AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ನಾಯಕನಾಗಿ ವಿದೇಶಿ ನೆಲದಲ್ಲಿ ಮೊದಲ ಸರಣಿ ಗೆದ್ದ ಶುಭ್​ಮನ್ ಗಿಲ್

Shubman Gill captaincy: ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ. ಇದು ಗಿಲ್ ಅವರ ನಾಯಕತ್ವದಲ್ಲಿ ಭಾರತಕ್ಕೆ ದೊರೆತ ಮೊದಲ ವಿದೇಶಿ ಸರಣಿ ಜಯವಾಗಿದೆ. ಗಾಲೆಯಲ್ಲಿ ಮೊದಲ ಟೆಸ್ಟ್ ಗೆದ್ದು, ಕೊಲಂಬೊದಲ್ಲಿ ಎರಡನೇ ಟೆಸ್ಟ್ ಡ್ರಾಗೊಂಡರೂ, ಅಜೇಯ ಓಟ ಮುಂದುವರೆಯಿತು. ಗಿಲ್ ನಾಯಕತ್ವದಲ್ಲಿ ಭಾರತ ಇದುವರೆಗೆ ಟೆಸ್ಟ್ ಸರಣಿಯನ್ನು ಸೋತಿಲ್ಲ.

ಪೃಥ್ವಿಶಂಕರ
|

Updated on: Aug 27, 2026 | 10:26 PM

Share
ಕೊಲಂಬೊದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಆದಾಗ್ಯೂ ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು. ಈ ಮೂಲಕ ಗಿಲ್, ವಿದೇಶಿ ನೆಲದಲ್ಲಿ ತಮ್ಮ ಮೊದಲ ಸರಣಿ ಗೆದ್ದ ಸಾಧನೆಯನ್ನು ಮಾಡಿದರು(PC-PTI).

ಕೊಲಂಬೊದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಆದಾಗ್ಯೂ ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು. ಈ ಮೂಲಕ ಗಿಲ್, ವಿದೇಶಿ ನೆಲದಲ್ಲಿ ತಮ್ಮ ಮೊದಲ ಸರಣಿ ಗೆದ್ದ ಸಾಧನೆಯನ್ನು ಮಾಡಿದರು(PC-PTI).

1 / 5
ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 165 ರನ್​ಗಳಿಂದ ಗೆದ್ದುಕೊಂಡಿತ್ತು. ಎರಡನೇ ಟೆಸ್ಟ್​ನಲ್ಲೂ ಟೀಂ ಇಂಡಿಯಾ ಗೆಲುವಿನ ಸನಿಹದಲ್ಲಿತ್ತು. ಆದರೆ ಭಾರತದ ಗೆಲುವಿಗೆ ಲಂಕಾ ತಂಡ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿಯನ್ನು ಗೆದ್ದು ಟ್ರೋಫಿಯನ್ನು ಎತ್ತಿಹಿಡಿಯಿತು(PC-PTI).

ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 165 ರನ್​ಗಳಿಂದ ಗೆದ್ದುಕೊಂಡಿತ್ತು. ಎರಡನೇ ಟೆಸ್ಟ್​ನಲ್ಲೂ ಟೀಂ ಇಂಡಿಯಾ ಗೆಲುವಿನ ಸನಿಹದಲ್ಲಿತ್ತು. ಆದರೆ ಭಾರತದ ಗೆಲುವಿಗೆ ಲಂಕಾ ತಂಡ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿಯನ್ನು ಗೆದ್ದು ಟ್ರೋಫಿಯನ್ನು ಎತ್ತಿಹಿಡಿಯಿತು(PC-PTI).

2 / 5
ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಇದು ಟೀಂ ಇಂಡಿಯಾದದ ಎರಡನೇ ವಿದೇಶಿ ಸರಣಿಯಾಗಿದೆ 2025 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಅಧಿಕಾರ ವಹಿಸಿಕೊಂಡ ಗಿಲ್, ತಮ್ಮ ನಾಯಕತ್ವದಲ್ಲಿ ಮೊದಲಿಗೆ ಇಂಗ್ಲೆಂಡ್ ಪ್ರವಾಸ ಮಾಡಿದ್ದರು. ಆ ಪ್ರವಾಸವನ್ನು ಟೀಂ ಇಂಡಿಯಾ 2-2 ರಿಂದ ಡ್ರಾದಲ್ಲಿ ಕೊನೆಗೊಳಿಸಿತ್ತು(PC-PTI).

ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಇದು ಟೀಂ ಇಂಡಿಯಾದದ ಎರಡನೇ ವಿದೇಶಿ ಸರಣಿಯಾಗಿದೆ 2025 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಅಧಿಕಾರ ವಹಿಸಿಕೊಂಡ ಗಿಲ್, ತಮ್ಮ ನಾಯಕತ್ವದಲ್ಲಿ ಮೊದಲಿಗೆ ಇಂಗ್ಲೆಂಡ್ ಪ್ರವಾಸ ಮಾಡಿದ್ದರು. ಆ ಪ್ರವಾಸವನ್ನು ಟೀಂ ಇಂಡಿಯಾ 2-2 ರಿಂದ ಡ್ರಾದಲ್ಲಿ ಕೊನೆಗೊಳಿಸಿತ್ತು(PC-PTI).

3 / 5
ಒಟ್ಟಾರೆಯಾಗಿ, ಗಿಲ್ ನಾಯಕತ್ವದಲ್ಲಿ ಭಾರತ ಇದುವರೆಗೆ ಟೆಸ್ಟ್ ಸರಣಿಯನ್ನು ಸೋತಿಲ್ಲ. ಇಂಗ್ಲೆಂಡ್‌ ಪ್ರವಾಸವನ್ನು 2-2 ರ ಸಮಬಲದೊಂದಿಗೆ ಅಂತ್ಯಗೊಳಿಸಿದ್ದ ಭಾರತ, ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತ್ತು. ನಂತರ ಅಫ್ಘಾನಿಸ್ತಾನ ವಿರುದ್ಧದ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಗೆದ್ದಿತ್ತು(PC-PTI).

ಒಟ್ಟಾರೆಯಾಗಿ, ಗಿಲ್ ನಾಯಕತ್ವದಲ್ಲಿ ಭಾರತ ಇದುವರೆಗೆ ಟೆಸ್ಟ್ ಸರಣಿಯನ್ನು ಸೋತಿಲ್ಲ. ಇಂಗ್ಲೆಂಡ್‌ ಪ್ರವಾಸವನ್ನು 2-2 ರ ಸಮಬಲದೊಂದಿಗೆ ಅಂತ್ಯಗೊಳಿಸಿದ್ದ ಭಾರತ, ವೆಸ್ಟ್ ಇಂಡೀಸ್ ವಿರುದ್ಧದ ತವರು ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತ್ತು. ನಂತರ ಅಫ್ಘಾನಿಸ್ತಾನ ವಿರುದ್ಧದ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಗೆದ್ದಿತ್ತು(PC-PTI).

4 / 5
ಇನ್ನು ಈ ಸರಣಿಯಲ್ಲಿ ಶುಭ್​ಮನ್ ಗಿಲ್ ಅವರ ಪ್ರದರ್ಶನವನ್ನು ನೋಡುವುದಾದರೆ.. ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 16 ರನ್ ಬಾರಿಸಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 8 ರನ್​ಗಳಿಗೆ ಸುಸ್ತಾಗಿದ್ದರು. ಕೊಲಂಬೊದಲ್ಲಿ ನಡೆದ ಎರಡನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಗಿಲ್ 50 ರನ್​ಗಳ ಇನ್ನಿಂಗ್ಸ್ ಆಡಿ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾದರು(PC-PTI).

ಇನ್ನು ಈ ಸರಣಿಯಲ್ಲಿ ಶುಭ್​ಮನ್ ಗಿಲ್ ಅವರ ಪ್ರದರ್ಶನವನ್ನು ನೋಡುವುದಾದರೆ.. ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 16 ರನ್ ಬಾರಿಸಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 8 ರನ್​ಗಳಿಗೆ ಸುಸ್ತಾಗಿದ್ದರು. ಕೊಲಂಬೊದಲ್ಲಿ ನಡೆದ ಎರಡನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಗಿಲ್ 50 ರನ್​ಗಳ ಇನ್ನಿಂಗ್ಸ್ ಆಡಿ ತಂಡ ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾದರು(PC-PTI).

5 / 5
Follow Us
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
ಈದ್ ಮಿಲಾದ್ ಆಚರಣೆ ವೇಳೆ ಗಲಾಟೆ: ಗೃಹ ಸಚಿವ ಖರ್ಗೆ ಖಡಕ್ ಎಚ್ಚರಿಕೆ
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
4 ವರ್ಷದೊಳಗೆ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ
ಗರ್ಭಿಣಿ ಮಹಿಳಾ ಕಾನ್ಸ್ಟೇಬಲ್ ಮೇಲೆ ರಾಡ್ ನಿಂದ ಹಲ್ಲೆ: ಆರೋಪಿ ಬಂಧನ