

1 / 5
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ 196 ಎಸೆತಗಳಲ್ಲಿ 16 ಫೋರ್ ಹಾಗೂ 2 ಸಿಕ್ಸರ್​ಗಳೊಂದಿಗೆ ಅಜೇಯ 129 ರನ್ ಬಾರಿಸಿದ್ದರು. ಈ ಆಕರ್ಷಕ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ 196 ಎಸೆತಗಳಲ್ಲಿ 16 ಫೋರ್ ಹಾಗೂ 2 ಸಿಕ್ಸರ್​ಗಳೊಂದಿಗೆ ಅಜೇಯ 129 ರನ್ ಬಾರಿಸಿದ್ದರು. ಈ ಆಕರ್ಷಕ ಶತಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್​ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಒಟ್ಟು 40 ಪಂದ್ಯಗಳನ್ನಾಡಿದ್ದರು. ಈ ವೇಳೆ ಆಡಿದ 69 ಇನಿಂಗ್ಸ್​ಗಳಲ್ಲಿ ಒಟ್ಟು 9 ಸೆಂಚುರಿ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್​ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಒಟ್ಟು 40 ಪಂದ್ಯಗಳನ್ನಾಡಿದ್ದರು. ಈ ವೇಳೆ ಆಡಿದ 69 ಇನಿಂಗ್ಸ್​ಗಳಲ್ಲಿ ಒಟ್ಟು 9 ಸೆಂಚುರಿ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಈ ದಾಖಲೆ ಮುರಿಯುವ ಮೂಲಕ ಶುಭ್​​ಮನ್ ಗಿಲ್ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 39 ಪಂದ್ಯಗಳನ್ನಾಡಿರುವ ಗಿಲ್ 71 ಇನಿಂಗ್ಸ್​ಗಳ ಮೂಲಕ ಒಟ್ಟು 10 ಶತಕ ಸಿಡಿಸಿದ್ದಾರೆ. ಈ ಮೂಲಕ WTC  ಇತಿಹಾಸದಲ್ಲೇ ಭಾರತದ ಪರ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆ ಮುರಿಯುವ ಮೂಲಕ ಶುಭ್​​ಮನ್ ಗಿಲ್ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಈವರೆಗೆ 39 ಪಂದ್ಯಗಳನ್ನಾಡಿರುವ ಗಿಲ್ 71 ಇನಿಂಗ್ಸ್​ಗಳ ಮೂಲಕ ಒಟ್ಟು 10 ಶತಕ ಸಿಡಿಸಿದ್ದಾರೆ. ಈ ಮೂಲಕ WTC  ಇತಿಹಾಸದಲ್ಲೇ ಭಾರತದ ಪರ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ಈ 129 ರನ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ರಿಷಭ್ ಪಂತ್ (2731) ಹೆಸರಿನಲ್ಲಿತ್ತು. ಇದೀಗ 2826 ರನ್​ಗಳೊಂದಿಗೆ ಈ ಪಟ್ಟಿಯಲ್ಲಿ ಶುಭ್​ಮನ್ ಗಿಲ್ ಮೊದಲ ಸ್ಥಾನಕ್ಕೇರಿದ್ದಾರೆ.

ಇನ್ನು ಈ 129 ರನ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ರಿಷಭ್ ಪಂತ್ (2731) ಹೆಸರಿನಲ್ಲಿತ್ತು. ಇದೀಗ 2826 ರನ್​ಗಳೊಂದಿಗೆ ಈ ಪಟ್ಟಿಯಲ್ಲಿ ಶುಭ್​ಮನ್ ಗಿಲ್ ಮೊದಲ ಸ್ಥಾನಕ್ಕೇರಿದ್ದಾರೆ.

5 / 5
Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ