AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​​ನಲ್ಲಿ ನಾಯಕತ್ವದಿಂದ ಸೂರ್ಯಕುಮಾರ್ ಯಾದವ್ ವಜಾ

Team India Captain: ಭಾರತ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಏಕದಿನ ಹಾಗೂ ಟೆಸ್ಟ್ ತಂಡಗಳಿಗೆ ಶುಭ್​ಮನ್ ಗಿಲ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಟಿ20 ತಂಡದ ಕ್ಯಾಪ್ಟನ್ ಆಗಿ ಸೂರ್ಯಕುಮಾರ್ ಯಾದವ್ ಮುಂದುವರೆದಿದ್ದಾರೆ. ಅತ್ತ ಈ ಹಿಂದೆ ಮೂರು ಸ್ವರೂಪಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ರೋಹಿತ್ ಶರ್ಮಾ ಏಕದಿನ ತಂಡದಲ್ಲಿ ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 05, 2025 | 10:58 AM

Share
ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕ್ಯಾಪ್ಟನ್ ಆಗಿ ಪಾದಾರ್ಪಣೆ ಮಾಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕ್ಯಾಪ್ಟನ್ ಆಗಿ ಪಾದಾರ್ಪಣೆ ಮಾಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

1 / 5
ಇದಕ್ಕೂ ಮುನ್ನ ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇದೀಗ ಈ ಜವಾಬ್ದಾರಿಯುತ ಸ್ಥಾನಗಳನ್ನು ಶುಭ್​ಮನ್ ಗಿಲ್ ಅಲಂಕರಿಸಿದ್ದಾರೆ. ಇನ್ನು ಟಿ20 ತಂಡದ ನಾಯಕತ್ವ ಒಲಿಯಲು ಗಿಲ್ ಮಾರ್ಚ್​ವರೆಗೆ ಕಾಯಲೇಬೇಕು.

ಇದಕ್ಕೂ ಮುನ್ನ ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇದೀಗ ಈ ಜವಾಬ್ದಾರಿಯುತ ಸ್ಥಾನಗಳನ್ನು ಶುಭ್​ಮನ್ ಗಿಲ್ ಅಲಂಕರಿಸಿದ್ದಾರೆ. ಇನ್ನು ಟಿ20 ತಂಡದ ನಾಯಕತ್ವ ಒಲಿಯಲು ಗಿಲ್ ಮಾರ್ಚ್​ವರೆಗೆ ಕಾಯಲೇಬೇಕು.

2 / 5
ಅಂದರೆ 2026ರ ಟಿ20 ವಿಶ್ವಕಪ್​ವರೆಗೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ. ಈ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಅಂದರೆ 2026ರ ಟಿ20 ವಿಶ್ವಕಪ್​ವರೆಗೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ. ಈ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

3 / 5
ಅಲ್ಲದೆ ಮೂರು ಸ್ವರೂಪಗಳಿಗೂ ಏಕೈಕ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಟೆಸ್ಟ್​ ಹಾಗೂ ಏಕದಿನ ತಂಡಗಳ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್​ ಗಿಲ್​ಗೆ ಟಿ20 ತಂಡದ ಕ್ಯಾಪ್ಟನ್ ಪಟ್ಟ ಸಿಗುವುದು ಖಚಿತ ಎನ್ನಬಹುದು. 

ಅಲ್ಲದೆ ಮೂರು ಸ್ವರೂಪಗಳಿಗೂ ಏಕೈಕ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಟೆಸ್ಟ್​ ಹಾಗೂ ಏಕದಿನ ತಂಡಗಳ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್​ ಗಿಲ್​ಗೆ ಟಿ20 ತಂಡದ ಕ್ಯಾಪ್ಟನ್ ಪಟ್ಟ ಸಿಗುವುದು ಖಚಿತ ಎನ್ನಬಹುದು. 

4 / 5
ಈ ಮೂಲಕ ಮೂರು ಸ್ವರೂಪಗಳಲ್ಲೂ ಭಾರತ ತಂಡದ ನಾಯಕನಾಗಿ ಆಯ್ಕೆಯಾದ ಆಟಗಾರ ಎನಿಸಿಕೊಳ್ಳಲು ಶುಭ್​ಮನ್ ಗಿಲ್ ಮಾರ್ಚ್ ತಿಂಗಳವರೆಗೆ ಕಾಯಬೇಕು. ಏಕೆಂದರೆ 2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದ್ದು, ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ.

ಈ ಮೂಲಕ ಮೂರು ಸ್ವರೂಪಗಳಲ್ಲೂ ಭಾರತ ತಂಡದ ನಾಯಕನಾಗಿ ಆಯ್ಕೆಯಾದ ಆಟಗಾರ ಎನಿಸಿಕೊಳ್ಳಲು ಶುಭ್​ಮನ್ ಗಿಲ್ ಮಾರ್ಚ್ ತಿಂಗಳವರೆಗೆ ಕಾಯಬೇಕು. ಏಕೆಂದರೆ 2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದ್ದು, ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ