
ಭಾರತ ಮತ್ತು ಶ್ರೀಲಂಕಾ XI ನಡುವಿನ 3 ದಿನಗಳ ಅಭ್ಯಾಸ ಪಂದ್ಯದ ಮೂರನೇ ದಿನದಂದು ಶ್ರೀಲಂಕಾ ನೀಡಿರುವ 207 ರನ್ಗಳ ಗುರಿ ಬೆನ್ನಟ್ಟಿರುವ ಟೀಂ ಇಂಡಿಯಾ ಪರ ನಾಯಕ ಶುಭ್ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಆರಂಭಕರಾಗಿ ಕಣಕ್ಕಿಳಿದಿದ್ದಾರೆ. ಗಿಲ್ ಬ್ಯಾಟಿಂಗ್ಗೆ ಇಳಿಯುವ ಮೂಲಕ ತಂಡದಲ್ಲಿ ಮೂಡಿದ್ದ ಆತಂಕವನ್ನು ಶಮನ ಮಾಡಿದ್ದಾರೆ(PC-PTI).

ವಾಸ್ತವವಾಗಿ ಉಭಯ ತಂಡಗಳ ನಡುವಿನ ಅಭ್ಯಾಸ ಪಂದ್ಯ ಆರಂಭಕ್ಕೆ ಒಂದು ದಿನ ಮೊದಲು ಅಭ್ಯಾಸದ ಅವಧಿಯಲ್ಲಿ ಶುಭ್ಮನ್ ಗಿಲ್ ತಮ್ಮ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಇದರಿಂದಾಗಿ ಈ ಅಭ್ಯಾಸ ಪಂದ್ಯದ ಮೊದಲೆರಡು ದಿನ ಗಿಲ್ ಕಣಕ್ಕಿಳಿದಿರಲಿಲ್ಲ. ಗಿಲ್ ಬದಲಿಗೆ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದ್ದರು. ಆದರೆ ಎರಡನೇ ಇನ್ನಿಂಗ್ಸ್ ಗಿಲ್ ಬ್ಯಾಟಿಂಗ್ ಮಾಡಿದ್ದು ತಂಡಕ್ಕೆ ಸಮಾಧಾನ ತಂದಿದೆ(PC-PTI).

ಗಿಲ್ ಗಾಯದ ಬಗ್ಗೆ ಹೇಳಿಕೆ ನೀಡಿದ್ದ ಬಿಸಿಸಿಐ, ‘ಗುರುವಾರ ಭಾರತದ ಅಭ್ಯಾಸದ ಸಮಯದಲ್ಲಿ ನಾಯಕ ಶುಭಮನ್ ಗಿಲ್ ಅವರ ಬಲಗೈ ಉಂಗುರದ ಬೆರಳಿಗೆ ಗಾಯವಾಗಿದೆ. ಮುನ್ನೆಚ್ಚರಿಕೆಯಾಗಿ, ಶ್ರೀಲಂಕಾ XI ವಿರುದ್ಧದ ಅಭ್ಯಾಸ ಪಂದ್ಯದ ಮೊದಲ ದಿನದಂದು ಅವರು ಮೈದಾನಕ್ಕೆ ಇಳಿಯುವುದಿಲ್ಲ. ಗಿಲ್ ಅನುಪಸ್ಥಿತಿಯಲ್ಲಿ, ಉಪನಾಯಕ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ’ ಎಂದಿತ್ತು(PC-PTI).

ಗಿಲ್ ಗಾಯದಿಂದ ಚೇತರಿಸಿಕೊಂಡಿರುವುದು ತಂಡದ ಸಂಕಷ್ಟವನ್ನು ಕೊಂಚ ಕಡಿಮೆ ಮಾಡಿದೆ. ಏಕೆಂದರೆ ತಂಡದಲ್ಲಿ ಈಗಾಗಲೇ ಗಾಯಾಳುಗಳ ಸಂಖ್ಯೆ ಹೆಚ್ಚಿದೆ. ಗಾಯದಿಂದಾಗಿ ಜಸ್ಪ್ರೀತ್ ಬುಮ್ರಾ ಹಾಗೂ ಸಾಯಿ ಸುದರ್ಶನ್ ಸರಣಿಯಿಂದ ಹೊರಗುಳಿದಿದ್ದಾರೆ. ವಾಷಿಂಗ್ಟನ್ ಸುಂದರ್ ಮೊದಲ ಟೆಸ್ಟ್ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಗಿಲ್ ಉಪಸ್ಥಿತಿ ತಂಡಕ್ಕೆ ಅತ್ಯವಶ್ಯಕವಾಗಿತ್ತು(PC-PTI).

ಪಂದ್ಯದ ಬಗ್ಗೆ ಹೇಳುವುದಾದರೆ.. ಎರಡನೇ ಇನ್ನಿಂಗ್ಸ್ನಲ್ಲಿ ಶ್ರೀಲಂಕಾ ತಂಡ 200 ರನ್ಗಳಿಗೆ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಭಾರತದ ಗೆಲುವಿಗೆ 207 ರನ್ಗಳ ಗುರಿ ನೀಡಿದೆ. ಈ ಗುರಿ ಬೆನ್ನಟ್ಟಿರುವ ಜೈಸ್ವಾಲ್ ಹಾಗೂ ಗಿಲ್ ಈ ಸುದ್ದಿ ಬರೆಯುವ ಹೊತ್ತಿಗೆ 100 ರನ್ಗಳ ಜೊತೆಯಾಟವನ್ನಾಡಿದ್ದಾರೆ(PC-PTI).