AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್​​ನಲ್ಲಿ ನಾಯಕತ್ವದಿಂದ ಸೂರ್ಯಕುಮಾರ್ ಯಾದವ್ ವಜಾ

Team India Captain: ಭಾರತ ತಂಡದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಏಕದಿನ ಹಾಗೂ ಟೆಸ್ಟ್ ತಂಡಗಳಿಗೆ ಶುಭ್​ಮನ್ ಗಿಲ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಟಿ20 ತಂಡದ ಕ್ಯಾಪ್ಟನ್ ಆಗಿ ಸೂರ್ಯಕುಮಾರ್ ಯಾದವ್ ಮುಂದುವರೆದಿದ್ದಾರೆ. ಅತ್ತ ಈ ಹಿಂದೆ ಮೂರು ಸ್ವರೂಪಗಳಲ್ಲಿ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ರೋಹಿತ್ ಶರ್ಮಾ ಏಕದಿನ ತಂಡದಲ್ಲಿ ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 05, 2025 | 10:58 AM

Share
ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕ್ಯಾಪ್ಟನ್ ಆಗಿ ಪಾದಾರ್ಪಣೆ ಮಾಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ (Shubman Gill) ಆಯ್ಕೆಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದಿಗೆ ರೆಡ್ ಬಾಲ್ ಕ್ರಿಕೆಟ್​ನಲ್ಲಿ ಕ್ಯಾಪ್ಟನ್ ಆಗಿ ಪಾದಾರ್ಪಣೆ ಮಾಡಿದ್ದ ಗಿಲ್, ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

1 / 5
ಇದಕ್ಕೂ ಮುನ್ನ ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇದೀಗ ಈ ಜವಾಬ್ದಾರಿಯುತ ಸ್ಥಾನಗಳನ್ನು ಶುಭ್​ಮನ್ ಗಿಲ್ ಅಲಂಕರಿಸಿದ್ದಾರೆ. ಇನ್ನು ಟಿ20 ತಂಡದ ನಾಯಕತ್ವ ಒಲಿಯಲು ಗಿಲ್ ಮಾರ್ಚ್​ವರೆಗೆ ಕಾಯಲೇಬೇಕು.

ಇದಕ್ಕೂ ಮುನ್ನ ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇದೀಗ ಈ ಜವಾಬ್ದಾರಿಯುತ ಸ್ಥಾನಗಳನ್ನು ಶುಭ್​ಮನ್ ಗಿಲ್ ಅಲಂಕರಿಸಿದ್ದಾರೆ. ಇನ್ನು ಟಿ20 ತಂಡದ ನಾಯಕತ್ವ ಒಲಿಯಲು ಗಿಲ್ ಮಾರ್ಚ್​ವರೆಗೆ ಕಾಯಲೇಬೇಕು.

2 / 5
ಅಂದರೆ 2026ರ ಟಿ20 ವಿಶ್ವಕಪ್​ವರೆಗೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ. ಈ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಅಂದರೆ 2026ರ ಟಿ20 ವಿಶ್ವಕಪ್​ವರೆಗೆ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ಮುಂದುವರೆಯಲಿದ್ದಾರೆ. ಈ ಟಿ20 ವಿಶ್ವಕಪ್ ಬಳಿಕ ಸೂರ್ಯಕುಮಾರ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗುತ್ತದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

3 / 5
ಅಲ್ಲದೆ ಮೂರು ಸ್ವರೂಪಗಳಿಗೂ ಏಕೈಕ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಟೆಸ್ಟ್​ ಹಾಗೂ ಏಕದಿನ ತಂಡಗಳ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್​ ಗಿಲ್​ಗೆ ಟಿ20 ತಂಡದ ಕ್ಯಾಪ್ಟನ್ ಪಟ್ಟ ಸಿಗುವುದು ಖಚಿತ ಎನ್ನಬಹುದು. 

ಅಲ್ಲದೆ ಮೂರು ಸ್ವರೂಪಗಳಿಗೂ ಏಕೈಕ ನಾಯಕನನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ಟೆಸ್ಟ್​ ಹಾಗೂ ಏಕದಿನ ತಂಡಗಳ ನಾಯಕನಾಗಿ ಆಯ್ಕೆಯಾಗಿರುವ ಶುಭ್​ಮನ್​ ಗಿಲ್​ಗೆ ಟಿ20 ತಂಡದ ಕ್ಯಾಪ್ಟನ್ ಪಟ್ಟ ಸಿಗುವುದು ಖಚಿತ ಎನ್ನಬಹುದು. 

4 / 5
ಈ ಮೂಲಕ ಮೂರು ಸ್ವರೂಪಗಳಲ್ಲೂ ಭಾರತ ತಂಡದ ನಾಯಕನಾಗಿ ಆಯ್ಕೆಯಾದ ಆಟಗಾರ ಎನಿಸಿಕೊಳ್ಳಲು ಶುಭ್​ಮನ್ ಗಿಲ್ ಮಾರ್ಚ್ ತಿಂಗಳವರೆಗೆ ಕಾಯಬೇಕು. ಏಕೆಂದರೆ 2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದ್ದು, ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ.

ಈ ಮೂಲಕ ಮೂರು ಸ್ವರೂಪಗಳಲ್ಲೂ ಭಾರತ ತಂಡದ ನಾಯಕನಾಗಿ ಆಯ್ಕೆಯಾದ ಆಟಗಾರ ಎನಿಸಿಕೊಳ್ಳಲು ಶುಭ್​ಮನ್ ಗಿಲ್ ಮಾರ್ಚ್ ತಿಂಗಳವರೆಗೆ ಕಾಯಬೇಕು. ಏಕೆಂದರೆ 2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿದ್ದು, ಈ ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಸ್ಥಾನಕ್ಕೆ ಶುಭ್​ಮನ್ ಗಿಲ್ ಆಯ್ಕೆಯಾಗಲಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!