AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ದ್ವಿತೀಯ ಟೆಸ್ಟ್​ಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಡೌಟ್

India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಮುಗಿದಿದೆ. ಕೊಲ್ಕತ್ತಾದಲ್ಲಿ ನಡೆದ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡ 30 ರನ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಗುವಾಹಟಿಯ ಬರ್ಸಪಾರ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: Nov 17, 2025 | 2:54 PM

Share
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ. ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಮೊದಲ ಮ್ಯಾಚ್​ನಲ್ಲಿ ಸೋತಿರುವ ಭಾರತ ತಂಡವು ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ ಈ ಮ್ಯಾಚ್​ನಲ್ಲಿ ಗೆಲ್ಲಲೇಬೇಕು.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ. ಗುವಾಹಟಿಯ ಬರ್ಸಪಾರ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಮೊದಲ ಮ್ಯಾಚ್​ನಲ್ಲಿ ಸೋತಿರುವ ಭಾರತ ತಂಡವು ಸರಣಿ ಸೋಲನ್ನು ತಪ್ಪಿಸಿಕೊಳ್ಳಬೇಕಿದ್ದರೆ ಈ ಮ್ಯಾಚ್​ನಲ್ಲಿ ಗೆಲ್ಲಲೇಬೇಕು.

1 / 6
ಆದರೆ ಈ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ಶುಭ್​ಮನ್ ಗಿಲ್ ಕಣಕ್ಕಿಳಿಯುವುದು ಡೌಟ್. ಏಕೆಂದರೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿನ ಸಮಸ್ಯೆಗೀಡಾದ  ಗಿಲ್  ಮೊದಲ ಇನಿಂಗ್ಸ್ ಬಳಿಕ ಮೈದಾನದಲ್ಲಿ ಕಾಣಿಸಿಕೊಂಡಿರಲಿಲ್ಲ. 

ಆದರೆ ಈ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ಶುಭ್​ಮನ್ ಗಿಲ್ ಕಣಕ್ಕಿಳಿಯುವುದು ಡೌಟ್. ಏಕೆಂದರೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಕುತ್ತಿಗೆ ನೋವಿನ ಸಮಸ್ಯೆಗೀಡಾದ  ಗಿಲ್  ಮೊದಲ ಇನಿಂಗ್ಸ್ ಬಳಿಕ ಮೈದಾನದಲ್ಲಿ ಕಾಣಿಸಿಕೊಂಡಿರಲಿಲ್ಲ. 

2 / 6
ಕುತ್ತಿಗೆ ಭಾಗದ ಸ್ನಾಯು ಸೆಳೆತದ ನೋವಿನಿಂದಾಗಿ ಮೊದಲ ಇನಿಂಗ್ಸ್ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿಯೇ ಅವರು ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್​ಗೆ ಬಂದಿರಲಿಲ್ಲ. ಇದೀಗ ಗಿಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇದಾಗ್ಯೂ ಮತ್ತೆ ಕಣಕ್ಕಿಳಿಯಲು ಅವರು ಸಂಪೂರ್ಣ ಫಿಟ್​ ಆಗಿಲ್ಲ ಎಂದು ವರದಿಯಾಗಿದೆ.

ಕುತ್ತಿಗೆ ಭಾಗದ ಸ್ನಾಯು ಸೆಳೆತದ ನೋವಿನಿಂದಾಗಿ ಮೊದಲ ಇನಿಂಗ್ಸ್ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿಯೇ ಅವರು ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್​ಗೆ ಬಂದಿರಲಿಲ್ಲ. ಇದೀಗ ಗಿಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇದಾಗ್ಯೂ ಮತ್ತೆ ಕಣಕ್ಕಿಳಿಯಲು ಅವರು ಸಂಪೂರ್ಣ ಫಿಟ್​ ಆಗಿಲ್ಲ ಎಂದು ವರದಿಯಾಗಿದೆ.

3 / 6
ಪ್ರಸ್ತುತ ಮಾಹಿತಿ ಪ್ರಕಾರ, ಶುಭ್​​ಮನ್ ಗಿಲ್ ಅವರಿಗೆ ವೈದ್ಯರು 4 ರಿಂದ 5 ದಿನಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಅತ್ತ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ. ಹೀಗಾಗಿ ಗುವಾಹಟಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಶುಭ್​​ಮನ್ ಗಿಲ್ ಅವರಿಗೆ ವೈದ್ಯರು 4 ರಿಂದ 5 ದಿನಗಳ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಅತ್ತ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ. ಹೀಗಾಗಿ ಗುವಾಹಟಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ.

4 / 6
ಇನ್ನು ಶುಭ್​​ಮನ್ ಗಿಲ್ ಹೊರಗುಳಿದರೆ ಭಾರತ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ. ಹಾಗೆಯೇ ಗಿಲ್ ಸ್ಥಾನದಲ್ಲಿ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸಾಯಿ ಸುದರ್ಶನ್ ಅಥವಾ ದೇವದತ್ ಪಡಿಕ್ಕಲ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. 

ಇನ್ನು ಶುಭ್​​ಮನ್ ಗಿಲ್ ಹೊರಗುಳಿದರೆ ಭಾರತ ತಂಡವನ್ನು ರಿಷಭ್ ಪಂತ್ ಮುನ್ನಡೆಸಲಿದ್ದಾರೆ. ಹಾಗೆಯೇ ಗಿಲ್ ಸ್ಥಾನದಲ್ಲಿ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸಾಯಿ ಸುದರ್ಶನ್ ಅಥವಾ ದೇವದತ್ ಪಡಿಕ್ಕಲ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. 

5 / 6
ಭಾರತ ಟೆಸ್ಟ್​ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್.

ಭಾರತ ಟೆಸ್ಟ್​ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ