AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದವರೆಗೆ ಶುಭ್​ಮನ್ ಗಿಲ್ ತಂಡದಿಂದ ಔಟ್..!

Shubman Gill: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಶುಭ್​ಮನ್ ಗಿಲ್ ಅವರ ವೈದ್ಯಕೀಯ ವರದಿಗಳು ಇದೀಗ ಬಿಸಿಸಿಐ ಆಯ್ಕೆ ಸಮಿತಿ ಕೈ ಸೇರಿದೆ. ಈ ವರದಿಯಲ್ಲಿ ಅವರಿಗೆ ನರಗಳ ಸೆಳೆತವಿರುವುದನ್ನು ಪ್ರಸ್ತಾಪಿಸಲಾಗಿದ್ದು, ಹೀಗಾಗಿ ಕನಿಷ್ಠ 1 ತಿಂಗಳುಗಳ ಕಾಲ ವಿಶ್ರಾಂತಿ ನೀಡುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on:Nov 23, 2025 | 12:58 PM

Share
ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ (Shubman Gill) ಮತ್ತೆ ಕಣಕ್ಕಿಳಿಯಲು ಮುಂದಿನ ವರ್ಷದವರೆಗೆ ಕಾಯಬೇಕಿದೆ. ಏಕೆಂದರೆ ಗಿಲ್ ನರಗಳ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ (Shubman Gill) ಮತ್ತೆ ಕಣಕ್ಕಿಳಿಯಲು ಮುಂದಿನ ವರ್ಷದವರೆಗೆ ಕಾಯಬೇಕಿದೆ. ಏಕೆಂದರೆ ಗಿಲ್ ನರಗಳ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಶುಭ್​​ಮನ್ ಗಿಲ್ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದರು.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಶುಭ್​​ಮನ್ ಗಿಲ್ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದರು.

2 / 5
ಇದಾದ ಬಳಿಕ ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದ ಶುಭ್​​ಮನ್ ಗಿಲ್ ಅವರ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ನರಗಳಲ್ಲಿ ಸೆಳೆತವಿರುವುದು ಕಂಡು ಬಂದಿದೆ. ಅಲ್ಲಿ ಚಿಕಿತ್ಸೆ ಪಡೆದ ಬಳಿಕ ಗಿಲ್ ಮುಂಬೈನ ಖ್ಯಾತ ವೈದ್ಯ ಡಾ. ಅಭಯ್ ನೇನೆ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. 

ಇದಾದ ಬಳಿಕ ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದ ಶುಭ್​​ಮನ್ ಗಿಲ್ ಅವರ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ನರಗಳಲ್ಲಿ ಸೆಳೆತವಿರುವುದು ಕಂಡು ಬಂದಿದೆ. ಅಲ್ಲಿ ಚಿಕಿತ್ಸೆ ಪಡೆದ ಬಳಿಕ ಗಿಲ್ ಮುಂಬೈನ ಖ್ಯಾತ ವೈದ್ಯ ಡಾ. ಅಭಯ್ ನೇನೆ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. 

3 / 5
ಅಭಯ್ ನೇನೆ ಅವರು ಕೂಡ ಶುಭ್​​ಮನ್ ಗಿಲ್ ಅವರು ನರಗಳ ಸೆಳೆತದಿಂದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ಅಭಯ್ ನೇನೆ ಅವರು ಕೂಡ ಶುಭ್​​ಮನ್ ಗಿಲ್ ಅವರು ನರಗಳ ಸೆಳೆತದಿಂದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

4 / 5
ಅಲ್ಲದೆ ಮುಂದಿನ ವರ್ಷ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದದ ಸರಣಿಯ ಮೂಲಕ ಶುಭ್​​ಮನ್ ಗಿಲ್ ಮತ್ತೆ ಮರಳುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಭಾರತ ತಂಡದಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಅಲ್ಲದೆ ಮುಂದಿನ ವರ್ಷ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದದ ಸರಣಿಯ ಮೂಲಕ ಶುಭ್​​ಮನ್ ಗಿಲ್ ಮತ್ತೆ ಮರಳುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಭಾರತ ತಂಡದಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

5 / 5

Published On - 12:54 pm, Sun, 23 November 25

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್