AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಶುಭ್​ಮನ್ ಗಿಲ್… ಅಹಮದಾಬಾದ್​ನ ಪ್ರಿನ್ಸ್​ ವಿದೇಶದಲ್ಲಿ ಠುಸ್

Shubman Gill: ಟೀಮ್ ಇಂಡಿಯಾದ ಭರವಸೆಯ ಯುವ ದಾಂಡಿಗ ಶುಭ್​​ಮನ್ ಗಿಲ್ ಕಳಪೆ ಫಾರ್ಮ್​​ನಿಂದ ಬಳಲುತ್ತಿದ್ದಾರೆ. ಅದರಲ್ಲೂ ವಿದೇಶಿ ಪಂದ್ಯಗಳಲ್ಲಿ ರನ್​ಗಳಿಸಲು ತಡಕಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಮೂರು ಇನಿಂಗ್ಸ್ ಆಡಿರುವ ಶುಭ್​​ಮನ್ ಗಿಲ್ ಕಲೆಹಾಕಿರುವುದು ಕೇವಲ 60 ರನ್​ಗಳು ಮಾತ್ರ.

ಝಾಹಿರ್ ಯೂಸುಫ್
|

Updated on: Dec 21, 2024 | 9:08 AM

Share
ಶುಭ್​ಮನ್ ಗಿಲ್... ಹದಿ ಹರೆಯದಲ್ಲೇ ಕ್ರಿಕೆಟ್ ಅಂಗಳದಲ್ಲಿ ಸಂಚಲನ ಸೃಷ್ಟಿಸಿದ್ದ ಗಿಲ್ ಇದೀಗ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಅದರಲ್ಲೂ ಏಷ್ಯಾದ ಹೊರಗೆ ರನ್​ಗಳಿಸಲು ಟೀಮ್ ಇಂಡಿಯಾ ಬ್ಯಾಟರ್ ಪರದಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

ಶುಭ್​ಮನ್ ಗಿಲ್... ಹದಿ ಹರೆಯದಲ್ಲೇ ಕ್ರಿಕೆಟ್ ಅಂಗಳದಲ್ಲಿ ಸಂಚಲನ ಸೃಷ್ಟಿಸಿದ್ದ ಗಿಲ್ ಇದೀಗ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಅದರಲ್ಲೂ ಏಷ್ಯಾದ ಹೊರಗೆ ರನ್​ಗಳಿಸಲು ಟೀಮ್ ಇಂಡಿಯಾ ಬ್ಯಾಟರ್ ಪರದಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

1 / 6
2021ರ ಬಳಿಕ ಏಷ್ಯಾದ ಹೊರಗೆ ಆಡಿದ 16 ಇನಿಂಗ್ಸ್​ಗಳಲ್ಲಿ ಶುಭ್​ಮನ್ ಗಿಲ್ ಕಲೆಹಾಕಿರುವುದು ಕೇವಲ 267 ರನ್​ಗಳು ಮಾತ್ರ. ಈ ವೇಳೆ ಒಂದೇ ಒಂದು ಅರ್ಧಶತಕವನ್ನು ಸಹ ಬಾರಿಸಲು ಸಾಧ್ಯವಾಗಿಲ್ಲ. ಅಂದರೆ ಕೇವಲ 17.80ರ ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದಾರೆ.

2021ರ ಬಳಿಕ ಏಷ್ಯಾದ ಹೊರಗೆ ಆಡಿದ 16 ಇನಿಂಗ್ಸ್​ಗಳಲ್ಲಿ ಶುಭ್​ಮನ್ ಗಿಲ್ ಕಲೆಹಾಕಿರುವುದು ಕೇವಲ 267 ರನ್​ಗಳು ಮಾತ್ರ. ಈ ವೇಳೆ ಒಂದೇ ಒಂದು ಅರ್ಧಶತಕವನ್ನು ಸಹ ಬಾರಿಸಲು ಸಾಧ್ಯವಾಗಿಲ್ಲ. ಅಂದರೆ ಕೇವಲ 17.80ರ ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದಾರೆ.

2 / 6
ಅದರಲ್ಲೂ ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಗಿಲ್, ಕಳೆದ 3 ಇನಿಂಗ್ಸ್​ಗಳಲ್ಲಿ ಕಲೆಹಾಕಿರುವುದು ಕೇವಲ 60 ರನ್​ಗಳು ಮಾತ್ರ. ಅಂದರೆ ಎರಡು ಪಂದ್ಯಗಳಲ್ಲಿ ಕೇವಲ 20 ರ ಸರಾಸರಿಯಲ್ಲಿ ಮಾತ್ರ ರನ್ ಗಳಿಸಿದ್ದಾರೆ.

ಅದರಲ್ಲೂ ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಗಿಲ್, ಕಳೆದ 3 ಇನಿಂಗ್ಸ್​ಗಳಲ್ಲಿ ಕಲೆಹಾಕಿರುವುದು ಕೇವಲ 60 ರನ್​ಗಳು ಮಾತ್ರ. ಅಂದರೆ ಎರಡು ಪಂದ್ಯಗಳಲ್ಲಿ ಕೇವಲ 20 ರ ಸರಾಸರಿಯಲ್ಲಿ ಮಾತ್ರ ರನ್ ಗಳಿಸಿದ್ದಾರೆ.

3 / 6
ಹೀಗಾಗಿಯೇ ಇದೀಗ ವಿದೇಶಿ ಪಿಚ್​ನಲ್ಲೂ ಅದ್ಭುತವಾಗಿ ಬ್ಯಾಟ್ ಮಾಡಬಲ್ಲೆ ಎಂಬುದನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಶುಭ್​ಮನ್ ಗಿಲ್​ಗೆ ಎದುರಾಗಿದೆ. ಏಕೆಂದರೆ ಈ ಮೊದಲಿನಿಂದಲೂ ಗಿಲ್ ಅಹಮದಾಬಾದ್​ ಪಿಚ್​ನಲ್ಲಿ ಮಾತ್ರ ಅಬ್ಬರಿಸುತ್ತಾರೆಂಬ ಆರೋಪಗಳಿದ್ದವು.

ಹೀಗಾಗಿಯೇ ಇದೀಗ ವಿದೇಶಿ ಪಿಚ್​ನಲ್ಲೂ ಅದ್ಭುತವಾಗಿ ಬ್ಯಾಟ್ ಮಾಡಬಲ್ಲೆ ಎಂಬುದನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಶುಭ್​ಮನ್ ಗಿಲ್​ಗೆ ಎದುರಾಗಿದೆ. ಏಕೆಂದರೆ ಈ ಮೊದಲಿನಿಂದಲೂ ಗಿಲ್ ಅಹಮದಾಬಾದ್​ ಪಿಚ್​ನಲ್ಲಿ ಮಾತ್ರ ಅಬ್ಬರಿಸುತ್ತಾರೆಂಬ ಆರೋಪಗಳಿದ್ದವು.

4 / 6
ಇದನ್ನು ಪುಷ್ಠೀಕರಿಸುವಂತೆ ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗಿಲ್ ಅವರ ಬ್ಯಾಟಿಂಗ್ ಸರಾಸರಿ ಅದ್ಭುತವಾಗಿದೆ. ಅಂದರೆ 2021 ರಿಂದ 2024 ರವರೆಗೆ ಗಿಲ್ ಅಹಮದಾಬಾದ್​ನಲ್ಲಿ 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಬರೋಬ್ಬರಿ 1079 ರನ್​ಗಳು. ಅಲ್ಲದೆ 4 ಶತಕಗಳನ್ನು ಸಹ ಬಾರಿಸಿದ್ದಾರೆ.

ಇದನ್ನು ಪುಷ್ಠೀಕರಿಸುವಂತೆ ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗಿಲ್ ಅವರ ಬ್ಯಾಟಿಂಗ್ ಸರಾಸರಿ ಅದ್ಭುತವಾಗಿದೆ. ಅಂದರೆ 2021 ರಿಂದ 2024 ರವರೆಗೆ ಗಿಲ್ ಅಹಮದಾಬಾದ್​ನಲ್ಲಿ 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಬರೋಬ್ಬರಿ 1079 ರನ್​ಗಳು. ಅಲ್ಲದೆ 4 ಶತಕಗಳನ್ನು ಸಹ ಬಾರಿಸಿದ್ದಾರೆ.

5 / 6
ಅಂದರೆ ಅಹದಾಬಾದ್​ನಲ್ಲಿ ಆಡಿದ ಕಳೆದ 19 ಪಂದ್ಯಗಳಲ್ಲಿ 71.93 ಸರಾಸರಿಯಲ್ಲಿ ರನ್ ಕಲೆಹಾಕಿರುವ ಶುಭ್​ಮನ್ ಗಿಲ್, ಏಷ್ಯಾದ ಹೊರಗೆ 16 ಇನಿಂಗ್ಸ್​ಗಳಿಂದ ಗಳಿಸಿದ್ದು 267 ರನ್​ಗಳು ಮಾತ್ರ. ಅದು ಸಹ ಕೇವಲ 17.80 ರ ಸರಾಸರಿಯಲ್ಲಿ... ಹೀಗಾಗಿಯೇ ಅಹದಾಬಾದ್​ನ ಪ್ರಿನ್ಸ್ ವಿದೇಶದಲ್ಲಿ ಠುಸ್ ಎಂಬ ಟೀಕೆಗಳು ಕೇಳಿ ಬರಲಾರಂಭಿಸಿದೆ.

ಅಂದರೆ ಅಹದಾಬಾದ್​ನಲ್ಲಿ ಆಡಿದ ಕಳೆದ 19 ಪಂದ್ಯಗಳಲ್ಲಿ 71.93 ಸರಾಸರಿಯಲ್ಲಿ ರನ್ ಕಲೆಹಾಕಿರುವ ಶುಭ್​ಮನ್ ಗಿಲ್, ಏಷ್ಯಾದ ಹೊರಗೆ 16 ಇನಿಂಗ್ಸ್​ಗಳಿಂದ ಗಳಿಸಿದ್ದು 267 ರನ್​ಗಳು ಮಾತ್ರ. ಅದು ಸಹ ಕೇವಲ 17.80 ರ ಸರಾಸರಿಯಲ್ಲಿ... ಹೀಗಾಗಿಯೇ ಅಹದಾಬಾದ್​ನ ಪ್ರಿನ್ಸ್ ವಿದೇಶದಲ್ಲಿ ಠುಸ್ ಎಂಬ ಟೀಕೆಗಳು ಕೇಳಿ ಬರಲಾರಂಭಿಸಿದೆ.

6 / 6
Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ