AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟಿ20 ಸರಣಿಯಿಂದ ಹೊರಬಿದ್ದ ಶುಭ್​ಮನ್ ಗಿಲ್! ಇಂಜುರಿಯೋ, ಉದ್ದೇಶಪೂರ್ವಕವೋ?

Shubman Gill injury update: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯಿಂದ ಶುಭ್‌ಮನ್ ಗಿಲ್ ಗಾಯಗೊಂಡು ಹೊರಬಿದ್ದಿದ್ದಾರೆ. ಲಕ್ನೋದಲ್ಲಿ ನಡೆಯುವ ನಾಲ್ಕನೇ ಪಂದ್ಯಕ್ಕೂ ಮುನ್ನ ಉಪನಾಯಕ ಗಿಲ್‌ಗೆ ಕಾಲಿನ ಗಾಯವಾಗಿದೆ ಎಂದು ವರದಿಯಾಗಿದೆ. ಅವರ ಕಳಪೆ ಫಾರ್ಮ್ ವಿಶ್ವಕಪ್‌ಗೆ ಕಳವಳ ತಂದಿದ್ದು, ಸರಣಿಯಿಂದ ಗಿಲ್ ಹೊರಬಿದ್ದಿರುವುದು ಸಂಜು ಸ್ಯಾಮ್ಸನ್​ಗೆ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ಬಿಸಿಸಿಐ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.

ಪೃಥ್ವಿಶಂಕರ
|

Updated on:Dec 17, 2025 | 7:40 PM

Share
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಪಾಳಯದಿಂದ ಆಘಾತಕ್ಕಾರಿ ಸುದ್ದಿ ಹೊರಬಿದ್ದಿದ್ದು, ತಂಡದ ಉಪನಾಯಕ ಶುಭ್​ಮನ್ ಗಿಲ್ ಟಿ20 ಸರಣಿಯ ಉಳಿದ ಪಂದ್ಯದಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಈ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಪಾಳಯದಿಂದ ಆಘಾತಕ್ಕಾರಿ ಸುದ್ದಿ ಹೊರಬಿದ್ದಿದ್ದು, ತಂಡದ ಉಪನಾಯಕ ಶುಭ್​ಮನ್ ಗಿಲ್ ಟಿ20 ಸರಣಿಯ ಉಳಿದ ಪಂದ್ಯದಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

1 / 6
ಶುಭ್​ಮನ್ ಗಿಲ್ ಸರಣಿಯಿಂದ ಹೊರಬೀಳಲು ಕಾರಣ ಏನು ಎಂಬುದರ ಬಗ್ಗೆ ಬಿಸಿಸಿಐ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಲಾಗಿಲ್ಲ. ಆದಾಗ್ಯೂ ನಾಲ್ಕನೇ ಟಿ20 ಪಂದ್ಯ ನಡೆಯುವ ಹಿಂದಿನ ದಿನದ ಅಭ್ಯಾಸದ ವೇಳೆ ಶುಭ್​ಮನ್ ಗಿಲ್ ಗಾಯಕ್ಕೆ ತುತ್ತಾಗಿದ್ದು, ಈ ಕಾರಣದಿಂದಾಗಿ ಅವರು ಹೊರಗುಳಿದಿದ್ದಾರೆ. ಆದಾಗ್ಯೂ ಅವರ ಬದಲಿಯಾಗಿ ಇದುವರೆಗೂ ಯಾರನ್ನೂ ತಂಡಕ್ಕೆ ಸೇರಿಸಿಕೊಂಡಿಲ್ಲ.

ಶುಭ್​ಮನ್ ಗಿಲ್ ಸರಣಿಯಿಂದ ಹೊರಬೀಳಲು ಕಾರಣ ಏನು ಎಂಬುದರ ಬಗ್ಗೆ ಬಿಸಿಸಿಐ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಲಾಗಿಲ್ಲ. ಆದಾಗ್ಯೂ ನಾಲ್ಕನೇ ಟಿ20 ಪಂದ್ಯ ನಡೆಯುವ ಹಿಂದಿನ ದಿನದ ಅಭ್ಯಾಸದ ವೇಳೆ ಶುಭ್​ಮನ್ ಗಿಲ್ ಗಾಯಕ್ಕೆ ತುತ್ತಾಗಿದ್ದು, ಈ ಕಾರಣದಿಂದಾಗಿ ಅವರು ಹೊರಗುಳಿದಿದ್ದಾರೆ. ಆದಾಗ್ಯೂ ಅವರ ಬದಲಿಯಾಗಿ ಇದುವರೆಗೂ ಯಾರನ್ನೂ ತಂಡಕ್ಕೆ ಸೇರಿಸಿಕೊಂಡಿಲ್ಲ.

2 / 6
ಪಿಟಿಐ ವರದಿಯ ಪ್ರಕಾರ, ಶುಭ್​ಮನ್ ಗಿಲ್ ಕಾಲಿನ ಗಾಯದಿಂದಾಗಿ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ತಂಡದ ಆಪ್ತ ಮೂಲಗಳು ಪಿಟಿಐಗೆ ತಿಳಿಸಿರುವ ಪ್ರಕಾರ, ಭಾರತದ ಉಪನಾಯಕ ಶುಭಮನ್ ಗಿಲ್ ಕಾಲಿನ ಗಾಯದಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಎರಡು ಟಿ20 ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ.

ಪಿಟಿಐ ವರದಿಯ ಪ್ರಕಾರ, ಶುಭ್​ಮನ್ ಗಿಲ್ ಕಾಲಿನ ಗಾಯದಿಂದಾಗಿ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ತಂಡದ ಆಪ್ತ ಮೂಲಗಳು ಪಿಟಿಐಗೆ ತಿಳಿಸಿರುವ ಪ್ರಕಾರ, ಭಾರತದ ಉಪನಾಯಕ ಶುಭಮನ್ ಗಿಲ್ ಕಾಲಿನ ಗಾಯದಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಎರಡು ಟಿ20 ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿದೆ.

3 / 6
ಇಂಜುರಿಯ ಹೊರತಾಗಿ ಟಿ20 ವಿಶ್ವಕಪ್‌ಗೂ ಮುನ್ನ ಶುಭ್​ಮನ್ ಗಿಲ್ ಅವರ ಫಾರ್ಮ್ ಭಾರತಕ್ಕೆ ಕಳವಳಕಾರಿಯಾಗಿ ಉಳಿದಿದೆ. ಈ ವರ್ಷದ ಏಷ್ಯಾಕಪ್‌ಗೆ ಅವರನ್ನು ಇದ್ದಕ್ಕಿದ್ದಂತೆ ಟಿ20 ತಂಡದ ಉಪನಾಯಕನನ್ನಾಗಿ ನೇಮಿಸಲಾಯಿತು. ಇದರಿಂದಾಗಿ ಸಂಜು ಸ್ಯಾಮ್ಸನ್ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಕಳೆದುಕೊಂಡರು.

ಇಂಜುರಿಯ ಹೊರತಾಗಿ ಟಿ20 ವಿಶ್ವಕಪ್‌ಗೂ ಮುನ್ನ ಶುಭ್​ಮನ್ ಗಿಲ್ ಅವರ ಫಾರ್ಮ್ ಭಾರತಕ್ಕೆ ಕಳವಳಕಾರಿಯಾಗಿ ಉಳಿದಿದೆ. ಈ ವರ್ಷದ ಏಷ್ಯಾಕಪ್‌ಗೆ ಅವರನ್ನು ಇದ್ದಕ್ಕಿದ್ದಂತೆ ಟಿ20 ತಂಡದ ಉಪನಾಯಕನನ್ನಾಗಿ ನೇಮಿಸಲಾಯಿತು. ಇದರಿಂದಾಗಿ ಸಂಜು ಸ್ಯಾಮ್ಸನ್ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಕಳೆದುಕೊಂಡರು.

4 / 6
ಶುಭ್​ಮನ್ ಗಿಲ್ 2025 ರಲ್ಲಿ ಆಡಿದ 15 ಪಂದ್ಯಗಳಲ್ಲಿ 24.25 ರ ಸರಾಸರಿಯಲ್ಲಿ 291 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು ಒಂದೇ ಒಂದು ಅರ್ಧಶತಕವನ್ನು ಗಳಿಸಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. 2025 ರಲ್ಲಿ ಅವರ ಅತ್ಯಧಿಕ ಸ್ಕೋರ್ 47 ಆಗಿದ್ದು, ಟಿ20 ವಿಶ್ವಕಪ್ ಸಮೀಪಿಸುವ ಸಮಯದಲ್ಲಿ ಅವರ ಕಳಪೆ ಫಾರ್ಮ್​ ಮ್ಯಾನೇಜ್​ಮೆಂಟ್​ಗೆ ಕಳವಳಕಾರಿಯಾಗಿದೆ.

ಶುಭ್​ಮನ್ ಗಿಲ್ 2025 ರಲ್ಲಿ ಆಡಿದ 15 ಪಂದ್ಯಗಳಲ್ಲಿ 24.25 ರ ಸರಾಸರಿಯಲ್ಲಿ 291 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು ಒಂದೇ ಒಂದು ಅರ್ಧಶತಕವನ್ನು ಗಳಿಸಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. 2025 ರಲ್ಲಿ ಅವರ ಅತ್ಯಧಿಕ ಸ್ಕೋರ್ 47 ಆಗಿದ್ದು, ಟಿ20 ವಿಶ್ವಕಪ್ ಸಮೀಪಿಸುವ ಸಮಯದಲ್ಲಿ ಅವರ ಕಳಪೆ ಫಾರ್ಮ್​ ಮ್ಯಾನೇಜ್​ಮೆಂಟ್​ಗೆ ಕಳವಳಕಾರಿಯಾಗಿದೆ.

5 / 6
ಮತ್ತೊಂದೆಡೆ, ಸಂಜು ಸ್ಯಾಮ್ಸನ್ 2024 ರ ಟಿ20 ವಿಶ್ವಕಪ್ ನಂತರ ತಂಡದಲ್ಲಿ ಆರಂಭಿಕ ಆಟಗಾರನಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದಲ್ಲದೆ ಉತ್ತಮ ಪ್ರದರ್ಶನವನ್ನು ನೀಡಿದ್ದರು. 2024 ರಲ್ಲಿ ಸ್ಯಾಮ್ಸನ್ ಆಡಿದ 13 ಪಂದ್ಯಗಳಲ್ಲಿ 43.60 ಸರಾಸರಿಯಲ್ಲಿ 436 ರನ್ ಗಳಿಸಿದ್ದಾರೆ, ಇದರಲ್ಲಿ ಮೂರು ಶತಕಗಳು ಸೇರಿವೆ. ಆದಾಗ್ಯೂ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಇದೀಗ ಸಂಜು ಗಾಯಗೊಂಡಿರುವುದರಿಂದ ಸಂಜುಗೆ ತಂಡದಲ್ಲಿ ಸ್ಥಾನ ಸಿಗಬಹುದು.

ಮತ್ತೊಂದೆಡೆ, ಸಂಜು ಸ್ಯಾಮ್ಸನ್ 2024 ರ ಟಿ20 ವಿಶ್ವಕಪ್ ನಂತರ ತಂಡದಲ್ಲಿ ಆರಂಭಿಕ ಆಟಗಾರನಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದಲ್ಲದೆ ಉತ್ತಮ ಪ್ರದರ್ಶನವನ್ನು ನೀಡಿದ್ದರು. 2024 ರಲ್ಲಿ ಸ್ಯಾಮ್ಸನ್ ಆಡಿದ 13 ಪಂದ್ಯಗಳಲ್ಲಿ 43.60 ಸರಾಸರಿಯಲ್ಲಿ 436 ರನ್ ಗಳಿಸಿದ್ದಾರೆ, ಇದರಲ್ಲಿ ಮೂರು ಶತಕಗಳು ಸೇರಿವೆ. ಆದಾಗ್ಯೂ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಇದೀಗ ಸಂಜು ಗಾಯಗೊಂಡಿರುವುದರಿಂದ ಸಂಜುಗೆ ತಂಡದಲ್ಲಿ ಸ್ಥಾನ ಸಿಗಬಹುದು.

6 / 6

Published On - 7:39 pm, Wed, 17 December 25

ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ