AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷದವರೆಗೆ ಶುಭ್​ಮನ್ ಗಿಲ್ ತಂಡದಿಂದ ಔಟ್..!

Shubman Gill: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಶುಭ್​ಮನ್ ಗಿಲ್ ಅವರ ವೈದ್ಯಕೀಯ ವರದಿಗಳು ಇದೀಗ ಬಿಸಿಸಿಐ ಆಯ್ಕೆ ಸಮಿತಿ ಕೈ ಸೇರಿದೆ. ಈ ವರದಿಯಲ್ಲಿ ಅವರಿಗೆ ನರಗಳ ಸೆಳೆತವಿರುವುದನ್ನು ಪ್ರಸ್ತಾಪಿಸಲಾಗಿದ್ದು, ಹೀಗಾಗಿ ಕನಿಷ್ಠ 1 ತಿಂಗಳುಗಳ ಕಾಲ ವಿಶ್ರಾಂತಿ ನೀಡುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on:Nov 23, 2025 | 12:58 PM

Share
ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ (Shubman Gill) ಮತ್ತೆ ಕಣಕ್ಕಿಳಿಯಲು ಮುಂದಿನ ವರ್ಷದವರೆಗೆ ಕಾಯಬೇಕಿದೆ. ಏಕೆಂದರೆ ಗಿಲ್ ನರಗಳ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ ತಂಡದ ನಾಯಕ ಶುಭ್​​ಮನ್ ಗಿಲ್ (Shubman Gill) ಮತ್ತೆ ಕಣಕ್ಕಿಳಿಯಲು ಮುಂದಿನ ವರ್ಷದವರೆಗೆ ಕಾಯಬೇಕಿದೆ. ಏಕೆಂದರೆ ಗಿಲ್ ನರಗಳ ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಶುಭ್​​ಮನ್ ಗಿಲ್ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದರು.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನ ಬ್ಯಾಟಿಂಗ್ ವೇಳೆ ಶುಭ್​​ಮನ್ ಗಿಲ್ ಅವರು ಕುತ್ತಿಗೆ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮೈದಾನ ತೊರೆದಿದ್ದರು.

2 / 5
ಇದಾದ ಬಳಿಕ ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದ ಶುಭ್​​ಮನ್ ಗಿಲ್ ಅವರ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ನರಗಳಲ್ಲಿ ಸೆಳೆತವಿರುವುದು ಕಂಡು ಬಂದಿದೆ. ಅಲ್ಲಿ ಚಿಕಿತ್ಸೆ ಪಡೆದ ಬಳಿಕ ಗಿಲ್ ಮುಂಬೈನ ಖ್ಯಾತ ವೈದ್ಯ ಡಾ. ಅಭಯ್ ನೇನೆ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. 

ಇದಾದ ಬಳಿಕ ಕೊಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದ ಶುಭ್​​ಮನ್ ಗಿಲ್ ಅವರ ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ನರಗಳಲ್ಲಿ ಸೆಳೆತವಿರುವುದು ಕಂಡು ಬಂದಿದೆ. ಅಲ್ಲಿ ಚಿಕಿತ್ಸೆ ಪಡೆದ ಬಳಿಕ ಗಿಲ್ ಮುಂಬೈನ ಖ್ಯಾತ ವೈದ್ಯ ಡಾ. ಅಭಯ್ ನೇನೆ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. 

3 / 5
ಅಭಯ್ ನೇನೆ ಅವರು ಕೂಡ ಶುಭ್​​ಮನ್ ಗಿಲ್ ಅವರು ನರಗಳ ಸೆಳೆತದಿಂದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ಅಭಯ್ ನೇನೆ ಅವರು ಕೂಡ ಶುಭ್​​ಮನ್ ಗಿಲ್ ಅವರು ನರಗಳ ಸೆಳೆತದಿಂದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

4 / 5
ಅಲ್ಲದೆ ಮುಂದಿನ ವರ್ಷ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದದ ಸರಣಿಯ ಮೂಲಕ ಶುಭ್​​ಮನ್ ಗಿಲ್ ಮತ್ತೆ ಮರಳುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಭಾರತ ತಂಡದಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಅಲ್ಲದೆ ಮುಂದಿನ ವರ್ಷ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದದ ಸರಣಿಯ ಮೂಲಕ ಶುಭ್​​ಮನ್ ಗಿಲ್ ಮತ್ತೆ ಮರಳುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಭಾರತ ತಂಡದಿಂದ ಗಿಲ್ ಹೊರಗುಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

5 / 5

Published On - 12:54 pm, Sun, 23 November 25

Follow Us
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್