AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್​ಗೆ ಗಿಲ್ ನಾಯಕ, ಹಾರ್ದಿಕ್ ಮುಂಬೈಗೆ, ಗ್ರೀನ್ ಆರ್​ಸಿಬಿಗೆ: ಐಪಿಎಲ್​ನಲ್ಲಿ ಮಹತ್ವದ ಬೆಳವಣಿಗೆ

Shubman Gill Gujarat Titans Captain: ಇಂಡಿಯನ್ ಪ್ರೀಮಿಯರ್ ಲೀಗ್ 2024 ಮಿನಿ ಹರಾಜು ಹತ್ತಿರುವಾಗುತ್ತಿದ್ದಂತೆ ಫ್ರಾಂಚೈಸಿ ಮೂಲಗಳಿಂದ ಒಂದೊಂದೆ ಮಾಹಿತಿ ಹೊರಬೀಳುತ್ತಿದೆ. ಸದ್ಯ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಖರೀದಿ ಮಾಡಿದೆಯಂತೆ. ಅತ್ತ ಮುಂಬೈ ಗ್ರೀನ್ ಅವರನ್ನು ಆರ್​ಸಿಬಿಗೆ ಬಿಟ್ಟುಕೊಟ್ಟಿದೆ. ಇವುಗಳ ನಡುವೆ ಗುಜರಾತ್ ಟೈಟಾನ್ಸ್ ನಾಯಕನಾಗಿ ಶುಭ್​ಮನ್ ಗಿಲ್ ಆಯ್ಕೆ ಆಗಿದ್ದಾರೆ.

Vinay Bhat
|

Updated on: Nov 27, 2023 | 10:27 AM

ಕಳೆದ ಎರಡು ದಿನಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಲೋಕದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಎಲ್ಲ ಫ್ರಾಂಚೈಸಿಗಳು ತಮಗೆ ಅಗತ್ಯವಿಲ್ಲದ ಆಟಗಾರರ ಬಿಡುಗಡೆ ಮಾಡಿವೆ. ಇದರ ನಡುವೆ ಟ್ರೇಡ್​ಗಳು ನಡೆಯುತ್ತಿದ್ದು, ಟ್ರೇಡ್ ವಿಂಡೋ ಡಿಸೆಂಬರ್ 12 ರವರೆಗೆ ತೆರೆದಿರುತ್ತದೆ.

ಕಳೆದ ಎರಡು ದಿನಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಲೋಕದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಈಗಾಗಲೇ ಎಲ್ಲ ಫ್ರಾಂಚೈಸಿಗಳು ತಮಗೆ ಅಗತ್ಯವಿಲ್ಲದ ಆಟಗಾರರ ಬಿಡುಗಡೆ ಮಾಡಿವೆ. ಇದರ ನಡುವೆ ಟ್ರೇಡ್​ಗಳು ನಡೆಯುತ್ತಿದ್ದು, ಟ್ರೇಡ್ ವಿಂಡೋ ಡಿಸೆಂಬರ್ 12 ರವರೆಗೆ ತೆರೆದಿರುತ್ತದೆ.

1 / 8
ಸದ್ಯ ಮೂಲಗಳಿಂದ ಮತ್ತೊಂದು ಶಾಕಿಂಗ್ ಮಾಹಿತಿ ಹೊರಬಿದ್ದಿದ್ದು, ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಖರೀದಿ ಮಾಡಿದೆಯಂತೆ. ಗುಜರಾತ್ ಟೈಟಾನ್ಸ್ ಜೊತೆಗೆ ನಗದು ವ್ಯವಹಾರದ ಮೂಲಕ ಮುಂಬೈ ಪಾಂಡ್ಯರನ್ನು ಕರೆತಂದಿದೆ. ಇದಕ್ಕೂ ಮುನ್ನ ಮುಂಬೈ ಕ್ಯಾಮ್ರೋನ್ ಗ್ರೀನ್ ಅವರನ್ನು ತಂಡದಿಂದ ಕೈಬಿಟ್ಟಿದೆ.

ಸದ್ಯ ಮೂಲಗಳಿಂದ ಮತ್ತೊಂದು ಶಾಕಿಂಗ್ ಮಾಹಿತಿ ಹೊರಬಿದ್ದಿದ್ದು, ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ಖರೀದಿ ಮಾಡಿದೆಯಂತೆ. ಗುಜರಾತ್ ಟೈಟಾನ್ಸ್ ಜೊತೆಗೆ ನಗದು ವ್ಯವಹಾರದ ಮೂಲಕ ಮುಂಬೈ ಪಾಂಡ್ಯರನ್ನು ಕರೆತಂದಿದೆ. ಇದಕ್ಕೂ ಮುನ್ನ ಮುಂಬೈ ಕ್ಯಾಮ್ರೋನ್ ಗ್ರೀನ್ ಅವರನ್ನು ತಂಡದಿಂದ ಕೈಬಿಟ್ಟಿದೆ.

2 / 8
ಮುಂಬೈ ಫ್ರಾಂಚೈಸಿಯಿಂದ ಕ್ಯಾಮ್ರೋನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿ ಮಾಡಿದೆ. ಕಳೆದ ವರ್ಷ INR 17.50 ಕೋಟಿಗೆ ಗ್ರೀನ್​ರನ್ನು ಮುಂಬೈ ಖರೀದಿಸಿತ್ತು. ಈಗ ಇದೇ ಬೆಲೆಯ ಆಸುಪಾಸಿಗೆ ಹಾರ್ದಿಕ್ ಅವರನ್ನು ರೋಹಿತ್ ಟೀಮ್ ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ.

ಮುಂಬೈ ಫ್ರಾಂಚೈಸಿಯಿಂದ ಕ್ಯಾಮ್ರೋನ್ ಗ್ರೀನ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಖರೀದಿ ಮಾಡಿದೆ. ಕಳೆದ ವರ್ಷ INR 17.50 ಕೋಟಿಗೆ ಗ್ರೀನ್​ರನ್ನು ಮುಂಬೈ ಖರೀದಿಸಿತ್ತು. ಈಗ ಇದೇ ಬೆಲೆಯ ಆಸುಪಾಸಿಗೆ ಹಾರ್ದಿಕ್ ಅವರನ್ನು ರೋಹಿತ್ ಟೀಮ್ ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ.

3 / 8
ಇವೆಲ್ಲದರ ನಡುವೆ ಗುಜರಾತ್ ಟೈಟಾನ್ಸ್ ತಂಡ ಶುಭ್​ಮನ್ ಗಿಲ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿದೆ ಎಂದು ವರದಿ ಆಗಿದೆ. 2024 ಐಪಿಎಲ್​ನಲ್ಲಿ ಜಿಟಿ ತಂಡವನ್ನು ಗಿಲ್ ಮುನ್ನಡೆಸಲಿದ್ದಾರೆ. ಗಿಲ್ ನಾಯಕತ್ವದಲ್ಲಿ ಗುಜರಾತ್ ಯಾವರೀತಿ ಪ್ರದರ್ಶನ ತೋರುತ್ತೆ ನೋಡಬೇಕು.

ಇವೆಲ್ಲದರ ನಡುವೆ ಗುಜರಾತ್ ಟೈಟಾನ್ಸ್ ತಂಡ ಶುಭ್​ಮನ್ ಗಿಲ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿದೆ ಎಂದು ವರದಿ ಆಗಿದೆ. 2024 ಐಪಿಎಲ್​ನಲ್ಲಿ ಜಿಟಿ ತಂಡವನ್ನು ಗಿಲ್ ಮುನ್ನಡೆಸಲಿದ್ದಾರೆ. ಗಿಲ್ ನಾಯಕತ್ವದಲ್ಲಿ ಗುಜರಾತ್ ಯಾವರೀತಿ ಪ್ರದರ್ಶನ ತೋರುತ್ತೆ ನೋಡಬೇಕು.

4 / 8
ಹಾರ್ದಿಕ್ 2015 ರಲ್ಲಿ ಮುಂಬೈ ಇಂಡಿಯನ್ಸ್‌ನೊಂದಿಗೆ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇಲ್ಲಿ ಅದ್ಭುತ ಪ್ರದರ್ಶನ ತೋರಿ ಟೀಮ್ ಇಂಡಿಯಾಕ್ಕೂ ಆಯ್ಕೆ ಆದರು. ಮುಂಬೈ ತಂಡದಲ್ಲಿದ್ದಾಗ ಹಾರ್ದಿಕ್ 4 ಬಾರಿ ಪ್ರಶಸ್ತಿ ಗೆದ್ದಿದ್ದರು. ನಂತರ 2022 ರ ಋತುವಿನಲ್ಲಿ, ಗುಜರಾತ್ ಟೈಟಾನ್ಸ್ ಸೇರಿ ಮೊದಲ ಋತುವಿನಲ್ಲಿಯೇ ತಂಡವನ್ನು ಪ್ರಶಸ್ತಿ ಗೆಲ್ಲುವಂತೆ ಮಾಡಿದರು.

ಹಾರ್ದಿಕ್ 2015 ರಲ್ಲಿ ಮುಂಬೈ ಇಂಡಿಯನ್ಸ್‌ನೊಂದಿಗೆ ಐಪಿಎಲ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇಲ್ಲಿ ಅದ್ಭುತ ಪ್ರದರ್ಶನ ತೋರಿ ಟೀಮ್ ಇಂಡಿಯಾಕ್ಕೂ ಆಯ್ಕೆ ಆದರು. ಮುಂಬೈ ತಂಡದಲ್ಲಿದ್ದಾಗ ಹಾರ್ದಿಕ್ 4 ಬಾರಿ ಪ್ರಶಸ್ತಿ ಗೆದ್ದಿದ್ದರು. ನಂತರ 2022 ರ ಋತುವಿನಲ್ಲಿ, ಗುಜರಾತ್ ಟೈಟಾನ್ಸ್ ಸೇರಿ ಮೊದಲ ಋತುವಿನಲ್ಲಿಯೇ ತಂಡವನ್ನು ಪ್ರಶಸ್ತಿ ಗೆಲ್ಲುವಂತೆ ಮಾಡಿದರು.

5 / 8
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಿನಿ ಹರಾಜಿಗೂ ಮುನ್ನ 10 ಆಟಗಾರರನ್ನು ಬಿಡುಗಡೆ ಮಾಡಿದೆ. ಪರ್ಸ್‌ನಲ್ಲಿ ಒಟ್ಟು 40.75 ಕೋಟಿ ರೂ. ಇದೆ. ಗ್ರೀನ್ ಅರನ್ನು ಆರ್‌ಸಿಬಿ ಖರೀದಿಸಿದ ನಂತರ ಇನ್ನೂ 6 ಸ್ಲಾಟ್‌ಗಳು ಬಾಕಿಯಿದೆ. ಮೂಲಗಳ ಪ್ರಕಾರ ಹರಾಜಿನಲ್ಲಿ ಬೆಂಗಳೂರು ರಚಿನ್ ರವೀಂದ್ರ ಮೇಲೆ ಕಣ್ಣಿಟ್ಟಿದೆಯಂತೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಿನಿ ಹರಾಜಿಗೂ ಮುನ್ನ 10 ಆಟಗಾರರನ್ನು ಬಿಡುಗಡೆ ಮಾಡಿದೆ. ಪರ್ಸ್‌ನಲ್ಲಿ ಒಟ್ಟು 40.75 ಕೋಟಿ ರೂ. ಇದೆ. ಗ್ರೀನ್ ಅರನ್ನು ಆರ್‌ಸಿಬಿ ಖರೀದಿಸಿದ ನಂತರ ಇನ್ನೂ 6 ಸ್ಲಾಟ್‌ಗಳು ಬಾಕಿಯಿದೆ. ಮೂಲಗಳ ಪ್ರಕಾರ ಹರಾಜಿನಲ್ಲಿ ಬೆಂಗಳೂರು ರಚಿನ್ ರವೀಂದ್ರ ಮೇಲೆ ಕಣ್ಣಿಟ್ಟಿದೆಯಂತೆ.

6 / 8
ಆರ್‌ಸಿಬಿ ಬಿಡುಗಡೆ ಮಾಡಿದ ಆಟಗಾರರ ಪಟ್ಟಿ: ವನಿಂದು ಹಸರಂಗ, ಫಿನ್ ಅಲೆನ್, ಕೇದರ್ ಜಾಧವ್, ಹರ್ಷಲ್ ಪಟೇಲ್, ಮೈಕೆಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್ ಮತ್ತು ಸಿದ್ದಾರ್ಥ್ ಕೌಲ್.

ಆರ್‌ಸಿಬಿ ಬಿಡುಗಡೆ ಮಾಡಿದ ಆಟಗಾರರ ಪಟ್ಟಿ: ವನಿಂದು ಹಸರಂಗ, ಫಿನ್ ಅಲೆನ್, ಕೇದರ್ ಜಾಧವ್, ಹರ್ಷಲ್ ಪಟೇಲ್, ಮೈಕೆಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್ ಮತ್ತು ಸಿದ್ದಾರ್ಥ್ ಕೌಲ್.

7 / 8
ಐಪಿಎಲ್ 2024 ರ ಆರ್‌ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಾಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಮೊಹಮ್ಮದ್ ಸಿರಾಜ್, ರಾಜನ್ ಶರ್ಮಾ, ಹಿಮಾನ್ಸ್ ಶರ್ಮಾ, ವಿಜಯಕುಮಾರ್ ವೈಶಾಕ್.

ಐಪಿಎಲ್ 2024 ರ ಆರ್‌ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಾಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಮೊಹಮ್ಮದ್ ಸಿರಾಜ್, ರಾಜನ್ ಶರ್ಮಾ, ಹಿಮಾನ್ಸ್ ಶರ್ಮಾ, ವಿಜಯಕುಮಾರ್ ವೈಶಾಕ್.

8 / 8
Follow us
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ